ಹುಬ್ಬಳ್ಳಿಯಲ್ಲಿ ಪುಂಡರಿಗೆ ಬಂಧನದ ಭೀತಿ!

ಹುಬ್ಬಳ್ಳಿ: 3 ದಶಕಗಳ ಹಿಂದೆ ರಾಮಮಂದಿರ ಚಳುವಳಿಯಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಬಂಧನದ ಭೀತಿ!

ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ, ಕರ್ನಾಟಕ ರಾಜ್ಯದಲ್ಲಿ ಪೊಲೀಸರು ರಾಮಮಂದಿರಕ್ಕಾಗಿ ಹೋರಾಟ ನಡೆಸಿದ್ದ ಕಾರ್ಯಕರ್ತರ ವಿರುದ್ಧದ ಹಳೆಯ ಪ್ರಕರಣಗಳಿಗೆ ಮರು ಜೀವ ನೀಡಿದ್ದಾರೆ.

A proposed model of Ram temple in Ayodhya. (Photo | Special Arrangement)

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ದೇಶದಲ್ಲಿ ಸಂಭ್ರಮಾಚರಣೆ ಮನೆ ಮಾಡಿರುವಾಗ ಕರ್ನಾಟಕ ರಾಜ್ಯದಲ್ಲಿ ಪೊಲೀಸರು ರಾಮಮಂದಿರಕ್ಕಾಗಿ ಹೋರಾಟ ನಡೆಸಿದ್ದ ಕಾರ್ಯಕರ್ತರ ವಿರುದ್ಧದ ಹಳೆಯ ಪ್ರಕರಣಗಳಿಗೆ ಮರು ಜೀವ ನೀಡಿದೆ.

3 ದಶಕಗಳ ಹಿಂದೆ ರಾಮ ಮಂದಿರಕ್ಕಾಗಿ ನಡೆದ ಚಳುವಳಿಯಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ತನಿಖೆ ನಡೆಸುತ್ತಿದೆ.

ಪೊಲೀಸ್ ಇಲಾಖೆ ವಿಶೇಷ ತಂಡವನ್ನು ರಚಿಸಿದ್ದು, ಹಿಂಸಾಚಾರ, ಕೋಮು ಘರ್ಷಣೆಗಳಿಗೆ ಕಾರಣವಾಗಿದ್ದ 1992 ರ ರಾಮ ಮಂದಿರ ಚಳುವಳಿಯಲ್ಲಿ ಭಾಗಿಯಾಗಿದ್ದ ಆರೋಪಿಗಳ ಪಟ್ಟಿಯನ್ನು ತಯಾರಿಸಿದೆ.

ಹುಬ್ಬಳ್ಳಿ ಪೊಲೀಸರು 1992 ರ ಡಿ.05 ರಂದು ಅಲ್ಪಸಂಖ್ಯಾತ ಸಮುದಾಯದವರಿಗೆ ಸೇರಿದ ಅಂಗಡಿಯೊಂದಕ್ಕೆ ಹುಬ್ಬಳ್ಳಿಯಲ್ಲಿ ಬೆಂಕಿ ಹಚ್ಚಿದ್ದ ಆರೋಪದಡಿ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಬಂಧಿಸಲಾಗಿದೆ. ಪೂಜಾರಿ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇತರ ಎಂಟು ಆರೋಪಿಗಳಿಗಾಗಿ ಹುಡುಕುತ್ತಿದ್ದಾರೆ. ಪೂಜಾರಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಂತೆಯೇ, ಹುಬ್ಬಳ್ಳಿ ಪೊಲೀಸರು 1992 ಮತ್ತು 1996 ರ ನಡುವೆ ನಡೆದ ಕೋಮು ಘರ್ಷಣೆಗಳಲ್ಲಿ ಬೇಕಾಗಿದ್ದಾರೆ ಎನ್ನಲಾದ 300 ಆರೋಪಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಆರೋಪಿಗಳು ಈಗ 70 ರ ಆರಂಭದಲ್ಲಿ ಮತ್ತು 70 ರ ಆಸುಪಾಸಿನಲ್ಲಿದ್ದಾರೆ ಮತ್ತು ಅವರಲ್ಲಿ ಅನೇಕರು ದೂರ ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳು ವಿವರಿಸುತ್ತವೆ.

ಅನೇಕ ಆರೋಪಿಗಳು ಈಗ ಪ್ರಮುಖ ಹುದ್ದೆಗಳಲ್ಲಿದ್ದು, ಅವರ ವಿರುದ್ಧ ಕಾನೂನು ಕ್ರಮದ ಪರಿಣಾಮವನ್ನೂ ಪೊಲೀಸರು ಪರಿಗಣಿಸುತ್ತಿದ್ದಾರೆ. ಈ ಸಂಬಂಧ ಪ್ರಕರಣಗಳನ್ನು ತನಿಖೆಗೆ ವಹಿಸುವಂತೆ ಪೊಲೀಸ್ ಇಲಾಖೆಗೆ ಕಾಂಗ್ರೆಸ್ ಸರ್ಕಾರ ಸೂಚಿಸಿದೆ ಎನ್ನಲಾಗಿದೆ.

ರಾಮಜನ್ಮ ಭೂಮಿ ಆಂದೋಲನದ ಅನೇಕ ವ್ಯಕ್ತಿಗಳು ಈಗ ಪ್ರಮುಖ ಬಿಜೆಪಿ ನಾಯಕರಾಗಿದ್ದಾರೆ ಮತ್ತು ಬಿಜೆಪಿ ಅಧಿಕಾರದಲ್ಲಿದ್ದಾಗ ಪ್ರಮುಖ ನಾಯಕರ ಮೇಲಿನ ಪ್ರಕರಣಗಳನ್ನು ಕೈಬಿಡಲಾಯಿತು ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಸರ್ಕಾರದ ಈ ಕ್ರಮದ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದು, ಪ್ರಚಾರ ಸಹಿಸದ ಕಾಂಗ್ರೆಸ್ ಸರ್ಕಾರ ಪ್ರಕರಣಗಳ ಬಗ್ಗೆ ಕ್ರಮ ಕೈಗೊಳ್ಳಲು ಇಂತಹ ಕ್ರಮಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. 

ಈ ಬೆಳವಣಿಗೆ ರಾಜ್ಯದಲ್ಲಿ ಭಾರೀ ವಿವಾದಕ್ಕೆ ಎಡೆಮಾಡಿಕೊಡುವ ಸಾಧ್ಯತೆ ಇದೆ. 1990 ರ ದಶಕದಲ್ಲಿ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಪ್ರಾರಂಭಿಸಿದ ರಾಮ ಜನ್ಮಭೂಮಿ ರಥ ಯಾತ್ರೆಯ ಚಳವಳಿಯಲ್ಲಿ ಕರ್ನಾಟಕವು ದೊಡ್ಡ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *