ಬಿ.ಜೆ.ಪಿ. vs ಹೋರಾಟಗಾರರು, ಪ್ರತಿಭಟನೆಯ ನಂತರ ಮುಟ್ಟಿ ನೋಡಿಕೊಳ್ಳುವಂತೆ ಕೌಂಟರ್‌ ಕೊಟ್ಟ ನಾಯಕರು!

ಚುನಾವಣೆ ಬರುತ್ತಿರುವಂತೆ ಹೋರಾಟಗಳು ಹೆಚ್ಚುತ್ತವೆಯೆ? ಹೌದು ಇಂಥದ್ದೊಂದು ಆರೋಪ, ಚರ್ಚೆ ಯಾವಾಗಲೂ ನಡೆಯುತ್ತಿರುತ್ತದೆ.

ಹೊಸವರ್ಷದ ದಿನ ಸಿದ್ಧಾಪುರ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮುಂದು ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಬಿ.ಜೆ.ಪಿ. ಮುಖಂಡರಾದ ತಿಮ್ಮಪ್ಪ ಎಂ.ಕೆ., ಗುರುರಾಜ್‌ ಶಾನಭಾಗ, ಮಾರುತಿ ನಾಯ್ಕ, ರವಿ ಹೆಗಡೆ ಹೂವಿನಮನೆ, ತೋಟಪ್ಪ ನಾಯ್ಕ ಸೇರಿದಂತೆ ಬಹುತೇಕರು ಅತಿಕ್ರಮಣ ರೈತರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಪ್ರಸ್ಥಾಪಿಸಿ ಅರಣ್ಯ ಅಧಿಕಾರಿಗಳು ಆಡಳಿತ ಪಕ್ಷದ ಪರವಾಗಿ ಕೆಲಸಮಾಡುತಿದ್ದಾರೆ ಎಂದು ಆರೋಪಿಸಿದರು. ಮುಂದುವರಿದು ಅರಣ್ಯ ಭೂಮಿ ಸಾಗುವಳಿದಾರರ ಪರ ಹೋರಾಟ ಮಾಡುತ್ತಿರುವವರ ಬಗ್ಗೆ ವಿರೋಧಿಸಿ ಅವರು ರಾಜಕೀಯ ಪ್ರೇರಿತ ಹೋರಾಟ ಮಾಡುತ್ತಾರೆ. ಬಾಧಿತರಿಗೆ ಸಂಪರ್ಕಕ್ಕೂ ಸಿಗುವುದಿಲ್ಲ ಎಂದು ಆರೋಪಿಸಿದರು.

ಈ ಪ್ರತಿಭಟನೆ ನಂತರ ಪ್ರತಿಕ್ರೀಯೆ ನೀಡಿದ ರೈತ ಮುಖಂಡ ವೀರಭದ್ರ ನಾಯ್ಕ ಮತ್ತು ರಾಘವೇಂದ್ರ ಕಾವಂಚೂರು ತೀಕ್ಷ್ಣವಾಗಿ ಪ್ರತಿಕ್ರೀಯಿಸಿ ಹಿಂದೆ ನೀವಿದ್ದಾಗ ಏನು ಮಾಡಿದ್ದೀರಿ ಶಿರಸಿ-ಕ್ಷೇತ್ರ ಮತ್ತು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ ೨೫ ವರ್ಷಗಳಿಂದ ನೀವೇ ಪ್ರತಿನಿಧಿಗಳು ಎರಡೂ ಕಡೆ ನಿಮ್ಮದೇ ಪಕ್ಷದ ಆಡಳಿತ ಇದ್ದ ಸಂದರ್ಭಗಳಲ್ಲಿ ನಿಮ್ಮ ಕೊಡುಗೆ ಏನು?

ವಿಧಾನಸಭೆ, ಸಂಸತ್‌ ಗಳಲ್ಲಿ ಉಳ್ಳವರ ಪರ ವಕಾಲತ್ತು ವಹಿಸುವ ಬಿ.ಜೆ.ಪಿ. ಹೋರಾಟಗಾರರು ಪ್ರಾಮಾಣಿಕ ಕೆಲಸಗಾರರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಜಾಡಿಸಿದರು.

ಉತ್ತರ ಕನ್ನಡ ಜಿಲ್ಲೆಯ ಸೊಪ್ಪಿನ ಬೆಟ್ಟ ಸಮಸ್ಯೆ ಸಂಸತ್‌, ವಿಧಾನಸಭೆ ಗಳಲ್ಲಿ ಚರ್ಚೆಯಾಗುತ್ತವೆ, ಅರಣ್ಯ ಅತಿಕ್ರಮಣದ ಬಗ್ಗೆ ಮಲತಾಯಿ ಧೋರಣೆತೋರಿರುವ ಬಿ.ಜೆ.ಪಿ. ಹೋರಾಟಗಾರರ ಬಗ್ಗೆ ಮಾತನಾಡುವುದು ಅವರ ಅವಿವೇಕದ ಪರಮಾವಧಿ ಉತ್ತರ ಕನ್ನಡ, ಶಿರಸಿ ಕ್ಷೇತ್ರದಲ್ಲಿ ಬಿ.ಜೆ.ಪಿ.ಯಿಂದ ಜನಪ್ರತಿನಿಧಿಯಾದವರು ಅತಿಕ್ರಮಣದಾರರ ಪರವಾಗಿ ಮಾತನಾಡಿದ್ದೇ ಇಲ್ಲ ಈಗ ಸಂಸತ್‌ ಚುನಾವಣೆ ಹಿನ್ನಲೆಯಲ್ಲಿ ಹೋರಾಟಗಾರರ ವಿರುದ್ಧ ಮಾತನಾಡಿದರೆ ಜನರೇ ನಿಮಗೆ ಉತ್ತರ ಕೊಡುತ್ತಾರೆ ಎಂದು ವಿವರಿಸಿದರು.

ಉತ್ತರ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆಗಳ ವಿಚಾರದಲ್ಲಿ ಪಕ್ಷಾತೀತವಾಗಿ ರಾಜಕಾರಣ ನಡೆದಿದೆ. ಸ್ಫೀಕರ್‌ ಕೇಂದ್ರ ಮಂತ್ರಿಗಳಾದವರು ಕೂಡಾ ಅರಣ್ಯ ಅತಿಕ್ರಮಣದಾರರ ಪರವಾಗಿ ಸಂಸತ್‌, ಶಾಸನಸಭೆಗಳಲ್ಲಿ ಮಾತನಾಡಿಲ್ಲ, ಅತಿಕ್ರಮಣಹೋರಾಟ ಜೀವಂತವಿದ್ದರೂ ಹೋರಾಟಗಾರರ ಬೇಡಿಕೆಗಳಿಗೆ ಸ್ಪಂದನ ಸಿಕ್ಕಿಲ್ಲ. ಬಿ.ಜೆ.ಪಿ. ಪ್ರತಿಭಟನೆಯಲ್ಲಿ ಹೋರಾಟಗಾರರ ವಿರುದ್ಧ ಮಾತನಾಡಿರುವುದು ಈಗ ಚರ್ಚೆಯ ವಿಷಯವಾಗಿದೆ. ಈ ವಿಚಾರ ಹೊಸ ವರ್ಷದ,ಹೊಸ ವಾರದ ಬಹುಚರ್ಚೆಯ ವಿಷಯವಾಗಿರುವುದಂತೂ ವಾಸ್ತವ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *