ನಾಳೆ ಹುಲಿಮನೆ ರಾಘವೇಂದ್ರ ಹೆಗಡೆಯವರಿಗೆ ಸನ್ಮಾನ

ಹುಲಿಮನೆ ಕುಟುಂಬದವರಿಂದ ಸನ್ಮಾನ
ಮೂಲತ: ತಾಲೂಕಿನ ಹುಲಿಮನೆಯ ಪ್ರಸಕ್ತ ಸಿ.ಐ.ಡಿ ಸೂಪರಿಂಟೆಂಡೆಂಟ್ ಆಪ್ ಪೊಲೀಸ್ ಅಧೀಕ್ಷಕರಾದ ರಾಘವೇಂದ್ರ ಹೆಗಡೆ ಹುಲಿಮನೆಯವರನ್ನು ಹುಲಿಮನೆ ಕುಟುಂಬದವರು ಜ.೫ರಂದು ಮಧ್ಯಾಹ್ನ ೩.೩೦ಕ್ಕೆ ಪಟ್ಟಣದ ಶಂಕರಮಠದ ಸಭಾಭವನದಲ್ಲಿ ಸನ್ಮಾನಿಸಲಿದ್ದಾರೆ.


ರಾಘವೇಂದ್ರ ಹೆಗಡೆ ತಮ್ಮ ಕರ್ತವ್ಯ ನಿರ್ವಹಣೆಗಾಗಿ ರಾಷ್ಟçಪತಿ ಶಾಘ್ಲನೀಯ ಸೇವಾಪದಕ ಪಡೆಯುವ ಮೂಲಕ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾಗಿದ್ದಾರೆ. ೨೦೧೨ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕದ ಗೌರವವನ್ನು ಇವರು ಪಡೆದಿದ್ದರು.
ಇವರು ಕನ್ನಡ ರಂಗಭೂಮಿಯಲ್ಲಿ ದಂತಕಥೆಯಾಗಿರುವ, ತಮ್ಮ ಅಭಿನಯಕ್ಕಾಗಿ ದೇಶದ ಮೊದಲ ರಾಷ್ಟçಪತಿ ಬಾಬು ರಾಜೇಂದ್ರ ಪ್ರಸಾದ ಅವರಿಂದ ಗೌರವಿಸಲ್ಪಟ್ಟ ಹುಲಿಮನೆ ಸೀತಾರಾಮ ಶಾಸ್ತಿçಯವರ (ಅಣ್ಣನ ಮೊಮ್ಮಗ) ಮೊಮ್ಮಗ ಎನ್ನುವದು ಮಹತ್ವದ ಸಂಗತಿ.
ಹುಲಿಮನೆಯ ಕೃಷ್ಣಮೂರ್ತಿ ಹೆಗಡೆ, ಲಲಿತಾ ಹೆಗಡೆ ದಂಪತಿಗಳ ಪುತ್ರರಾದ ರಾಘವೇಂದ್ರ ಹೆಗಡೆ ಬೆಂಗಳೂರು ವಿ.ವಿ. ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಎರಡು ವರ್ಷಗಳ ವಕೀಲಿ ವೃತ್ತಿಯ ನಂತರ ಸಿ.ಐ.ಡಿ.ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಪೊಲೀಸ್ ಇಲಾಖೆಗೆ ಸೇರಿ ೨೨ ವರ್ಷಗಳ ಸೇವೆ ಸಲ್ಲಿಸುತ್ತ,೨೦೦೧ರಲ್ಲಿ ಡಿಟೆಕ್ಟಿವ್ ಸಬ್ ಇನಸ್ಪೆಕ್ಟರ್ ಆಗಿ,ಸೈಬರ್ ಕ್ರೆöÊಂ ಇಲಾಖೆಯ ಉಸ್ತುವಾರಿಯಾಗಿ ಈಗ ಸಿ.ಐ.ಡಿ ಸೂಪರಿಂಟೆಂಡೆಂಟ್ ಆಪ್ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ನಿ ಸುಮಲತಾ, ಪುತ್ರ ಯಶಸ್ವಿ ಜೊತೆಗಿನ ಸಂತೃಪ್ತ ಕುಟುಂಬ ಅವರದ್ದು.


ಸವಾಲಿನ ಪ್ರಕರಣಗಳಾದ ಬಹುಕೋಟಿ ವಂಚನೆಯ ಅಬ್ದುಲ್ ಕರೀಂ ತೆಲಗಿ ನಕಲಿ ಸ್ಟಾಂಪ್ ಪೇಪರ್ ಜಾಲದ ಪ್ರಾಥಮಿಕ ತನಿಖೆ, ಪಿ.ಎಸ್.ಐ.ನೇಮಕಾತಿ ಅಕ್ರಮ ಪ್ರಕರಣದ ಉಸ್ತುವಾರಿ,ಸೈಬರ್ ಅಪರಾಧಗಳ ಬಗೆಹರಿಸುವಿಕೆ ಮುಂತಾದ ಕ್ಲಿಷ್ಟಕರ ಪ್ರಕರಣಗಳನ್ನು ರಾಘವೇಂದ್ರ ಹೆಗಡೆ ನಿಭಾಯಿಸಿದ್ದಾರೆ.
ತಮ್ಮ ಕುಟುಂಬದ ರಾಘವೇಂದ್ರ ಹೆಗಡೆಯವರ ಸಾಧನೆಗೆ ಹುಲಿಮನೆ ಕುಟುಂಬದವರು ಗೌರವ ಸನ್ಮಾನ ಆಯೋಜಿಸಿದ್ದು ಎಲ್ಲರೂ ಪಾಲ್ಗೊಳ್ಳಬೇಕೆಂದು ಸಂಘಟಕರಲ್ಲೊಬ್ಬರಾದ ಗಣಪತಿ ಹೆಗಡೆ ಹುಲಿಮನೆ ಕೋರಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *