ಊಹಾ- ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ? ಪತ್ರಕರ್ತರಿಗೆ ಸಿಎಂ ಸಿದ್ದರಾಮಯ್ಯ ತರಾಟೆ

ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು. 

CM_Siddaramaiah_Speech1

ಮೈಸೂರು: ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು. 

ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನ ವಿರೋಧಿಗಳನ್ನೂ ಪ್ರಶ್ನಿಸದೇ ಹೋದರೆ, ಅವರನ್ನೂ ನೀವು ಗೌರವದಿಂದ ನಡೆಸಿಕೊಂಡರೆ ನಿಮ್ಮನ್ನು ಸಮಾಜದ ನಾಲ್ಕನೇ ಅಂಗ ಅಂತ ಕರೆಯೋಕೆ ಆಗ್ತದಾ?  ವಸ್ತುನಿಷ್ಠ ಸುದ್ದಿ-ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ ಎಂದು ಹೇಳಿದರು. 

ಅಸಮಾನತೆ ಯಾಕಿನ್ನೂ ಸಮಾಜದಲ್ಲಿದೆ, ಸಂವಿಧಾನದ ವಿರುದ್ಧ ಮಾತಾಡುವವರೂ ಇದ್ದಾರೆ. ಇಂಥವರಿಂದ ಸಮಾಜಕ್ಕೆ ಆಗುವ ಹಾನಿಯನ್ನು ಪತ್ರಕರ್ತರು ವಿಶ್ಲೇಷಿಸಿ ಬರೆಯಬೇಕು. ಇವತ್ತು ಪತ್ರಿಕಾ ಕ್ಷೇತ್ರದಲ್ಲಿ ವೃತ್ತಿಪರತೆ ಇಲ್ಲವಾಗಿ ವ್ಯಾಪಾರ ಹೆಚ್ಚಾಗಿರುವುದು ಅನಾರೋಗ್ಯಕಾರಿ ಬೆಳವಣಿಗೆ. ಸಣ್ಣ ಪತ್ರಿಕೆಗಳ ತವರೂರು ಮೈಸೂರು ಪತ್ರಿಕಾ ವೃತ್ತಿ ಪರತೆಗೆ ಹೆಸರಾಗಿತ್ತು ಎಂದರು. 

ಓದುಗರು ಮಾಧ್ಯಮಗಳ ಬಗ್ಗೆ ಕುತೂಹಲ, ಆಸಕ್ತಿ ಕಳೆದುಕೊಂಡರೆ ಅದಕ್ಕೆ ವೃತ್ತಿಪರತೆ ಇಲ್ಲವಾಗಿದ್ದೇ ಕಾರಣ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನೂ ಸುದ್ದಿ ಮಾಡ್ತೀರಿ, ಚರ್ಚೆ ಮಾಡ್ತೀರಿ. ಕಾಗೆ ಕುಳಿತರೆ ನಿಮಗೇನು ನಷ್ಟ? ಸಮಾಜಕ್ಕೇನು ನಷ್ಟ ಎಂದು ಪ್ರಶ್ನಿಸಿದರು.

ಗಂಡ ಹೆಂಡತಿ ಜಗಳ ಸುದ್ದಿ ಮಾಡ್ತೀರಲ್ಲಾ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಇಂಥದ್ದನ್ನೆಲ್ಲಾ ಸ್ಟೋರಿ ಮಾಡಿದರೆ ಮಾಧ್ಯಮಗಳ ಬಗ್ಗೆ ಜನ ಕುತೂಹಲ ಕಳೆದುಕೊಳ್ಳದೆ ಇನ್ನೇನಾಗುತ್ತದೆ ಎಂದ ಅವರು, ನಾನು ಶಂಕುಸ್ಥಾಪನೆ ಮಾಡಿದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ವವನ್ನು ನಾನೇ ಉದ್ಘಾಟಿಸುತ್ತೇನೆ, ಅದಕ್ಕೆ ಅಗತ್ಯ ನೆರವು ನೀಡುವುದಾಗಿ ತಿಳಿಸಿದರು.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *