ದೇವಸ್ಥಾನಗಳು ಮಾನಸಿಕ ಗುಲಾಮಗಿರಿಗೆ ದಾರಿ…

ದೇವಸ್ಥಾನಗಳು ಮಾನಸಿಕ ಗುಲಾಮಗಿರಿಗೆ ದಾರಿ: ಶಾಲೆಗಳು ಬೆಳಕಿನ ಮಾರ್ಗ; ಬಿಹಾರ ಶಿಕ್ಷಣ ಸಚಿವ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರದ ಕುರಿತು ಬಿಹಾರದ ಶಿಕ್ಷಣ ಸಚಿವ ಡಾ.ಚಂದ್ರಶೇಖರ್ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ.

Bihar Minister Chandrashekar

ಪಾಟ್ನಾ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರದ ಕುರಿತು ಬಿಹಾರದ ಶಿಕ್ಷಣ ಸಚಿವ ಡಾ.ಚಂದ್ರಶೇಖರ್ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ.

ಶಾಲೆಗಳು ಜೀವನದ ಬೆಳಕಿನ ಮಾರ್ಗವಾಗಿವೆ ಎಂದು ಪಕ್ಷದ ಶಾಸಕ ಫತೇಹ್ ಬಹದ್ದೂರ್ ಸಿಂಗ್ ಅವರ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಅಯೋಧ್ಯೆ ರಾಮಮಂದಿರ ಕುರಿತು ಮಾತನಾಡಿದ ಅವರು, ದೇವಸ್ಥಾನಕ್ಕೆ ಹೋಗುವ ಹಾದಿ ಮಾನಸಿಕ ಗುಲಾಮಗಿರಿಯ ದಾರಿಯಾಗಿದೆ. ಶಾಲೆಗಳಿಗೆ ಹೋಗುವ ಹಾದಿ ಮಾತ್ರವೇ ಬೆಳಕಿನ ಹಾದಿಯನ್ನು ಸುಗಮಗೊಳಿಸುತ್ತವೆ ಎಂದು ಹೇಳಿ, ಇದನ್ನು ನಾನು ಹೇಳಿಲ್ಲ, ಸಾವಿತ್ರಿ ಬಾಯಿ ಫುಲೆ ಅವರು ಹೇಳಿದ್ದು ಎಂದಿದ್ದಾರೆ.

ರಾಮ ಮಂದಿರಕ್ಕಾಗಿ ಮಂಜೂರು ಮಾಡಿರುವ ನಿವೇಶನ ಕೇವಲ ಶೋಷಣೆಯ ತಾಣವಾಗಿದೆ. ಇದು ಒಂದು ನಿರ್ದಿಷ್ಟ ಸಮುದಾಯದ ಕೆಲವು ಪಿತೂರಿಗಾರರ ಜೇಬು ತುಂಬುವ ಸ್ಥಳವಾಗಿದೆ. ನಾವು ಹುಸಿ ಹಿಂದುತ್ವ ಮತ್ತು ಹುಸಿ ರಾಷ್ಟ್ರೀಯತೆಯ ಬಗ್ಗೆ ಜಾಗೃತರಾಗಿರಬೇಕು. ಪ್ರತಿಯೊಂದರಲ್ಲೂ ಭಗವಾನ್ ರಾಮ ವಾಸಿಸುತ್ತಾನೆ. ಭಗವಾನ್ ರಾಮನನ್ನು ಹುಡುಕಲು ಯಾವುದೇ ದೇವಾಲಯಕ್ಕೆ ಹೋಗುವ ಅಗತ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

19ನೇ ಶತಮಾನದಲ್ಲಿ ಅಸ್ಪೃಶ್ಯತೆ, ಸತಿ ಪದ್ಧತಿ, ಬಾಲ್ಯವಿವಾಹದಂತಹ ಅನಿಷ್ಠ ಪದ್ಧತಿಗಳ ವಿರುದ್ಧ ಸಾವಿತ್ರಿ ಬಾಯಿ ತಮ್ಮ ಪತಿಯೊಂದಿಗೆ ಒಟ್ಟಾಗಿ ಹೋರಾಡಿದ್ದಾರೆ. ಅವರಿಂದಲೇ ನಮ್ಮ ಸಮಾಜದಲ್ಲಿ ಪರಿಶಿಷ್ಟ ಜಾತಿಗೆ ಸ್ಥಾನ ಸಿಕ್ಕಿದೆ. ಹಾಗಾಗಿ ಪ್ರತಿಯೊಬ್ಬರು ವಿದ್ಯಾವಂತರಾಗಿ, ಸಂಘಟಿತರಾಗಿ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.

ಯಾವುದೇ ದೇವಸ್ಥಾನಗಳು ನಿಮ್ಮ ಮಕ್ಕಳನ್ನು ಜವಾನನಿಂದ ಕಲೆಕ್ಟರ್‌ ಆಗಿ ಪರಿವರ್ತಿಸುವುದಿಲ್ಲ, ಪುಸ್ತಕ, ಲೇಖನಿ, ಶಾಲೆ, ಶಿಕ್ಷಣದಿಂದ ಮಾತ್ರವೇ ನಿಮ್ಮ ಮಕ್ಕಳನ್ನ ಪರಿವರ್ತಿಸಲು ಸಾಧ್ಯ. ಆದ್ದರಿಂದ ಅಕ್ಷತೆಯನ್ನು ನೀಡುವವರನ್ನು ಬಿಟ್ಟು ಅಂಬೇಡ್ಕರ್‌ ಅವರ ತತ್ವಗಳನ್ನು ಅನುಸರಿಸಿ ಎಂದು ಕರೆ ನೀಡಿದ್ದಾರೆ.

ಗಾಯವಾದರೆ ಎಲ್ಲಿಗೆ ಹೋಗುತ್ತೀರಿ? ದೇವಸ್ಥಾನ ಅಥವಾ ಆಸ್ಪತ್ರೆ? ನಿಮಗೆ ಶಿಕ್ಷಣ ಬೇಕು, ಅಧಿಕಾರಿ, ಎಂಎಲ್ಎ ಅಥವಾ ಎಂಪಿ ಆಗಬೇಕಾದರೆ ನೀವು ದೇವಸ್ಥಾನಕ್ಕೆ ಹೋಗುತ್ತೀರಾ ಅಥವಾ ಶಾಲೆಗೆ ಹೋಗುತ್ತೀರಾ? ಫತೇ ಬಹದ್ದೂರ್ ಸಿಂಗ್ ಅವರು ಸಾವಿತ್ರ ಬಾಯಿ ಫುಲೆ ಅವರ ಮಾತನ್ನೇ ಹೇಳಿದ್ದಾರೆ ಎಂದು ಪ್ರತಿಪಾದಿಸಿದರು. ಈಗ ಏಕಲವ್ಯನ ಮಗ ತನ್ನ ಹೆಬ್ಬೆರಳನ್ನು ಬಲಿ ಕೊಡುವುದಿಲ್ಲ, ಈಗ, ಜನರಿಗೆ ಹೇಗೆ ಕಾಣಿಕೆಗಳನ್ನು ಸಲ್ಲಿಸಬೇಕೆಂದು ತಿಳಿದಿದೆ.

ಇಂತಹ ಹೇಳಿಕೆಗಳ ಮೂಲಕ ಆರ್‌ಜೆಡಿ ನಾಯಕರು ತಮ್ಮ ಮುಸ್ಲಿಂ ಮತದಾರರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕ ನಿಖಿಲ್ ಆನಂದ್ ಹೇಳಿದ್ದಾರೆ. ಹಿಂದೂಗಳನ್ನು ನಿಂದಿಸಲು ಮತ್ತು ಮುಸ್ಲಿಮರನ್ನು ಸಮಾಧಾನಪಡಿಸಲು ಆರ್‌ಜೆಡಿ ಯಾವುದೇ ಹಂತಕ್ಕೂ ಹೋಗಲು ಸಿದ್ಧವಾಗಿದೆ. ಅಯೋಧ್ಯೆ ಮತ್ತು ಮಥುರಾ ಭಾರತದ ಆಧ್ಯಾತ್ಮಿಕ-ಸಾಂಸ್ಕೃತಿಕ ಪರಂಪರೆ ಸ್ಥಾನಗಳು ಎಂದಿದ್ದಾರೆ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *