ತಮ್ಮ ಪಕ್ಷದ ಮುಖಂಡರ ಮನೆ ಮೇಲೆ ಆಯ್.ಟಿ. ದಾಳಿ ನಡೆಯಲು ಕಾರಣರಾಗಿದ್ದರೆ ಮಾಜಿ ಸ್ಫೀಕರ್‌…?!

೨೦೨೪ ರ ಲೋಕಸಭಾ ಚುನಾವಣೆಯ ರಂಗಲಾಲೀಮು ಈಗಾಗಲೇ ಶುರುವಾಗಿದೆ. ಜಾತಿ, ಮತ-ಧರ್ಮ,ಹಿಂದುತ್ವದ ಆಧಾರದಲ್ಲಿ ರಾಜಕಾರಣಮಾಡುವ ಬಿ.ಜೆ.ಪಿ. ಗೆಲುವಿಗಾಗಿ ಏನೂ ಮಾಡಲು ಸಿದ್ಧ ಎಂದು ಸಾಬೀತುಮಾಡುವಂತೆ ವಿಜಯೇಂದ್ರರನ್ನು ಬಿ.ಜೆ.ಪಿ. ರಾಜ್ಯಾಧ್ಯಕ್ಷರನ್ನಾಗಿಸಿ ಯಡಿಯೂರಪ್ಪನವರಿಗೆ ಮಾಡು ಇಲ್ಲವೆ ಮಡಿ ಗುರಿ ನಿಗದಿ ಮಾಡಿದೆ.

ಈ ಅನಿವಾರ್ಯತೆ ಅರಿತರೂ ಅರಿವುಗೇಡಿಯಾಗಿ ಮಾತನಾಡುವ ಬಸವನಗೌಡ ಪಾಟೀಲ್ ಯತ್ನಾಳ್‌ ಯಡಿಯೂರಪ್ಪ ತಂಡ ವಿರೋಧಿಸುತ್ತಲೇ ಮೋದಿ ಓಲೈಸತೊಡಗಿದ್ದಾರೆ. ಇವೆಲ್ಲಾ ಉತ್ತರದ ಕತೆಯಾಯಿತು. ಉತ್ತರ ಕನ್ನಡಕ್ಕೆ ಬಂದರೆ ಇಲ್ಲಿ ಇನ್ನೊಂದು ವಿದ್ಯಮಾನ ಸುದ್ದಿ ಮಾಡುತ್ತಿದೆ.

ಆರು ಅವಧಿಗಳಲ್ಲಿ ಒಂದೂ ಅವಧಿಯ ಕೆಲಸ ಮಾಡದ ಅನಂತಕುಮಾರ ಹೆಗಡೆ ಪ್ರತಿ ಚುನಾವಣೆಯಂತೆ ಈ ಬಾರಿ ಮತ್ತೆ ಎದ್ದು ನಿಂತಿದ್ದಾರೆ.

ಎಡವಟ್ಟಾದ ಅನಂತಕುಮಾರರ ಲೆಕ್ಕಾಚಾರ- ಕೆಲಸಮಾಡದೆ ಬಹುಸಂಖ್ಯಾತರ ತಲೆಯಲ್ಲಿ ದೇವರು, ಧರ್ಮದ ವಿಷ ತುಂಬಿ ಚುನಾವಣೆ ಗೆಲ್ಲುವ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಈ ಬಾರಿ ಕೂಡಾ ಪ್ರತಿಬಾರಿಯಂತೆ ತಾನು ಚುನಾವಣೆಗೆ ನಿಲ್ಲುವುದಿಲ್ಲ ಎನ್ನುವ ಹುಸಿ ಬಾಂಬ್‌ ಪ್ರಯೋಗಿಸಿದ್ದರು.

ಇಂಥ ಹುಸಿ ಬಾಂಬ್‌ ಪ್ರಯೋಗಿಸಿ ಇದರ ಮೂಲಕವೇ ಜನಾಭಿಪ್ರಾಯ, ಜನಾನುಕಂಪ ಗಳಿಸುತಿದ್ದ ಹೆಗಡೆ ಹಳೆ ರೂಢಿಯಂತೆ ಈ ಬಾರಿ ತಾನು ಸ್ಫರ್ಧೆಯಲ್ಲಿಲ್ಲ ಎನ್ನುವ ಹುಸಿ ಗುಂಡು ಹೊಡೆದೇ ಬಿಟ್ಟರು.

ಈ ಬಾರಿ ಹಾಗಾಗಲಿಲ್ಲ- ಪ್ರತಿಬಾರಿ ಅನಂತಕುಮಾರ್‌ ಹೆಗಡೆ ಹೊಡೆಯುತಿದ್ದ ಹುಸಿ ಬಾಂಬ್‌ ಆಧರಿಸಿ ಅವರ ಆಪ್ತರು ಸಂಘದ ಮೂಲಕ ಈ ಬಾರಿಯೂ ನೀವೇ ಎನ್ನುವುದನ್ನು ಹೇಳಿಸಿಬಿಡುತಿದ್ದರು.

ಆದರೆ ಈ ಬಾರಿ ಹಾಗಾಗಲಿಲ್ಲ!

ಕಾರವಾರದ ಮಾಜಿ ಶಾಸಕಿ ರೂಪಾಲಿ ನಾಯ್ಕ ನಾನು ಉತ್ತರ ಕನ್ನಡ ಕ್ಷೇತ್ರದ ಬಹುಸಂಖ್ಯಾತ ಮರಾಠಿ ಭಾಷಿಗರ ಪ್ರತಿನಿಧಿ, ನಾನು ಸಂಸದಳಾಗಲು ಸಿದ್ಧ ಎಂದುಬಿಟ್ಟರು.

ಈ ರೂಪಾಲಿ ಬೇಡಿಕೆ ಮೌಲ್ಯಯುತವಾದದ್ದು ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಹುಸಂಖ್ಯಾತ ಮರಾಠಿಗರು ಹೂಂಗುಡುತ್ತಲೇ ಅನಂತಕುಮಾರ ಫಲಾನುಭವಿ ಪಡೆ ಕನಲಿ ಬಿಟ್ಟಿತು.

ಯಾಕೆಂದರೆ, ಸಾರ್ವಜನಿಕ ಕೆಲಸ ಮಾಡದ ಅನಂತ ಕುಮಾರ ಹೆಗಡೆ ತನ್ನ ಸ್ವಯಂ ಸೇವಾ ಸಂಸ್ಥೆ ಮತ್ತು ಸಹಕಾರಿ ಬ್ಯಾಂಕ್‌ ನಲ್ಲಿ ತೆರಿಗೆಗಳ್ಳರ ಹಣ ಇಟ್ಟುಕೊಂಡಿದ್ದಾರೆ. ಮತಾಂಧರು, ತೆರಿಗೆಗಳ್ಳರೂ, ವೈದಿಕ ಸಮಯಸಾಧಕರೂ ಆದ ಅನಂತಕುಮಾರ ಹೆಗಡೆ ಶಿಷ್ಯ ಗಣ ಹಿಂದುತ್ವದ ಹೆಸರಲ್ಲಿ ಅನಂತಕುಮಾರ ಹೆಗಡೆ ಗೆಲ್ಲಿಸಿಕೊಂಡರೆ ಜಿಲ್ಲೆ, ರಾಜ್ಯ, ದೇಶಕ್ಕೇ ಹಾನಿಯಾದರೂ ತೊಂದರೆ ಇಲ್ಲ ತಮ್ಮ ಸ್ವಾರ್ಥಕ್ಕೆ ಅನುಕೂಲ ಎಂದು ಭಾವಿಸಿ ಅನಂತಕುಮಾರ ಹೆಗಡೆಯನ್ನು ಬೆಂಬಲಿಸುತ್ತದೆ.

ಇದೇ ಆಧಾರದಲ್ಲಿ ಧೈರ್ಯದಲ್ಲಿ ಅನಂತಕುಮಾರ ಹೆಗಡೆ ಪ್ರತಿಬಾರಿಯಂತೆ ಈ ಬಾರಿ ಕೂಡಾ ನಾನೊಲ್ಲೆ ಎಂದು ತೃತಿಯ ಲಿಂಗಿಯಂತೆ ಕೀರಲಾಗಿ ಉಸುರಿದರು. ತಾನೊಂದು ಬಗೆದರೆ ದೈವವೊಂದು ಬಗೆಯಿತು ಎನ್ನುವಂತೆ ರೂಪಾಲಿ ನಾನ್‌ ರೆಡಿ ಎಂದುಬಿಟ್ಟರು!

ಅಲ್ಲಿಗೆ ಅನಂತಕುಮಾರ ಹೆಗಡೆಯವರ ಮೊದಲ ಹುಸಿಬಾಂಬ್‌ ಟುಸ್‌ ಆಗಿಹೋಯ್ತು.

ಇದೇ ಸಮಯದಲ್ಲಿ ಅಧಿಕಾರವಿಲ್ಲದೆ ವಿಚಲಿತರಾಗಿರುವ ವಿಧಾನಸಭೆಯ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತನ್ನ ಸಂಘ ಸಂಪರ್ಕ ಬಳಸಿ ಅನಂತಕುಮಾರ ಬಗ್ಗೆ ಉತ್ತಮ ಅಭಿಪ್ರಾಯ ಇಲ್ಲ ಅವರಿಗೆ ಚುನಾವಣೆಯ ಆಸಕ್ತಿ ಇಲ್ಲ ಎಲ್ಲಾ ಸರಿ, ಆದರೆ ಅನಂತಬದಲು ರೂಪಾಲಿ ನಾಯ್ಕ ಅಥವಾ ಇತರರನ್ನು ಹುಡುಕುವ ಬದಲು ನಾನ್ಯಾಕೆ ಅಭ್ಯರ್ಥಿಯಾಗಬಾರದು ಎಂದು ನಾನೂ ರೆಡಿ ಎಂದುಬಿಟ್ಟರು.

ಪ್ರತಿವರ್ಷದಂತೆ ಫೇಕು ಬಾಂಬ್‌ ಹಾಕಿ ಉಪಾಯದಿಂದ ರಾಜಕಾರಣ ಮಾಡುತಿದ್ದ ಅನಂತಕುಮಾರ ಹೆಗಡೆ ವಿಚಲಿತರಾಗಿದ್ದೇ ಆಗ.

ರೂಪಾಲಿ ಪಕ್ಷದಲ್ಲಿ ಬಾಲ ಬಿಚ್ಚಬಾರದು ಕಾಗೇರಿ ತನ್ನ ಹಿರಿತನ ಹೇಳಿಕೊಂಡು ರಾಜಕೀಯ ಲಾಭಮಾಡಿಕೊಳ್ಳಬಾರದು ಎಂದೆಲ್ಲಾ ಯೋಚಿಸಿಯೇ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡಿದ್ದ ಅನಂತಕುಮಾರ ಹೆಗಡೆ ಹಿಂದುತ್ವದ ಪಡೆ ಸುನಿಲ್‌ ಕುಮಾರ್‌, ರೂಪಾಲಿ, ವಿಶ್ವೇಶ್ವರ ಹೆಗಡೆ ಸೋಲಿಸುವಲ್ಲಿ ಜಯ ಕಂಡಿತ್ತು!

ಬಿ.ಜೆ.ಪಿ.ಯ ಈ ಫೇಕು ನಾಟಕ ಅನಂತಕುಮಾರ ಹೆಗಡೆ ಅಡಿಗೆ ಬಿಸಿನೀರು ಬಿಟ್ಟಂತೆ ಅನಂತಕುಮಾರ ಹೆಗಡೆ ಅಧಿಕಾರದಾಹಿ ಪರಿವಾರಕ್ಕೆ ಈ ಹಿಂದೆ ವಿಶ್ವೇಶ್ವರ ಹೆಗಡೆ ಬಣ ಪರೋಕ್ಷ ಶೀಥಲ ಸಮರ ಮಾಡಿದ ಘಟನೆಗಳೂ ಈಗ ಚರ್ಚೆಯ ವಿಷಯವಾಗಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಜಿಲ್ಲೆಯಲ್ಲಿ ತನ್ನನ್ನು ಬಿಟ್ಟು ಬೇರೆಯವರು ಬೆಳೆಯಬಾರದೆಂದು ತಂತ್ರ ರೂಪಿಸುತ್ತಾರೆ. ಈ ಕಾಗೇರಿ ತಂತ್ರದ ಭಾಗವಾಗಿ ಹಿಂದೆ ಎದುರಾಳಿ ಭೀಮಣ್ಣ ನಾಯ್ಕ ಮತ್ತು ಸ್ವಪಕ್ಷದ ಕೆ.ಜಿ.ನಾಯ್ಕ ಹಣಜಿಬೈಲ್‌ ಮತ್ತು ಖುದ್ದು ಅನಂತಕುಮಾರ ಮನೆಗಳ ಮೇಲೆ ಆದಾಯ ಇಲಾಖೆ ದಾಳಿಗಳ ಹಿಂದೆ ವಿಶ್ವೇಶ್ವರ ಹೆಗಡೆಯವರ ಆಪ್ತರ ಕಾರಸ್ಥಾನ ಕಾರಣ ಎನ್ನುವ ವಿಷಯ ಈಗ ಚರ್ಚೆಯ ವಿಷಯವಾಗಿದೆ. ಈ ಎಲ್ಲಾ ಚರ್ಚೆ ವಿರೋಧ, ಪರಸ್ಫರ ಕಾಲೆಳೆದಾಟ ಮಾಡುತ್ತಿರುವವರು ಬಿ.ಜೆ.ಪಿ. ಪಕ್ಷದ ಎರಡ್ಮೂರು ಗುಂಪುಗಳ ಹಿಂದುತ್ವವಾದಿಗಳೇ ಎನ್ನುವುದು ವಿಶೇಶ. ಒಟ್ಟಾರೆ ಬಿ.ಜೆ.ಪಿ.ಯ ಧರ್ಮಾಧಾರಿತ ರಾಜಕಾರಣದ ಲಾಭದಾಯಕ ಅತ:ಕಲಹ ಕಾಂಗ್ರೆಸ್‌ ಗೆಲುವಿನಲ್ಲಿ ಅಂತ್ಯವಾಗುವ ಸತ್ಯ ಈಗಲೇ ಸ್ಪಷ್ಟವಾಗತೊಡಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *