insurence-ಅನಂತ ಮೂರ್ತಿ ಟ್ರಸ್ಟ್ ವತಿಯಿಂದ ಉಚಿತ ಕೊನೆ ಗೌಡರ ಜೀವವಿಮೆ

ಯಲ್ಲಾಪುರ ತಾಲೂಕಿನಲ್ಲಿ ಪ್ರಾರಂಭ

ಯಲ್ಲಾಪುರ:- ತಾಲೂಕಿನ ಮಂಚಿಕೇರಿಯ ಹಾಸಣಗಿ ಸೇವಾ ಸಹಕಾರಿ ಸಂಘದಲ್ಲಿ ಶಿರಸಿಯ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಕೊನೆಗೌಡರಿಗೆ ಜೀವ ವಿಮೆ ಯೋಜನೆಗೆ ಯಲ್ಲಾಪುರ ತಾಲೂಕಾ ಮಟ್ಟದಲ್ಲಿ ಚಾಲನೆ ನೀಡಲಾಯಿತು.

    ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾದ ಟಿ.ವಿ. ಹೆಗಡೆ ಮಾತನಾಡಿ, ಇದೊಂದು ಮಹತ್ವದ ಅತೀ ಅವಶ್ಯ ಕಾರ್ಯಕ್ರಮ, ಯಾರೂ ಕೂಡ ಬೇಕಂತ ಮರದಿಂದ ಬೀಳುವುದಿಲ್ಲ, ಅಥವಾ ಬೀಳಲಿ ಅಂತ ತೋಟದ ಮಾಲೀಕರು ಮರ ಹತ್ತಿಸುವುದಿಲ್ಲ, ಅಪಾಯ ಆದಾಗ ರಕ್ಷಣೆ ಅತ್ಯವಶ್ಯ, ಅನಂತ ಮೂರ್ತಿ ಹೆಗಡೆಯವರಿಗೆ ಅಭಿನಂದನೆ, ಮುಂದಿನ ವರ್ಷ ವಿಮೆ ಕಂತನ್ನು ನಾವೇ ತುಂಬಲು ಪ್ರಯತ್ನ ಮಾಡೋಣ ಎಂದರು.



ನಂತರ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಮಾತನಾಡಿ ಎಲ್ಲರೂ ಸುಖವಾಗಿರಲಿ ಎಂದು ನಾವೇ ಕಂತನ್ನು ಪಾವತಿಸಿ, ಪಾಲಿಸಿ ಪ್ರಾರಂಭ ಮಾಡಿದ್ದೇವೆ, ನನ್ನ ಆದಾಯದ ಒಂದು ಭಾಗ ಹಣವನ್ನು ಸಮಾಜಕ್ಕೆ ಮೀಸಲಿಟ್ಟಿದ್ದೇನೆ. ಸಮಾಜದಲ್ಲಿ ಎಲ್ಲರೂ ಪ್ರೀತಿಯಿಂದ ಅನ್ಯೋನ್ಯವಾಗಿ ಸಹೋದರರಂತೆ ಬದುಕಬೇಕು. ಅನಾಹುತವಾದರೆ ಯಾವುದೇ ಕಾರಣಕ್ಕೂ ಕೊನೆ ಗೌಡರ ಕುಟುಂಬ ಬೀದಿಗೆ ಬರಬಾರದು, ಅವರಿಗೆ ಸಮಸ್ಯೆ ಆಗಬಾರದು. ಅವಘಡ ಆದಾಗ ಅಡಿಕೆ ತೋಟದ ಮಾಲೀಕರಿಗೂ ಕೂಡ ಕೊನೆ ಗೌಡರ ಜೀವನಾಂಶ ಕೊಡುವುದು ಕಷ್ಟವಾಗುತ್ತದೆ, ಅದಕ್ಕೆ ಯಾರಿಗೂ ಸಮಸ್ಯೆ ಬೇಡ ಅಂತ ಪೋಸ್ಟ್ ಆಫೀಸ್ ಮುಖಾಂತರ ಜೀವವಿಮೆ ಪ್ರಾರಂಭ ಮಾಡಿದ್ದೇನೆ. ಇದಕ್ಕೆ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಪ್ರೇರಣೆ ಎಂದರು. ಮುಂದಿನ‌ ದಿನದಲ್ಲಿ ಯಲ್ಲಾಪುರ ತಾಲೂಕು ಕೊನೆಗೌಡರ ಸಮ್ಮೇಳನ ನಡೆಸಿ ಹಿರಿಯ ಕೊನೆ ಗೌಡರ ಕುಟುಂಬಕ್ಕೆ ಸನ್ಮಾನ ಕಾರ್ಯಕ್ರಮ ನಡೆಸಲಾಗುವುದು ಎಂದರು.

ಕಾರ್ಯಕ್ರಮವನ್ನು ಸಂಘದ ಕಾರ್ಯದರ್ಶಿ ಗಣಪತಿ ಭಟ್ ನಿರೂಪಿಸಿದರು. ಈ ಸಂಧರ್ಭದಲ್ಲಿ ಇಲ್ಲಿನ 50 ಕ್ಕೂ ಹೆಚ್ಚು ಕೊನೆಗೌಡರಿಗೆ ಜೀವವಿಮೆ ಮಾಡಿಸಲಾಯಿತು.

ಕೊನೆಗೌಡರ ಉಚಿತ ವಿಮೆಯಲ್ಲಿ ಏನಿದೆ:
ಅನಂತಮೂರ್ತಿ ಹೆಗಡೆ ಟ್ರಸ್ಟ್ ನವರು ಪಾಲಿಸಿ ಪ್ರೀಮಿಯಂ ಕಂತನ್ನು ಅವರೇ ಪಾವತಿಸಿ, ಇಂಡಿಯನ್ ಪೋಸ್ಟ್ ನ ಯೋಜನೆಯಾದ ಗ್ರೂಪ್ ಆಕ್ಸಿಡೆಂಟ್ ಗಾರ್ಡ್ ಪಾಲಿಸಿಯನ್ನು ಎಲ್ಲ ಕೊನೆಗೌಡರಿಗೂ ಮಾಡಿಸುವ , ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಈ ಆಕ್ಸಿಡೆಂಟ್ ಗಾರ್ಡ್ ಪಾಲಿಸಿಯು, ಅಪಘಾತದಿಂದ ಮರಣ /ಶಾಶ್ವತ ಅಂಗವೈಕಲ್ಯ /ಭಾಗಶಃ ಅಂಗವೈಕಲ್ಯಕ್ಕೆ 10,00,000 ರೂಪಾಯಿಗಳ ಕವರೇಜ್ ಹೊಂದಿದೆ. ಮತ್ತು ಈ ಪಾಲಿಸಿಯಡಿಯಲ್ಲಿ ರೂ 60,000 ವರೆಗೆ ಒಳರೋಗಿ ವೆಚ್ಚ, ರೂ 30,000 ವರೆಗೆ ಹೊರರೋಗಿ ವೆಚ್ಚ, 10 ದಿನಗಳವರೆಗೆ ರೂ 1,000 ದೈನಂದಿನ ಆಸ್ಪತ್ರೆ ನಗದು ನೆರವು, ಮೃತರ 2 ಮಕ್ಕಳಿಗೆ 1 ಲಕ್ಷ ರೂಪಾಯಿ ಶೈಕ್ಷಣಿಕ ನೆರವು, ರೂ 25,000 ವರೆಗೆ ಕುಟುಂಬ ಸಾರಿಗೆ ಪ್ರಯೋಜನ ಮತ್ತು ರೂ 5000 ವರೆಗೆ ಅಂತಿಮ ಸಂಸ್ಕಾರದ ನೆರವಿನ ಸೌಲಭ್ಯವನ್ನು ಹೊಂದಿದೆ. ಜಿಲ್ಲೆಯಾದ್ಯಂತ ಎಲ್ಲ ಕೊನೆಗೌಡರಿಗೆ ಈ ಪಾಲಿಸಿಯನ್ನು ಮಾಡಿಸುವ ಸಂಕಲ್ಪವನ್ನು ಅನಂತಮೂರ್ತಿ ಮಾಡಿದ್ದಾರೆ. ಇದರ ಸದುಪಯೋಗ ಎಲ್ಲರೂ ಜಿಲ್ಲೆಯ ಎಲ್ಲರೂ ಬಳಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ :- 94483 17709

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *