ಮತ್ತೆ ಮಂಗನ ಖಾಯಿಲೆ ಆತಂಕ… ಇಂದು ಎ.ಸಿ. ಅಧ್ಯಕ್ಷತೆಯಲ್ಲಿ ಸಿದ್ಧಾಪುರದಲ್ಲಿ ಸಭೆ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕೆಎಫ್​ಡಿ ಪ್ರಕರಣ ಪತ್ತೆ, ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ತೀರ್ಥಹಳ್ಳಿ ತಾಲೂಕಿನ ಅತ್ತಿಸರ ಗ್ರಾಮದಲ್ಲಿ ಕಳೆದ ಗುರುವಾರ ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್​ ಡಿಸೀಸ್) ​ಮೊದಲ ಪ್ರಕರಣ ಪತ್ತೆಯಾಗಿದೆ.

File photo

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಅತ್ತಿಸರ ಗ್ರಾಮದಲ್ಲಿ ಕಳೆದ ಗುರುವಾರ ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್​ ಡಿಸೀಸ್) ​ಮೊದಲ ಪ್ರಕರಣ ಪತ್ತೆಯಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ರಾಜೇಶ್ ಸುರಗಿಹಳ್ಳಿ ಅವರು ಇದನ್ನು ದೃಢಪಡಿಸಿದ್ದಾರೆ. 53 ವರ್ಷದ ಮಹಿಳೆಯಲ್ಲಿ ಕೆಎಫ್​ಡಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಡಿಸೆಂಬರ್ 10 ರಂದು ಮಹಿಳೆಗೆ ಜ್ವರ ಕಾಣಿಸಿಕೊಂಡಿದ್ದು, ಕೆಲ ದಿನಗಳು ಕಳೆದರೂ ಜ್ವರ ಕಡಿಮೆಯಾಗಿರಲಿಲ್ಲ. ಈ ವೇಳೆ ವೈದ್ಯರು ಪರೀಕ್ಷೆ ನಡೆಸಿದ್ದು, ವರದಿಯಲ್ಲಿ ಕೆಎಫ್’ಡಿ ಪಾಸಿಟಿವ್ ಬಂದಿದೆ. ಇದೀಗ ಮಹಿಳೆಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 5 ದಿನಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ,

ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಮೊದಲ ಬಾರಿಗೆ ಕಾಣಿಸಿಕೊಂಡಿದ್ದು ಸೊರಬ ತಾಲೂಕು ಕ್ಯಾಸನೂರು ಗ್ರಾಮದಲ್ಲಿ. ಅದು 1960ರ ಅಸುಪಾಸು. ಹಾಗಾಗಿ ಇದಕ್ಕೆ ಕೆಎಫ್​ಡಿ ಕಾಯಿಲೆ ಎಂದು ಕರೆಯುತ್ತಾರೆ. ನಂತರ ಈ ರೋಗ ಜಿಲ್ಲೆಯ ಮುಖ್ಯವಾಗಿ ಕಾಡು ಪ್ರದೇಶದಲ್ಲಿ ಕಂಡು ಬರಲು ಪ್ರಾರಂಭಿಸಿತು. ಕಾಡಿನಲ್ಲಿ ಇರುವ ಸಣ್ಣ ಗಾತ್ರದ ಉಣ್ಣೆಗಳು ಮನುಷ್ಯನಿಗೆ ಕಚ್ಚಿದರೆ, ಕೆಎಫ್​ಡಿ ರೋಗ ಮನುಷ್ಯನಿಗೆ ಬರುತ್ತದೆ. ಉಣ್ಣೆಯ ವಾಹಕವಾಗಿ ಪ್ರಾಣಿಗಳು ಕೆಲಸ ಮಾಡುತ್ತಿವೆ.

ಉಣ್ಣೆಗಳು ಪ್ರಮುಖವಾಗಿ ಕಾಡಿನಲ್ಲಿನ ಮಂಗಗಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಎಲ್ಲಿ ಮಂಗಗಳು ಸಾಯುತ್ತವೆಯೋ ಅಲ್ಲಿ ಈ ಉಣ್ಣೆಗಳು ಬೇರೆ ಪ್ರಾಣಿಗಳ ದೇಹವನ್ನು ಆಶ್ರಿಯಿಸುತ್ತವೆ. ಇದಕ್ಮೆ ಇದನ್ನು ಮಂಗನ ಕಾಯಿಲೆ ಎಂದು ಕರೆಯುತ್ತಾರೆ.

ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಮೊದಲ ಬಾರಿಗೆ ಕಾಣಿಸಿಕೊಂಡಿದ್ದು ಸೊರಬ ತಾಲೂಕು ಕ್ಯಾಸನೂರು ಗ್ರಾಮದಲ್ಲಿ. ಅದು 1960ರ ಅಸುಪಾಸು. ಹಾಗಾಗಿ ಇದಕ್ಕೆ ಕೆಎಫ್​ಡಿ ಕಾಯಿಲೆ ಎಂದು ಕರೆಯುತ್ತಾರೆ. ನಂತರ ಈ ರೋಗ ಜಿಲ್ಲೆಯ ಮುಖ್ಯವಾಗಿ ಕಾಡು ಪ್ರದೇಶದಲ್ಲಿ ಕಂಡು ಬರಲು ಪ್ರಾರಂಭಿಸಿತು. ಕಾಡಿನಲ್ಲಿ ಇರುವ ಸಣ್ಣ ಗಾತ್ರದ ಉಣ್ಣೆಗಳು ಮನುಷ್ಯನಿಗೆ ಕಚ್ಚಿದರೆ, ಕೆಎಫ್​ಡಿ ರೋಗ ಮನುಷ್ಯನಿಗೆ ಬರುತ್ತದೆ. ಉಣ್ಣೆಯ ವಾಹಕವಾಗಿ ಪ್ರಾಣಿಗಳು ಕೆಲಸ ಮಾಡುತ್ತಿವೆ.

ಕಾಡಂಚಿನ ಗ್ರಾಮಗಳ ಪ್ರಾಣಿಗಳು ಕಾಡಿಗೆ ಹೋದಾಗ ಈ ಉಣ್ಣೆಗಳು ಎಮ್ಮೆ, ಹಸು, ಕುರಿ, ಮೇಕೆಗಳ ಮೂಲಕ ಗ್ರಾಮಕ್ಕೆ ಬರುತ್ತವೆ. ಹಸು, ಮೇಕೆ, ಕುರಿಗಳು ಮನುಷ್ಯನ ಸಂಪರ್ಕಕ್ಕೆ ಬಂದು ಉಣ್ಣೆಗಳು ಮನುಷ್ಯನಿಗೆ ಕಚ್ಚಿದಾಗ ಮನುಷ್ಯನಲ್ಲಿ ಜ್ವರ ಕಾಣಿಸಿಕೊಳ್ಳುತ್ತದೆ. ಈ ಜ್ವರ ಬಂದವರ ರಕ್ತ ಪರೀಕ್ಷೆ ನಡೆಸಿದಾಗ ಅವರಲ್ಲಿ ಕೆಎಫ್​ಡಿ ಪಾಸಿಟಿವ್, ಇಲ್ಲ ನೆಗೆಟಿವ್​ ಪತ್ತೆಯಾಗುತ್ತದೆ.

ನಿರಂತರ ನಾಲ್ಕೈದು ದಿನ ಜ್ವರ ಹೋಗದೆ ಇದ್ದರೆ, ಅವರು ತಕ್ಷಣ ರಕ್ತ ಪರೀಕ್ಷೆ ಮಾಡಿಸಬೇಕಿದೆ. ಈ ರೋಗವು, ಶಿವಮೊಗ್ಗ ಜಿಲ್ಲೆ ಅಲ್ಲದೆ, ಚಿಕ್ಕಮಗಳೂರು, ಉಡುಪಿ, ಚಾಮರಾಜನಗರದಲ್ಲೂ ಕಂಡು ಬಂದಿದೆ. ಸದ್ಯ ಈ ರೋಗಕ್ಕೆ ನಿರ್ದಿಷ್ಟ ಚುಚ್ಚುಮದ್ದು ಇಲ್ಲ. ಇದಕ್ಕೆ ಮುಂಜಾಗ್ರತಾ ಕ್ರಮವೇ ಮದ್ದು.

 ಕಳೆದ ವರ್ಷ ಈ ರೋಗಕ್ಕೆ ವರ್ಷಕ್ಕೆ ಮೂರರಂತೆ ಬೂಸ್ಟರ್ ಡೋಸ್ ನೀಡಲಾಗಿತ್ತು. ಈಗ ಬೂಸ್ಟರ್ ಡೋಸ್ ತಯಾರಿಕೆ ನಿಲ್ಲಿಸಲಾಗಿದೆ. ಕಾಡಂಚಿನ ಗ್ರಾಮದವರಿಗೆ ಆರೋಗ್ಯ ಇಲಾಖೆಯಿಂದ ಕಾಡಿಗೆ ಹೋಗುವವರಿಗೆ ಡಿಎಂಪಿ ಆಯಿಲ್ ನೀಡುತ್ತಾರೆ. ಇದನ್ನು ಕೈ ಕಾಲುಗಳಿಗೆ ಹಚ್ಚಿಕೊಂಡು ಕಾಡಿಗೆ ಹೋಗುವಂತೆ ಹಾಗೂ ಮನೆಗೆ ಬಂದ ನಂತರ ಕೈ ಕಾಲು ತೊಳೆದುಕೊಳ್ಳುವಂತೆ ಸೂಚಿಸಲಾಗಿದೆ. ಈ ಆಯಿಲ್​ಗೆ ಉಣ್ಣೆಗಳು ಅಂಟಿಕೊಳ್ಳುವುದಿಲ್ಲ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *