ಮತ್ತೆ ಮಂಗನ ಖಾಯಿಲೆ ಆತಂಕ… ಇಂದು ಎ.ಸಿ. ಅಧ್ಯಕ್ಷತೆಯಲ್ಲಿ ಸಿದ್ಧಾಪುರದಲ್ಲಿ ಸಭೆ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕೆಎಫ್​ಡಿ ಪ್ರಕರಣ ಪತ್ತೆ, ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ತೀರ್ಥಹಳ್ಳಿ ತಾಲೂಕಿನ ಅತ್ತಿಸರ ಗ್ರಾಮದಲ್ಲಿ ಕಳೆದ ಗುರುವಾರ ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್​ ಡಿಸೀಸ್) ​ಮೊದಲ ಪ್ರಕರಣ ಪತ್ತೆಯಾಗಿದೆ.

File photo

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಅತ್ತಿಸರ ಗ್ರಾಮದಲ್ಲಿ ಕಳೆದ ಗುರುವಾರ ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್​ ಡಿಸೀಸ್) ​ಮೊದಲ ಪ್ರಕರಣ ಪತ್ತೆಯಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ರಾಜೇಶ್ ಸುರಗಿಹಳ್ಳಿ ಅವರು ಇದನ್ನು ದೃಢಪಡಿಸಿದ್ದಾರೆ. 53 ವರ್ಷದ ಮಹಿಳೆಯಲ್ಲಿ ಕೆಎಫ್​ಡಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಡಿಸೆಂಬರ್ 10 ರಂದು ಮಹಿಳೆಗೆ ಜ್ವರ ಕಾಣಿಸಿಕೊಂಡಿದ್ದು, ಕೆಲ ದಿನಗಳು ಕಳೆದರೂ ಜ್ವರ ಕಡಿಮೆಯಾಗಿರಲಿಲ್ಲ. ಈ ವೇಳೆ ವೈದ್ಯರು ಪರೀಕ್ಷೆ ನಡೆಸಿದ್ದು, ವರದಿಯಲ್ಲಿ ಕೆಎಫ್’ಡಿ ಪಾಸಿಟಿವ್ ಬಂದಿದೆ. ಇದೀಗ ಮಹಿಳೆಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 5 ದಿನಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ,

ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಮೊದಲ ಬಾರಿಗೆ ಕಾಣಿಸಿಕೊಂಡಿದ್ದು ಸೊರಬ ತಾಲೂಕು ಕ್ಯಾಸನೂರು ಗ್ರಾಮದಲ್ಲಿ. ಅದು 1960ರ ಅಸುಪಾಸು. ಹಾಗಾಗಿ ಇದಕ್ಕೆ ಕೆಎಫ್​ಡಿ ಕಾಯಿಲೆ ಎಂದು ಕರೆಯುತ್ತಾರೆ. ನಂತರ ಈ ರೋಗ ಜಿಲ್ಲೆಯ ಮುಖ್ಯವಾಗಿ ಕಾಡು ಪ್ರದೇಶದಲ್ಲಿ ಕಂಡು ಬರಲು ಪ್ರಾರಂಭಿಸಿತು. ಕಾಡಿನಲ್ಲಿ ಇರುವ ಸಣ್ಣ ಗಾತ್ರದ ಉಣ್ಣೆಗಳು ಮನುಷ್ಯನಿಗೆ ಕಚ್ಚಿದರೆ, ಕೆಎಫ್​ಡಿ ರೋಗ ಮನುಷ್ಯನಿಗೆ ಬರುತ್ತದೆ. ಉಣ್ಣೆಯ ವಾಹಕವಾಗಿ ಪ್ರಾಣಿಗಳು ಕೆಲಸ ಮಾಡುತ್ತಿವೆ.

ಉಣ್ಣೆಗಳು ಪ್ರಮುಖವಾಗಿ ಕಾಡಿನಲ್ಲಿನ ಮಂಗಗಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಎಲ್ಲಿ ಮಂಗಗಳು ಸಾಯುತ್ತವೆಯೋ ಅಲ್ಲಿ ಈ ಉಣ್ಣೆಗಳು ಬೇರೆ ಪ್ರಾಣಿಗಳ ದೇಹವನ್ನು ಆಶ್ರಿಯಿಸುತ್ತವೆ. ಇದಕ್ಮೆ ಇದನ್ನು ಮಂಗನ ಕಾಯಿಲೆ ಎಂದು ಕರೆಯುತ್ತಾರೆ.

ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಮೊದಲ ಬಾರಿಗೆ ಕಾಣಿಸಿಕೊಂಡಿದ್ದು ಸೊರಬ ತಾಲೂಕು ಕ್ಯಾಸನೂರು ಗ್ರಾಮದಲ್ಲಿ. ಅದು 1960ರ ಅಸುಪಾಸು. ಹಾಗಾಗಿ ಇದಕ್ಕೆ ಕೆಎಫ್​ಡಿ ಕಾಯಿಲೆ ಎಂದು ಕರೆಯುತ್ತಾರೆ. ನಂತರ ಈ ರೋಗ ಜಿಲ್ಲೆಯ ಮುಖ್ಯವಾಗಿ ಕಾಡು ಪ್ರದೇಶದಲ್ಲಿ ಕಂಡು ಬರಲು ಪ್ರಾರಂಭಿಸಿತು. ಕಾಡಿನಲ್ಲಿ ಇರುವ ಸಣ್ಣ ಗಾತ್ರದ ಉಣ್ಣೆಗಳು ಮನುಷ್ಯನಿಗೆ ಕಚ್ಚಿದರೆ, ಕೆಎಫ್​ಡಿ ರೋಗ ಮನುಷ್ಯನಿಗೆ ಬರುತ್ತದೆ. ಉಣ್ಣೆಯ ವಾಹಕವಾಗಿ ಪ್ರಾಣಿಗಳು ಕೆಲಸ ಮಾಡುತ್ತಿವೆ.

ಕಾಡಂಚಿನ ಗ್ರಾಮಗಳ ಪ್ರಾಣಿಗಳು ಕಾಡಿಗೆ ಹೋದಾಗ ಈ ಉಣ್ಣೆಗಳು ಎಮ್ಮೆ, ಹಸು, ಕುರಿ, ಮೇಕೆಗಳ ಮೂಲಕ ಗ್ರಾಮಕ್ಕೆ ಬರುತ್ತವೆ. ಹಸು, ಮೇಕೆ, ಕುರಿಗಳು ಮನುಷ್ಯನ ಸಂಪರ್ಕಕ್ಕೆ ಬಂದು ಉಣ್ಣೆಗಳು ಮನುಷ್ಯನಿಗೆ ಕಚ್ಚಿದಾಗ ಮನುಷ್ಯನಲ್ಲಿ ಜ್ವರ ಕಾಣಿಸಿಕೊಳ್ಳುತ್ತದೆ. ಈ ಜ್ವರ ಬಂದವರ ರಕ್ತ ಪರೀಕ್ಷೆ ನಡೆಸಿದಾಗ ಅವರಲ್ಲಿ ಕೆಎಫ್​ಡಿ ಪಾಸಿಟಿವ್, ಇಲ್ಲ ನೆಗೆಟಿವ್​ ಪತ್ತೆಯಾಗುತ್ತದೆ.

ನಿರಂತರ ನಾಲ್ಕೈದು ದಿನ ಜ್ವರ ಹೋಗದೆ ಇದ್ದರೆ, ಅವರು ತಕ್ಷಣ ರಕ್ತ ಪರೀಕ್ಷೆ ಮಾಡಿಸಬೇಕಿದೆ. ಈ ರೋಗವು, ಶಿವಮೊಗ್ಗ ಜಿಲ್ಲೆ ಅಲ್ಲದೆ, ಚಿಕ್ಕಮಗಳೂರು, ಉಡುಪಿ, ಚಾಮರಾಜನಗರದಲ್ಲೂ ಕಂಡು ಬಂದಿದೆ. ಸದ್ಯ ಈ ರೋಗಕ್ಕೆ ನಿರ್ದಿಷ್ಟ ಚುಚ್ಚುಮದ್ದು ಇಲ್ಲ. ಇದಕ್ಕೆ ಮುಂಜಾಗ್ರತಾ ಕ್ರಮವೇ ಮದ್ದು.

 ಕಳೆದ ವರ್ಷ ಈ ರೋಗಕ್ಕೆ ವರ್ಷಕ್ಕೆ ಮೂರರಂತೆ ಬೂಸ್ಟರ್ ಡೋಸ್ ನೀಡಲಾಗಿತ್ತು. ಈಗ ಬೂಸ್ಟರ್ ಡೋಸ್ ತಯಾರಿಕೆ ನಿಲ್ಲಿಸಲಾಗಿದೆ. ಕಾಡಂಚಿನ ಗ್ರಾಮದವರಿಗೆ ಆರೋಗ್ಯ ಇಲಾಖೆಯಿಂದ ಕಾಡಿಗೆ ಹೋಗುವವರಿಗೆ ಡಿಎಂಪಿ ಆಯಿಲ್ ನೀಡುತ್ತಾರೆ. ಇದನ್ನು ಕೈ ಕಾಲುಗಳಿಗೆ ಹಚ್ಚಿಕೊಂಡು ಕಾಡಿಗೆ ಹೋಗುವಂತೆ ಹಾಗೂ ಮನೆಗೆ ಬಂದ ನಂತರ ಕೈ ಕಾಲು ತೊಳೆದುಕೊಳ್ಳುವಂತೆ ಸೂಚಿಸಲಾಗಿದೆ. ಈ ಆಯಿಲ್​ಗೆ ಉಣ್ಣೆಗಳು ಅಂಟಿಕೊಳ್ಳುವುದಿಲ್ಲ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *