ನಾನು ಗಾಂಧಿಯವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಉಗ್ರಗಾಮಿ ಎಂದು ಹೇಳಲ್ಲ!

ನಾಥೂರಾಂ ಗೋಡ್ಸೆ ಭಾರತದ ಮೊಟ್ಟ ಮೊದಲ ಭಯೋತ್ಪಾದಕ: ಬಿ.ಕೆ.ಹರಿಪ್ರಸಾದ್

ನಾಥೂರಾಂ ಗೋಡ್ಸೆ ಭಾರತದ ಮೊದಲ ಭಯೋತ್ಪಾದಕ. ಗೋಡ್ಸೆಯಿಂದಾಗಿ ನಮ್ಮ ದೇಶಕ್ಕೆ ಭಯೋತ್ಪಾದನೆ ಪ್ರವೇಶಿಸಿದೆ. ಪ್ರಪಂಚದಾದ್ಯಂತ 144 ದೇಶಗಳು ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯನ್ನು ಆಚರಿಸುತ್ತವೆ .

BK hariprasad

ಮಂಗಳೂರು: ನಾಥೂರಾಂ ಗೋಡ್ಸೆ ಭಾರತದ ಮೊದಲ ಭಯೋತ್ಪಾದಕ. ಗೋಡ್ಸೆಯಿಂದಾಗಿ ನಮ್ಮ ದೇಶಕ್ಕೆ ಭಯೋತ್ಪಾದನೆ ಪ್ರವೇಶಿಸಿದೆ. ಪ್ರಪಂಚದಾದ್ಯಂತ 144 ದೇಶಗಳು ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯನ್ನು ಆಚರಿಸುತ್ತವೆ ಏಕೆಂದರೆ ಅವರು ಒಂದೇ ಒಂದು ಗುಂಡು ಹಾರಿಸದೆ ಸ್ವಾತಂತ್ರ್ಯವನ್ನು ತಂದರು ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ನಡೆದ ವಿಚಾರ ಸಂಕೀರ್ಣದಲ್ಲಿ ಮಾತನಾಡಿದ ಅವರು, ಭಾರತದಲ್ಲಿರುವ ಸಾವಿರಾರು ಭಾಷೆ, ಜಾತಿಗಳನ್ನು ಒಂದಾಗಿ ಕೊಂಡೊಯ್ಯಬೇಕಾದರೆ ಯಾವುದಾದರೂ ಒಂದು ದೊಡ್ಡ ತತ್ವ ಅಥವಾ ಸಿದ್ಧಾಂತ ಬೇಕು. ಅದನ್ನೇ ಮಹಾತ್ಮಾ ಗಾಂಧಿಯವರು ಸರ್ವಧರ್ಮ ಸಮಭಾವ ಎಂದು ಕರೆದರು. ಆ ಸಿದ್ಧಾಂತಕ್ಕೋಸ್ಕರ ಪ್ರಾಣವನ್ನು ಬಿಟ್ಟರು.

ನಾನು ಗಾಂಧಿಯವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಉಗ್ರಗಾಮಿ ಎಂದು ಹೇಳಲ್ಲ. ಆತ ಈ ದೇಶದ ಮೊಟ್ಟ ಮೊದಲ ಭಯೋತ್ಪಾದಕ. ಈ ದೇಶದಲ್ಲಿ ಭಯೋತ್ಪಾದನೆ ಆರಂಭವಾಗಿದ್ದೇ ಗೋಡ್ಸೆಯಿಂದ. ಹಿಂದೂ ಧರ್ಮದ ಮೇಲೆ ನಂಬಿಕೆಯಿಟ್ಟಿದ್ದ ಗಾಂಧಿಯನ್ನು ಕೊಂದ ಹಿಂದೂವನ್ನು ಏನೆಂದು ಕರೆಯಬೇಕು ಎಂದು ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ದೇಶದಲ್ಲಿ ಇಂದು ಭಯದ, ಬೇಧ – ಪಕ್ಷಪಾತದ ವಾತಾವರಣವನ್ನು ಸೃಷ್ಟಿ ಮಾಡಿರುವ ಪ್ರತಿಗಾಮಿ ಶಕ್ತಿಗಳು, ಉಗ್ರ ಬಲಪಂಥಿಯರನ್ನು ನಾವು ಎದುರಿಸಲು ಮಹಾತ್ಮಾಗಾಂಧಿ ಒಂದೇ ಮಂತ್ರ ಬಳಸಿಕೊಳ್ಳಬೇಕು. ಗಾಂಧಿಯವರನ್ನು ಬಲಪಂಥೀಯ ಉಗ್ರಗಾಮಿಗಳು ಖಳನಾಯಕನಂತೆ ಮಾಡಲು ಹೊರಟಿದ್ದಾರೆ. 1991ರಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕದಿಂದ ಗುಜರಾತ್‌ನ ಪೋರಬಂದರ್ ಮಾಫಿಯಾದ ನಿಯಂತ್ರಣದಲ್ಲಿದೆ. ಇದು ಸದ್ಯ ದೇಶದಲ್ಲಿನ ಮಹಾತ್ಮಾ ಗಾಂಧಿಯವರ ಸ್ಥಿತಿಯನ್ನು ತೋರಿಸುತ್ತಿದೆ. ಇಲ್ಲಸಲ್ಲದ ಆರೋಪವನ್ನು ವಾಟ್ಸ್ಆ್ಯಪ್ ಯುನಿವರ್ಸಿಟಿ ಮೂಲಕ ಮಾಡುತ್ತಿದ್ದಾರೆ.‌ ಗಾಂಧಿ‌ಚಿಂತನೆ ಎಂದಿಗೆ ಮುಗಿಯುತ್ತೆದೆಯೋ ಅಂದಿಗೆ ಈ ದೇಶವು ಮುಗಿಯುತ್ತದೆ ಎಂದು ಬಿ.ಕೆ.ಹರಿಪ್ರಸಾದ್ ಹೇಳಿದರು.

ನಾವು ಸನಾತನ ಧರ್ಮ ಮತ್ತು ಸಂಸ್ಕೃತಿಯ ಬಗ್ಗೆ ಮಾತನಾಡುತ್ತಿದ್ದೇವೆ ಆದರೆ ನಮಗೆ ಧರ್ಮ ಯಾವುದು ಎಂದು ತೋರಿಸಿಕೊಟ್ಟವರು ಗಾಂಧಿ, ಯಾರನ್ನೂ ಸೋಲಿಸಲು ಗಾಂಧಿ ಹೋರಾಡಲಿಲ್ಲ ಬದಲಾವಣೆ ತರಲು ತಮ್ಮ ಹೋರಾಟ ನಡೆಸಿದ್ದರು. ಗಾಂಧಿ ಕರಾವಳಿ ಕರ್ನಾಟಕಕ್ಕೆ ಮೂರು ಬಾರಿ ಭೇಟಿ ನೀಡಿ ಹಿಂದೂ ಮತ್ತು ಮುಸ್ಲಿಮರಿಗೆ ಏಕತೆಯ ಸಂದೇಶವನ್ನು ನೀಡಿದರು. ಸ್ವಾವಲಂಬಿ ಬದುಕು, ಸ್ವರಾಜ್ಯದ ಕಲ್ಪನೆ, ಅಸ್ಪೃಶ್ಯತೆ ನಿವಾರಣೆ ಬಗ್ಗೆ ಉಪದೇಶ ನೀಡಿದ್ದರು.

ಮಂಡ್ಯದ ಕೆರೆಗೋಡು ಎಂಬಲ್ಲಿ ಬಿಜೆಪಿ ರಾಷ್ಟ್ರಧ್ವಜದ ಜಾಗದಲ್ಲಿ ಭಗವಾ ಧ್ವಜಾರೋಹಣ ಮಾಡುವ ಮೂಲಕ ಶಾಂತಿ ಕದಡುತ್ತಿದೆ ಎಂದು ಆರೋಪಿಸಿದ್ದಾರೆ. ಕಿಡಿಗೇಡಿಗಳ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆಯಾದ  ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಶೆಟ್ಟರ್ ಒಬ್ಬ ಸಜ್ಜನ ವ್ಯಕ್ತಿಯಾಗಿದ್ದು, ಅವರು ಕಾಂಗ್ರೆಸ್ ಪಕ್ಷದಲ್ಲಿ ಉಳಿಯಬೇಕಿತ್ತು, ಆದರೆ ಅವರ ಮುಂದಿನ ಜೀವನ ಚೆನ್ನಾಗಿರಲಿ ಎಂದು ಹಾರೈಸಿದರು.

ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿಕೆಗೆ ಹರಿಪ್ರಸಾದ್, ಅಶೋಕ್ ಮುಖ್ಯಮಂತ್ರಿಯಾಗುವ ಹಗಲುಗನಸು ಕಾಣುತ್ತಿದ್ದಾರೆ.  ಆದರೆ, ಆ ಹುದ್ದೆಗೆ ಅವರ ಪಕ್ಷದಲ್ಲಿ ಉದ್ದನೆಯ ಸರತಿ ಇದೆ ಮತ್ತು ಅವರ ಕನಸು ಈಡೇರುವುದಿಲ್ಲ ಎಂದು ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *