ನಾಳೆ ಹುಲಿಮನೆ ರಾಘವೇಂದ್ರ ಹೆಗಡೆಯವರಿಗೆ ಸನ್ಮಾನ

ಹುಲಿಮನೆ ಕುಟುಂಬದವರಿಂದ ಸನ್ಮಾನ
ಮೂಲತ: ತಾಲೂಕಿನ ಹುಲಿಮನೆಯ ಪ್ರಸಕ್ತ ಸಿ.ಐ.ಡಿ ಸೂಪರಿಂಟೆಂಡೆಂಟ್ ಆಪ್ ಪೊಲೀಸ್ ಅಧೀಕ್ಷಕರಾದ ರಾಘವೇಂದ್ರ ಹೆಗಡೆ ಹುಲಿಮನೆಯವರನ್ನು ಹುಲಿಮನೆ ಕುಟುಂಬದವರು ಜ.೫ರಂದು ಮಧ್ಯಾಹ್ನ ೩.೩೦ಕ್ಕೆ ಪಟ್ಟಣದ ಶಂಕರಮಠದ ಸಭಾಭವನದಲ್ಲಿ ಸನ್ಮಾನಿಸಲಿದ್ದಾರೆ.


ರಾಘವೇಂದ್ರ ಹೆಗಡೆ ತಮ್ಮ ಕರ್ತವ್ಯ ನಿರ್ವಹಣೆಗಾಗಿ ರಾಷ್ಟçಪತಿ ಶಾಘ್ಲನೀಯ ಸೇವಾಪದಕ ಪಡೆಯುವ ಮೂಲಕ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾಗಿದ್ದಾರೆ. ೨೦೧೨ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕದ ಗೌರವವನ್ನು ಇವರು ಪಡೆದಿದ್ದರು.
ಇವರು ಕನ್ನಡ ರಂಗಭೂಮಿಯಲ್ಲಿ ದಂತಕಥೆಯಾಗಿರುವ, ತಮ್ಮ ಅಭಿನಯಕ್ಕಾಗಿ ದೇಶದ ಮೊದಲ ರಾಷ್ಟçಪತಿ ಬಾಬು ರಾಜೇಂದ್ರ ಪ್ರಸಾದ ಅವರಿಂದ ಗೌರವಿಸಲ್ಪಟ್ಟ ಹುಲಿಮನೆ ಸೀತಾರಾಮ ಶಾಸ್ತಿçಯವರ (ಅಣ್ಣನ ಮೊಮ್ಮಗ) ಮೊಮ್ಮಗ ಎನ್ನುವದು ಮಹತ್ವದ ಸಂಗತಿ.
ಹುಲಿಮನೆಯ ಕೃಷ್ಣಮೂರ್ತಿ ಹೆಗಡೆ, ಲಲಿತಾ ಹೆಗಡೆ ದಂಪತಿಗಳ ಪುತ್ರರಾದ ರಾಘವೇಂದ್ರ ಹೆಗಡೆ ಬೆಂಗಳೂರು ವಿ.ವಿ. ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಎರಡು ವರ್ಷಗಳ ವಕೀಲಿ ವೃತ್ತಿಯ ನಂತರ ಸಿ.ಐ.ಡಿ.ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಪೊಲೀಸ್ ಇಲಾಖೆಗೆ ಸೇರಿ ೨೨ ವರ್ಷಗಳ ಸೇವೆ ಸಲ್ಲಿಸುತ್ತ,೨೦೦೧ರಲ್ಲಿ ಡಿಟೆಕ್ಟಿವ್ ಸಬ್ ಇನಸ್ಪೆಕ್ಟರ್ ಆಗಿ,ಸೈಬರ್ ಕ್ರೆöÊಂ ಇಲಾಖೆಯ ಉಸ್ತುವಾರಿಯಾಗಿ ಈಗ ಸಿ.ಐ.ಡಿ ಸೂಪರಿಂಟೆಂಡೆಂಟ್ ಆಪ್ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ನಿ ಸುಮಲತಾ, ಪುತ್ರ ಯಶಸ್ವಿ ಜೊತೆಗಿನ ಸಂತೃಪ್ತ ಕುಟುಂಬ ಅವರದ್ದು.


ಸವಾಲಿನ ಪ್ರಕರಣಗಳಾದ ಬಹುಕೋಟಿ ವಂಚನೆಯ ಅಬ್ದುಲ್ ಕರೀಂ ತೆಲಗಿ ನಕಲಿ ಸ್ಟಾಂಪ್ ಪೇಪರ್ ಜಾಲದ ಪ್ರಾಥಮಿಕ ತನಿಖೆ, ಪಿ.ಎಸ್.ಐ.ನೇಮಕಾತಿ ಅಕ್ರಮ ಪ್ರಕರಣದ ಉಸ್ತುವಾರಿ,ಸೈಬರ್ ಅಪರಾಧಗಳ ಬಗೆಹರಿಸುವಿಕೆ ಮುಂತಾದ ಕ್ಲಿಷ್ಟಕರ ಪ್ರಕರಣಗಳನ್ನು ರಾಘವೇಂದ್ರ ಹೆಗಡೆ ನಿಭಾಯಿಸಿದ್ದಾರೆ.
ತಮ್ಮ ಕುಟುಂಬದ ರಾಘವೇಂದ್ರ ಹೆಗಡೆಯವರ ಸಾಧನೆಗೆ ಹುಲಿಮನೆ ಕುಟುಂಬದವರು ಗೌರವ ಸನ್ಮಾನ ಆಯೋಜಿಸಿದ್ದು ಎಲ್ಲರೂ ಪಾಲ್ಗೊಳ್ಳಬೇಕೆಂದು ಸಂಘಟಕರಲ್ಲೊಬ್ಬರಾದ ಗಣಪತಿ ಹೆಗಡೆ ಹುಲಿಮನೆ ಕೋರಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *