ದೇವಸ್ಥಾನಗಳು ಮಾನಸಿಕ ಗುಲಾಮಗಿರಿಗೆ ದಾರಿ…

ದೇವಸ್ಥಾನಗಳು ಮಾನಸಿಕ ಗುಲಾಮಗಿರಿಗೆ ದಾರಿ: ಶಾಲೆಗಳು ಬೆಳಕಿನ ಮಾರ್ಗ; ಬಿಹಾರ ಶಿಕ್ಷಣ ಸಚಿವ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರದ ಕುರಿತು ಬಿಹಾರದ ಶಿಕ್ಷಣ ಸಚಿವ ಡಾ.ಚಂದ್ರಶೇಖರ್ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ.

Bihar Minister Chandrashekar

ಪಾಟ್ನಾ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರದ ಕುರಿತು ಬಿಹಾರದ ಶಿಕ್ಷಣ ಸಚಿವ ಡಾ.ಚಂದ್ರಶೇಖರ್ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ.

ಶಾಲೆಗಳು ಜೀವನದ ಬೆಳಕಿನ ಮಾರ್ಗವಾಗಿವೆ ಎಂದು ಪಕ್ಷದ ಶಾಸಕ ಫತೇಹ್ ಬಹದ್ದೂರ್ ಸಿಂಗ್ ಅವರ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಅಯೋಧ್ಯೆ ರಾಮಮಂದಿರ ಕುರಿತು ಮಾತನಾಡಿದ ಅವರು, ದೇವಸ್ಥಾನಕ್ಕೆ ಹೋಗುವ ಹಾದಿ ಮಾನಸಿಕ ಗುಲಾಮಗಿರಿಯ ದಾರಿಯಾಗಿದೆ. ಶಾಲೆಗಳಿಗೆ ಹೋಗುವ ಹಾದಿ ಮಾತ್ರವೇ ಬೆಳಕಿನ ಹಾದಿಯನ್ನು ಸುಗಮಗೊಳಿಸುತ್ತವೆ ಎಂದು ಹೇಳಿ, ಇದನ್ನು ನಾನು ಹೇಳಿಲ್ಲ, ಸಾವಿತ್ರಿ ಬಾಯಿ ಫುಲೆ ಅವರು ಹೇಳಿದ್ದು ಎಂದಿದ್ದಾರೆ.

ರಾಮ ಮಂದಿರಕ್ಕಾಗಿ ಮಂಜೂರು ಮಾಡಿರುವ ನಿವೇಶನ ಕೇವಲ ಶೋಷಣೆಯ ತಾಣವಾಗಿದೆ. ಇದು ಒಂದು ನಿರ್ದಿಷ್ಟ ಸಮುದಾಯದ ಕೆಲವು ಪಿತೂರಿಗಾರರ ಜೇಬು ತುಂಬುವ ಸ್ಥಳವಾಗಿದೆ. ನಾವು ಹುಸಿ ಹಿಂದುತ್ವ ಮತ್ತು ಹುಸಿ ರಾಷ್ಟ್ರೀಯತೆಯ ಬಗ್ಗೆ ಜಾಗೃತರಾಗಿರಬೇಕು. ಪ್ರತಿಯೊಂದರಲ್ಲೂ ಭಗವಾನ್ ರಾಮ ವಾಸಿಸುತ್ತಾನೆ. ಭಗವಾನ್ ರಾಮನನ್ನು ಹುಡುಕಲು ಯಾವುದೇ ದೇವಾಲಯಕ್ಕೆ ಹೋಗುವ ಅಗತ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

19ನೇ ಶತಮಾನದಲ್ಲಿ ಅಸ್ಪೃಶ್ಯತೆ, ಸತಿ ಪದ್ಧತಿ, ಬಾಲ್ಯವಿವಾಹದಂತಹ ಅನಿಷ್ಠ ಪದ್ಧತಿಗಳ ವಿರುದ್ಧ ಸಾವಿತ್ರಿ ಬಾಯಿ ತಮ್ಮ ಪತಿಯೊಂದಿಗೆ ಒಟ್ಟಾಗಿ ಹೋರಾಡಿದ್ದಾರೆ. ಅವರಿಂದಲೇ ನಮ್ಮ ಸಮಾಜದಲ್ಲಿ ಪರಿಶಿಷ್ಟ ಜಾತಿಗೆ ಸ್ಥಾನ ಸಿಕ್ಕಿದೆ. ಹಾಗಾಗಿ ಪ್ರತಿಯೊಬ್ಬರು ವಿದ್ಯಾವಂತರಾಗಿ, ಸಂಘಟಿತರಾಗಿ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.

ಯಾವುದೇ ದೇವಸ್ಥಾನಗಳು ನಿಮ್ಮ ಮಕ್ಕಳನ್ನು ಜವಾನನಿಂದ ಕಲೆಕ್ಟರ್‌ ಆಗಿ ಪರಿವರ್ತಿಸುವುದಿಲ್ಲ, ಪುಸ್ತಕ, ಲೇಖನಿ, ಶಾಲೆ, ಶಿಕ್ಷಣದಿಂದ ಮಾತ್ರವೇ ನಿಮ್ಮ ಮಕ್ಕಳನ್ನ ಪರಿವರ್ತಿಸಲು ಸಾಧ್ಯ. ಆದ್ದರಿಂದ ಅಕ್ಷತೆಯನ್ನು ನೀಡುವವರನ್ನು ಬಿಟ್ಟು ಅಂಬೇಡ್ಕರ್‌ ಅವರ ತತ್ವಗಳನ್ನು ಅನುಸರಿಸಿ ಎಂದು ಕರೆ ನೀಡಿದ್ದಾರೆ.

ಗಾಯವಾದರೆ ಎಲ್ಲಿಗೆ ಹೋಗುತ್ತೀರಿ? ದೇವಸ್ಥಾನ ಅಥವಾ ಆಸ್ಪತ್ರೆ? ನಿಮಗೆ ಶಿಕ್ಷಣ ಬೇಕು, ಅಧಿಕಾರಿ, ಎಂಎಲ್ಎ ಅಥವಾ ಎಂಪಿ ಆಗಬೇಕಾದರೆ ನೀವು ದೇವಸ್ಥಾನಕ್ಕೆ ಹೋಗುತ್ತೀರಾ ಅಥವಾ ಶಾಲೆಗೆ ಹೋಗುತ್ತೀರಾ? ಫತೇ ಬಹದ್ದೂರ್ ಸಿಂಗ್ ಅವರು ಸಾವಿತ್ರ ಬಾಯಿ ಫುಲೆ ಅವರ ಮಾತನ್ನೇ ಹೇಳಿದ್ದಾರೆ ಎಂದು ಪ್ರತಿಪಾದಿಸಿದರು. ಈಗ ಏಕಲವ್ಯನ ಮಗ ತನ್ನ ಹೆಬ್ಬೆರಳನ್ನು ಬಲಿ ಕೊಡುವುದಿಲ್ಲ, ಈಗ, ಜನರಿಗೆ ಹೇಗೆ ಕಾಣಿಕೆಗಳನ್ನು ಸಲ್ಲಿಸಬೇಕೆಂದು ತಿಳಿದಿದೆ.

ಇಂತಹ ಹೇಳಿಕೆಗಳ ಮೂಲಕ ಆರ್‌ಜೆಡಿ ನಾಯಕರು ತಮ್ಮ ಮುಸ್ಲಿಂ ಮತದಾರರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕ ನಿಖಿಲ್ ಆನಂದ್ ಹೇಳಿದ್ದಾರೆ. ಹಿಂದೂಗಳನ್ನು ನಿಂದಿಸಲು ಮತ್ತು ಮುಸ್ಲಿಮರನ್ನು ಸಮಾಧಾನಪಡಿಸಲು ಆರ್‌ಜೆಡಿ ಯಾವುದೇ ಹಂತಕ್ಕೂ ಹೋಗಲು ಸಿದ್ಧವಾಗಿದೆ. ಅಯೋಧ್ಯೆ ಮತ್ತು ಮಥುರಾ ಭಾರತದ ಆಧ್ಯಾತ್ಮಿಕ-ಸಾಂಸ್ಕೃತಿಕ ಪರಂಪರೆ ಸ್ಥಾನಗಳು ಎಂದಿದ್ದಾರೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *