ಸರಳ ವ್ಯಕ್ತಿ ಭಾರತರತ್ನಕ್ಕೆ ಭಾಜನರಾದ ದಿ.ಕರ್ಪೂರಿ ಠಾಕೂರ್

ಭಾರತ ರತ್ನಕ್ಕೆ ಭಾಜನರಾದ ಜನ ನಾಯಕ ಕರ್ಪೂರಿ ಠಾಕೂರ್ ಸರಳತೆ ಬಗ್ಗೆ ನಿಮಗೆಷ್ಟು ಗೊತ್ತು?

ಸ್ವಾತಂತ್ರ್ಯ ಹೋರಾಟ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ್ದ ಬಿಹಾರ ಮಾಜಿ ಮುಖ್ಯಮಂತ್ರಿ ದಿ. ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ನೀಡಿ ಕೇಂದ್ರ ಸರ್ಕಾರ ಗೌರವಿಸಿದೆ.

thakur

ಸ್ವಾತಂತ್ರ್ಯ ಹೋರಾಟ ಮತ್ತು ಸಮಾಜವಾದಿ ಆಂದೋಲನಕ್ಕೆ ಅನನ್ಯ ಕೊಡುಗೆ ನೀಡಿದ್ದ ಬಿಹಾರ ಮಾಜಿ ಮುಖ್ಯಮಂತ್ರಿ ದಿ. ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ನೀಡಿ ಕೇಂದ್ರ ಸರ್ಕಾರ ಗೌರವಿಸಿದೆ.

ಜನನಾಯಕ ಎಂದೇ ಖ್ಯಾತಿ ಪಡೆದಿದ್ದ ಕರ್ಪೂರಿ ಠಾಕೂರ್ ಅತ್ಯಂತ ಸರಳ ಜೀವಿಯಾಗಿದ್ದರು. ಠಾಕೂರ್ ಅವರು ಎರಡು ಬಾರಿ ಬಿಹಾರದ ಮುಖ್ಯಮಂತ್ರಿಯಾಗಿದ್ದರೂ ಅವರ ಬಳಿ ಒಂದು ಸ್ವಂತ ಕಾರು ಸಹ ಇರಲಿಲ್ಲ. ಕಾರು ಬಿಡಿ, ಸ್ವಂತ ಮನೆ ಸಹ ಕಟ್ಟಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ.

ಕರ್ಪೂರಿ ಠಾಕೂರ್ ಅವರು ಒಬ್ಬ ಶಿಕ್ಷಕ, ಸ್ವಾತಂತ್ರ್ಯ ಹಾಗೂ ಸಮಾಜವಾದಿ ಹೋರಾಟಗಾರ, ರಾಜಕಾರಣಿ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಜನನಾಯಕರಾಗಿದ್ದರು. ನಾಳೆ ಅವರ ಜನ್ಮ ಶತಮಾನೋತ್ಸವದ ದಿನದಂದು ಕೇಂದ್ರ ಸರ್ಕಾರ ಕರ್ಪೂರಿ ಠಾಕೂರ್‌ಗೆ ಭಾರತ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಿದೆ.

ಜನವರಿ 24, 1924 ರಂದು ಬಿಹಾರದ ಸಮಸ್ತಿಪುರ್ ಜಿಲ್ಲೆಯ ಪಿಟೊಂಜಿಯಾದಲ್ಲಿ(ಈಗ ಕರ್ಪೂರಿಗ್ರಾಮ್) ಜನಿಸಿದ ಠಾಕೂರ್ ಅವರು ಬಿಹಾರದ ಉಪ ಮುಖ್ಯಮಂತ್ರಿಯಾಗಿ ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸರಳತೆಯ ಬಗ್ಗೆ ಅನೇಕ ಕಥೆಗಳಿವೆ. 1952 ರಲ್ಲಿ ಅವರು ಮೊದಲ ಬಾರಿಗೆ ಶಾಸಕರಾದಾಗ ಅವರು ಆಸ್ಟ್ರಿಯಾಗೆ ಹೋಗುವ ನಿಯೋಗದಲ್ಲಿ ಇದ್ದರು. ಆದರೆ ಅವರ ಬಳಿ ಧರಿಸಲು ಒಂದು ಕೋಟ್ ಸಹ ಇರಲಿಲ್ಲ. ಗೆಳೆಯನ ಬಳಿ ಕೋಟು ಕೇಳಿದಾಗ ಅದೂ ಹರಿದದ್ದು ತಂದು ಕೊಟ್ಟಿದ್ದರು. ಕರ್ಪೂರಿ ಅದೇ ಕೋಟ್ ಧರಿಸಿ ಹೊರಟು ಹೋಗಿದ್ದರು. ಅಲ್ಲಿ ಯುಗೊಸ್ಲಾವಿಯಾದ ಮುಖ್ಯಸ್ಥ ಮಾರ್ಷಲ್ ಟಿಟೊ ಅವರು ಹರಿದ ಕೋಟ್ ಅನ್ನು ಗಮನಸಿ ಅವರಿಗೆ ಹೊಸ ಕೋಟ್ ಅನ್ನು ಉಡುಗೊರೆಯಾಗಿ ನೀಡಿದ್ದರು.

ಕರ್ಪೂರಿ ಠಾಕೂರ್ ಅವರ ಬಳಿ ಕಾರು ಇರಲಿಲ್ಲ. 80ರ ದಶಕದಲ್ಲಿ ಕರ್ಪೂರಿ ಠಾಕೂರ್ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು. ಒಮ್ಮೆ ಊಟಕ್ಕೆ ನಿವಾಸಕ್ಕೆ ಹೋಗಬೇಕಿತ್ತು. ಸ್ವಲ್ಪ ಹೊತ್ತು ಅವರದೇ ಪಕ್ಷದ ಶಾಸಕರಿಗೆ ಜೀಪ್ ಕೊಡಿ ಎಂದು ಕೇಳಿದಾಗ, ಆ ಶಾಸಕರು, ನನ್ನ ಜೀಪಿನಲ್ಲಿ ಎಣ್ಣೆ ಇಲ್ಲ. ನೀವು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಿರಿ. ಕಾರು ಏಕೆ ಖರೀದಿಸಬಾರದು? ಎಂದು ಪ್ರಶ್ನಿಸಿದ್ದರು. ಅವರು ಸದಾ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು.

ಹಿರಿಯ ಪತ್ರಕರ್ತ ಸುರೇಂದ್ರ ಕಿಶೋರ್ ಅವರು 1977 ರ ಒಂದು ಘಟನೆಯ ಬಗ್ಗೆ ಬರೆದಿದ್ದಾರೆ, ಜಯಪ್ರಕಾಶ್ ನಾರಾಯಣ್ ಅವರ ಜನ್ಮದಿನವನ್ನು ಪಾಟ್ನಾದ ಕದಮ್ ಕುವಾನ್‌ನಲ್ಲಿರುವ ಚರಖಾ ಸಮಿತಿ ಕಟ್ಟಡದಲ್ಲಿ ಆಚರಿಸಲಾಯಿತು. ಇದರಲ್ಲಿ ಮಾಜಿ ಪ್ರಧಾನಿ ಚಂದ್ರಶೇಖರ್, ನಾನಾಜಿ ದೇಶಮುಖ್ ಸೇರಿದಂತೆ ದೇಶಾದ್ಯಂತ ಹಲವು ಮುಖಂಡರು ಭಾಗವಹಿಸಿದ್ದರು.  ಬಿಹಾರ ಮುಖ್ಯಮಂತ್ರಿ ಕರ್ಪೂರಿ ಠಾಕುರ್ ಅವರು ಹರಿದ ಕುರ್ತಾ, ಹರಿದ ಚಪ್ಪಲಿಯೊಂದಿಗೆ ಆಗಮಿಸಿದರು. ಇದನ್ನು ಗಮನಿಸಿದ ಚಂದ್ರಶೇಖರ್ ಅವರು ಒಬ್ಬ ನಾಯಕ ‘ಮುಖ್ಯಮಂತ್ರಿ ಚೆನ್ನಾಗಿ ಬದುಕಲು ಎಷ್ಟು ಸಂಬಳ ಪಡೆಯಬೇಕು? ಎಂದು ಪ್ರಶ್ನಿಸಿದರು. ಆಗ ಎಲ್ಲರೂ ನಗಲು ಪ್ರಾರಂಭಿಸಿದರು. ಚಂದ್ರಶೇಖರ್ ತಮ್ಮ ಆಸನದಿಂದ ಎದ್ದು ನಿಂತು ತಮ್ಮ ಕುರ್ತಾವನ್ನು ಹರಡಿ, ಕರ್ಪೂರಿ ಅವರ ಕುರ್ತಾ ನಿಧಿಗೆ ದೇಣಿಗೆ ನೀಡಿ ಎಂದು ಹೇಳಲು ಪ್ರಾರಂಭಿಸಿದರು. ನೂರಾರು ರೂಪಾಯಿ ಹಣ ಸಂಗ್ರಹವಾಗಿದ್ದು, ಅದರಿಂದ ನೀವು ಕುರ್ತಾ-ಧೋತಿಯನ್ನು ಮಾತ್ರ ಖರೀದಿಸುತ್ತೀರಾ ಎಂದು ಕರ್ಪೂರಿ  ಅವರನ್ನು ಕೇಳಿದಾಗ, ಕರ್ಪೂರಿ ಅವರು “ನಾನು ಅದನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತೇನೆ” ಎಂದು ಹೇಳಿದ್ದರು.

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿ; 26 ತಿಂಗಳು ಜೈಲುವಾಸ
ಕರ್ಪೂರಿ ಠಾಕೂರ್ ಅವರು ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ತೊಡಗಿಸಿಕೊಂಡ ಸ್ವಾತಂತ್ರ್ಯ ಹೋರಾಟಗಾರ. ಸ್ವಾತಂತ್ರ್ಯ ಹೋರಾಟದಲ್ಲಿ ಧುಮಿಕಿದ ಕರ್ಪೂರಿ ಠಾಕೂರ್ 26 ತಿಂಗಳು ಜೈಲು ವಾಸ ಸಹ ಅನುಭವಿಸಿದ್ದರು.

ಇನ್ನು ಠಾಕೂರ್ ಅವರು ಮೊದಲ ಬಾರಿಗೆ 1970 ರಿಂದ 1971 ರ ವರೆಗೆ ಮತ್ತು ಎರಡನೇ ಬಾರಿಗೆ 1977ರಿಂದ 1979ರ ವರೆಗೆ ಬಿಹಾರದ ಮುಖ್ಯಮಂತ್ರಿಯಾಗಿದ್ದರು. 1988ರಲ್ಲಿ ತಮ್ಮ 64 ವಯಸ್ಸಿನಲ್ಲಿ ನಿಧನರಾದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *