ಮದ್ಯವರ್ಜನ ಶಿಬಿರದಿಂದ ನವಜೀವನ

ಸಿದ್ದಾಪುರ
ಜೀವನದಲ್ಲಿ ಹೊಸ ಬೆಳಕನ್ನು ಕಾಣಬೇಕಾದರೆ ದುಶ್ಚಟಗಳಿಂದ ದೂರ ಇರಬೇಕು. ದುಶ್ಚಟಗಳೇ ಕುಟುಂಬವನ್ನು ನಾಶಪಡಿಸುತ್ತದೆ. ಸಮಾಜದಲ್ಲಿ ಎಲ್ಲರಂತೆ ಉತ್ತಮ ವ್ಯಕ್ತಿ ಆಗಬೇಕಾದರೆ ಮದ್ಯಪಾನ ಮುಕ್ತ ಜೀವನ ನಡೆಸಬೇಕು ಎಂದು ಹೆಗ್ಗರಣಿ ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಭಟ್ಟ ಧರೆ ಹೇಳಿದರು.


ತಾಲೂಕಿನ ಹೆಗ್ಗರಣಿಯ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಅನ್ನಪೂರ್ಣ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ,ರಾಜ್ಯ ಮದ್ಯ ಪಾನ ಸಂಯಮ ಮಂಡಳಿ, ಜಿಲ್ಲಾ ಜನಜಾಗೃತಿ ವೇದಿಕೆ,ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹೇರೂರು ವಲಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಆಯೋಜಿಸಿದ್ದ ೧೭೮೨ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಅವರು ಗುರುವಾರ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಎಲ್ಲ ಯೋಜನೆಗಳು ಸಮಾಜದ ಅಭಿವೃದ್ಧಿಗೆ ಪೂರಕವಾಗಿದೆ. ಅದರಲ್ಲಿಯೂ ಮುಖ್ಯವಾಗಿ ಮದ್ಯವರ್ಜನ ಶಿಬಿರ ನಡೆಸುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಮುಂದಾಗುತ್ತಿರುವುದು ಮಾದರಿಯ ಕಾರ್ಯಕ್ರಮ ಎಂದು ಹೇಳಿದರು.


ಹೆಗ್ಗರಣಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಎಲ್.ಭಟ್ಟ ಉಂಚಳ್ಳಿ ಮಾತನಾಡಿ ಸಮಾಜದಲ್ಲಿ ಎಲ್ಲರಂತೆ ಗೌರವದಿಂದ ಬದುಕನ್ನು ಕಟ್ಟಿಕೊಳ್ಳಬೇಕಾದರೆ ಮದ್ಯವರ್ಜನ ಶಿಬಿರಗಳು ಹೆಚ್ಚು ಪೂರಕ.ಇಂತಹ ಶಿಬಿರಗಳು ಸದಾಕಾಲ ಸ್ಮರಿಸುವಂತಹುದಾಗಿದೆ. ಜೀವನದಲ್ಲಿ ಎಲ್ಲರೂ ತಪ್ಪನ್ನು ಮಾಡುತ್ತಾರೆ. ಆದರೆ ತಪ್ಪನ್ನು ತಿಳಿದೂ ಮಾಡುವುದು ಸರಿಯಲ್ಲ. ಸರ್ಕಾರದಿಂದ ಮಾಡಲಾಗದಂತಹ ಕೆಲಸಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತಮವಾಗಿ ಕಾರ್ಯನಿರ್ವಹಿ ಮಾದರಿಯಾಗುತ್ತಿದೆ ಎಂದು ಹೇಳಿದರು.


ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ ಮಾತನಾಡಿ ಶಿಬಿರದಿಂದ ಜೀವನದಲ್ಲಿ ಪರಿವರ್ತನೆ ಆಗುತ್ತದೆ. ಈ ಪರಿವರ್ತನೆಯ ಸಮಯವನ್ನು ಸರಿಯಾಗಿ ಉಪಯೋಗಿಸಿಕೊಂಡು ಮಾದರಿಯ ಶಿಬಿರವನ್ನಾಗಿಸಬೇಕೆಂದರು.
ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ ರಾಮ ಗೌಡ ಅಧ್ಯಕ್ಷತೆವಹಿಸಿದ್ದರು.ಹೆಗ್ಗರಣಿ ಗ್ರಾಪಂ ಅಧ್ಯಕ್ಷೆ ಅನ್ನಪೂರ್ಣ ಚನ್ನಯ್ಯ, ತಂಡಾಗುಂಡಿ ಗ್ರಾಪಂ ಅಧ್ಯಕ್ಷೆ ಪದ್ಮಾವತಿ ಎಂ.ಗೌಡ, ನಿಲ್ಕುಂದ ಗ್ರಾಪಂ ಅಧ್ಯಕ್ಷ ರಾಜಾರಾಮ ಆರ್.ಹೆಗಡೆ, ಜನವಿಕಾಸ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರವೀಂದ್ರ ಹಾಸ್ಯಗಾರ, ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷೆ ಗೌರಿ ನಾಯ್ಕ, ಸದಸ್ಯರಾದ ವಿವೇಕಾನಂದ ರಾಯ್ಕರ್, ಲಕ್ಷಿö್ಮÃ ರಾಜ, ರಮೇಶ ಹೆಗಡೆ ಹಾರ್ಸಿಮನೆ, ಸುಭಾಸ ನಾಯ್ಕ ಕಾನಸೂರು, ಯೋಗ ಶಿಕ್ಷಕ ಗಣಪತಿ ಹೆಗಡೆ, ಚಂದ್ರಶೇಖರ ಗೌಡ ಇತರರಿದ್ದರು.
ತಾಲೂಕು ಯೋಜನಾಧಿಕಾರಿ ಪ್ರಭಾಕರ ನಾಯ್ಕ ಸ್ವಾಗತಿಸಿದರು. ಶಿಬಿರಾಧಿಕಾರಿ ನಾಗೇಂದ್ರ ಪ್ರಾಸ್ತಾವಿಕ ಮಾತನಾಡಿದರು. ಕೃಷಿ ಮೇಲ್ವಿಚಾರಕ ಮಹಾದೇವ ಬಿ ಕಾರ್ಯಕ್ರಮ ನಿರ್ವಹಿಸಿದರು.ಹೇರೂರು ವಲಯ ಮೇಲ್ವಿಚಾರಕಿ ರೇಖಾ ನಾಯ್ಕ ಹಾಗೂ ಸೇವಾ ಪ್ರತಿನಿಧಿಗಳು ಸಹಕರಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *