ಜನಜಾಗೃತಿಯಿಂದ ಮದ್ಯಮುಕ್ತಿ…

ಸಿದ್ದಾಪುರ
ತಾಲೂಕಿನ ಹೆಗ್ಗರಣಿಯ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಅನ್ನಪೂರ್ಣ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ, ಅಖಿಲ ಕರ್ನಾಟಕ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಒಂದು ವಾರಗಳ ಕಾಲ ನಡೆದ ೧೭೮೨ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಗುರುವಾರ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಬೆಳ್ತಂಗಡಿಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜಣ್ಣ ಕೊರವಿ ಸಮಾಜದಲ್ಲಿ ಒಳ್ಳೆಯ ಗೌರವ, ಸ್ಥಾನಮಾನ ದೊರಕಬೇಕಾದರೆ ಪಾನಮುಕ್ತರಾಗಿ ಜೀವನ ನಡೆಸುವುದರ ಜತೆಗೆ ದುಶ್ಚಟಕ್ಕೆ ಒಳಗಾದವರನ್ನು ಒಳ್ಳೆಯದಾರಿಗೆ ತರುವ ಕೆಲಸ ಮಾಡಬೇಕು.
ಡಾ.ವೀರೇಂದ್ರ ಹೆಗ್ಗಡೆ ಅವರು ಕಂಡ ಕನಸು ನನಸಾಗಬೇಕಾದರೆ ಸ್ವಸ್ಥ ಸಮಾಜ ನಿರ್ಮಾಣ ವಾಗಬೇಕಾದರೆ ಪಾನಮುಕ್ತ ಸಮಾಜ ಆಗಬೇಕು. ಸರ್ಕಾರದ ವಿರುದ್ಧ ಹೋರಾಡಿದರೆ ಏನು ಪ್ರಯೋಜನ ಇಲ್ಲ. ಜನರನ್ನು ಜಾಗೃತರನ್ನಾಗಿ ಮಾಡಿದರೆ ಎಲ್ಲ ಕಡೆ ಮದ್ಯಮುಕ್ತ ಸಮಾಜ ನಿರ್ಮಾಣವಾಗುತ್ತದೆ. ರಾಜ್ಯ ಅಬಕಾರಿ ಇಲಾಖೆ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿಯೂ ಎಂಎಸ್‌ಐಎಲ್ ಮದ್ಯದಂಗಡಿ ತೆಗೆಯಲು ಮುಂದಾಗಿತ್ತು. ಆದರೆ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮುಖ್ಯಮಂತ್ರಿ ಅವರಿಗೆ ಹಾಗೂ ಅಬಕಾರಿ ಸಚಿವರಿಗೆ ಮನವಿ ಮಾಡಿಕೊಂಡಿದ್ದರಿಂದ ಅಬಕಾರಿ ಇಲಾಖೆ ತನ್ನ ಆದೇಶವನ್ನು ಹಿಂದಕ್ಕೆ ಪಡೆದುಕೊಂಡಿದೆ. ನಮ್ಮ ದೇಶದಲ್ಲಿ ಧರ್ಮ, ಸಂಸ್ಕೃತಿ, ಸಂಸ್ಕಾರ ಉಳಿಯಲ್ಲಿಕ್ಕೆ ಮಹಿಳೆಯರು ಮುಖ್ಯಕಾರಣ.ಮಹಿಳೆಯರು ಜಾಗೃತರಾಗಬೇಕಾಗಿದೆ. ಶಿಬಿರಾರ್ಥಿಗಳು ಕುಡಿತ ಮರೆತು ಉತ್ತಮ ವ್ಯಕ್ತಿಯಾಗಿ, ಸಮಾಜದಲ್ಲಿ ವ್ಯಕ್ತಿಯಾಗಿ, ಶಕ್ತಿಯಾಗಿ ಬೆಳೆಯಬೇಕೆಂದರು.


ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಳಿಂಗರಾಜ್ ಎಂ.ಎಸ್.ಮಾತನಾಡಿ ನಮ್ಮ ವ್ಯಕ್ತಿತ್ವವನ್ನು ಉಳಿಸಿಕೊಳ್ಳಬೇಕಾದರೆ, ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಬೇಕಾದರೆ ದುಶ್ಚಟದಿಂದ ದೂರ ಇರಬೇಕಾಗಿದೆ. ಕುಡಿತವನ್ನು ಬಿಟ್ಟು ಹೊಸ ಜೀವನದ ಮೂಲಕ ಹೊಸ ಬೆಳಕು ಮೂಡಿಸುವಂತಾಗಬೇಕೆಂದರು.

ಹೆಗ್ಗರಣಿ ಪ್ರೌಢಶಾಲೆಯ ಅಧ್ಯಕ್ಷ ನಾರಾಯಣ ಭಟ್ಟ ಧರೆ, ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಎಲ್.ಭಟ್ಟ, ಗ್ರಾಪಂ ಅಧ್ಯಕ್ಷರಾದ ಅನ್ನಪೂರ್ಣ ಚನ್ನಯ್ಯ, ಪದ್ಮಾವತಿ ಎಂ.ಗೌಡ, ಯಂಕಾ ಹುಲಿಯಾ ಗೌಡ, ಅನಿತಾ ನಾಯ್ಕ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ರಾಮು ಕಿಣಿ, ರಮೇಶ ಹೆಗಡೆ ಹಾರ್ಸಿಮನೆ, ಲಕ್ಷಿö್ಮÃ ರಾಜ್, ಸುಧಾ ಶಿವಪ್ರಕಾಶ, ಯೋಗ ಶಿಕ್ಷಕ ಗಣಪತಿ ಹೆಗಡೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ ರಾಮಾ ಗೌಡ, ಶಿಬಿರಾಧಿಕಾರಿಗಳಾದ ಗಣೇಶ ಆಚಾರ್ಯ, ನಾಗೇಂದ್ರ ಇತರರಿದ್ದರು.

ಶಿಬಿರಾರ್ಥಿಗಳಾದ ಸುರೇಶ ಹಾಗೂ ಚಂದ್ರಶೇಖರ ಅನಿಸಿಕೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ನವಜೀವನ ಸಮಿತಿ ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಿಸುತ್ತಿರುವವರಿಗೆ ಜಾಗೃತಿ ಅಣ್ಣ ಹಾಗೂ ಜಾಗೃತಿ ಮಿತ್ರ ಪ್ರಶಸ್ತಿ ನೀಡಿ ಮತ್ತು ವಿಶೇಷ ಸೇವೆ ಸಲ್ಲಿಸಿದವರನ್ನು ಗೌರವಿಸಲಾಯಿತು.
ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷ ಸುಭಸ ಎಚ್. ನಾಯ್ಕ, ಯೋಜನಾಧಿಕಾರಿ ಪ್ರಭಾಕರ ನಾಯ್ಕ, ಮಹದೇವ ಬಿ, ರೇಖಾ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *