ಬೀಜ ಬಿತ್ತುವ ಶಿಕ್ಷಣದ ಬಗ್ಗೆ ಗೊತ್ತಾ ನಿಮಗೆ?

ಶಾಲೆಯಿಂದ ತಯಾರಾದ ಲಕ್ಷಾಂತರ ಬೀಜದುಂಡೆಗಳನ್ನು ನೆಲಕ್ಕೆ ಬೀರಿ ಮಾದರಿಯಾದ ಶಿಕ್ಷಕರು
ಬೀಜದುಂಡೆಗಳ ಮೂಲಕ ಸಸ್ಯೋತ್ಫಾದನೆ ಹಳೆಯ ವಿಧಾನ.
ಈ ವಿಧಾನದಿಂದ ಅರಣ್ಯ ಬೆಳೆಸಲು ಅರಣ್ಯ ಇಲಾಖೆ ಪ್ರತಿವರ್ಷ ಬೀಜದುಂಡೆ ತಯಾರಿಸುವ, ಅದನ್ನು ಕಾಡಿನಲ್ಲಿ ಬಿತ್ತುವ ಕೆಲಸ ಮಾಡುತ್ತಿದೆ.
ಇಂಥದ್ದೇ ಕೆಲಸವನ್ನು ಸಿದ್ಧಾಪುರ(ಉ.ಕ.) ದ ಗಣಪತಿ ವಡ್ಡಿನಗದ್ದೆ ಮಾಡುತ್ತಾರೆ.
ಇವರು ಬೀಜದುಂಡೆ ತಯಾರಿಸುವುದಿಲ್ಲ, ಬದಲಾಗಿ ಕಾಡಿನ ಬೀಜಗಳನ್ನು ಸಂಗ್ರಹಿಸಿ, ಮೊಳಕೆಬರಿಸಿ, ಕಾಡು, ಸ್ಮಶಾನ,ಖಾಲಿ ಜಾಗದಲ್ಲಿ ನೆಡುತ್ತಾರೆ.
ಈ ಸೇವೆಗಾಗಿ ಗಣಪತಿಯವರಿಗೆ ಈಗಾಗಲೇ ಪ್ರಶಂಸೆ,ಸನ್ಮಾನಗಳು ನಡೆದಿವೆ.
ಇನ್ನೊಂದು ಉದಾಹರಣೆ ಶಿರಸಿಯಲ್ಲಿದೆ.
ಶಿರಸಿಯ ಬನವಾಸಿ ತಿಗಣಿಯ ಪ್ರಾಥಮಿಕ ಶಾಲೆಯಲ್ಲಿ ಈ ವರ್ಷ ಮಕ್ಕಳೇ ಲಕ್ಷಾಂತರ ಬೀಜದುಂಡೆಗಳನ್ನು ಮಾಡಿ ಕಾಡು, ನಾಡಿನಲ್ಲಿ ಬೀರಿದ್ದಾರೆ!.
ಬೇಸಿಗೆ ರಜೆ ಮತ್ತು ಇತರ ಅವಧಿಗಳಲ್ಲಿ ಮಕ್ಕಳು, ತಮ್ಮ ಮನೆಯವರು ತಿಂದ ಹಣ್ಣುಗಳ ಬೀಜಗಳನ್ನು ಸಂಗ್ರಹಿಸಿ, ಶಾಲೆಗೆ ತಂದು ಶಾಲೆಯಲ್ಲಿ ಬೀಜದುಂಡೆಗಳನ್ನು ಮಾಡಿ ಮಣ್ಣಿಗೆ ಸೇರಿಸಿದ್ದಾರೆ. ಇಲ್ಲಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮಾರುತಿ ಬನವಾಸಿ ಜಿಲ್ಲೆಯ ಸ್ಕೌಟ್ಸ್ & ಗೈಡ್ಸ್ ನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡುತ್ತಾರೆ.
ನಿರಂತರ ಕ್ರೀಯಾಶೀಲತೆಯ ಈ ಶಿಕ್ಷಕ ಟೆಂಟ್ ಶಾಲೆ, ಕಲಿನಲಿ ಯೋಜನೆ ಸೇರಿದಂತೆ ಇಲಾಖೆಯ ಕಾರ್ಯಕ್ರಮ, ಪಠ್ಯ- ಪಠ್ಯೇತರ ಚಟುವಟಿಕೆಗಳಲ್ಲಿ ಸದಾ ಚುರುಕಾಗಿರುವ ಶಿಕ್ಷಕ.
ಸ್ಕೌಟ್ಸ್ & ಗೈಡ್ಸ್ ನಲ್ಲಿ ಹಿರಿಯ ಅಧಿಕಾರಿಗಳು ಹೇಳಿದ ಸಲಹೆ, ಸೂಚನೆಗಳನ್ನೇ ಚಾಲೇಂಜ್ ಆಗಿ ಸ್ವೀಕರಿಸಿದ ಮಾರುತಿ ಮಕ್ಕಳನ್ನು ಬೀಜದುಂಡೆ ತಯಾರಿಕೆ, ಬಿತ್ತನೆಗೆ ಪ್ರೋತ್ಸಾಹಿಸಿದ್ದಾರೆ.
ಸಹಶಿಕ್ಷಕರ ನೆರವು, ಶಾಲಾಭಿವೃದ್ಧಿ ಸಮಿತಿ, ಗ್ರಾಮಸ್ಥರ ಸಹಕಾರ ಪಡೆದಿರುವ ಈ ಶಿಕ್ಷಕ ಈ ವರೆಗೆ ಲಕ್ಷ ಲೆಕ್ಕದಲ್ಲಿ ಬೀಜದುಂಡೆ ತಯಾರಿಸಿ, ಬಿತ್ತಿದ್ದಾರೆ.
ಶಾಲೆಯ ಪಠ್ಯ, ಪಠ್ಯೇತರ ಚಟುವಟಿಕೆಗಳೊಂದಿಗೆ ಅರಣ್ಯ ಬೆಳೆಸುವ ತಿಗಣಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳ ಪ್ರಯತ್ನಕ್ಕೆ ಇಲಾಖೆ,ಸಾರ್ವಜನಿಕರ ಸಹಕಾರ ದೊರೆತಿದೆ. ಕೆಲವೆಡೆ ಗಿಡನೆಟ್ಟರೆ ಮಾತ್ರ ಪದವಿ, ಶಿಕ್ಷಣ ಎನ್ನುವ ನಿಯಮ ಜಾರಿಯಾಗುತ್ತಿರುವ ಈ ಸಂದರ್ಭದಲ್ಲಿ ನಿಯಮ, ನೀತಿ, ಕಾನೂನು, ಆದೇಶಗಳಿಗೆ ಕಾಯದೆ ಶಿಕ್ಷಕರ ಮಾರ್ಗದರ್ಶನದಲ್ಲಿ ಪ್ರಾಥಮಿಕ ಶಾಲೆಯ ಮಕ್ಕಳು ಬೀಜದುಂಡೆ ತಯಾರಿಸಿ ಬಿತ್ತುವ ಕೆಲಸದ ಮೂಲಕ ರಾಷ್ಟ್ರೀಯ ಮನ್ನಣೆಗೆ ಪಾತ್ರರಾಗಿದ್ದಾರೆ.
‘ಶಿಕ್ಷಕ ಮಾರುತಿ ಮತ್ತವರ ಶಿಕ್ಷಕವೃಂದ ಮೊದಲಿನಿಂದಲೂ ಸಮಾಜಮುಖಿ ಕೆಲಸಗಳ ಮೂಲಕ ಉತ್ತಮ ಶೈಕ್ಷಣಿಕ ಸೇವೆ ಮಾಡುತಿದ್ದಾರೆ. ಮಾರುತಿ ಶಿಕ್ಷಕರು ತಮ್ಮ ಬಹುಮುಖಿ ವ್ಯಕ್ತಿತ್ವದಿಂದ ವಿದ್ಯಾರ್ಥಿಗಳಿಗೆ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಬನವಾಸಿಯ ಉದ್ಯಮಿ ವಿಜಯ ಕಲಕರಡಿ ಮಾರುತಿ ಶಿಕ್ಷಕರ ಕೆಲಸ, ವ್ಯಕ್ತಿತ್ವವನ್ನು ಶ್ಲಾಘಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *