oddolaga drama – bahumukhi – ನಾಟಕ ವೀಕ್ಷಣೆ ಆರೋಗ್ಯಕ್ಕೆ ಪೂರಕ

ಬಹುಮುಖಿ : ಒಡ್ಡೋಲಗ ರಂಗ ಪರ್ಯಟನದ ಹೊಸ ನಾಟಕ

ಸಿದ್ದಾಪುರ. ಪ್ರತಿ ವರ್ಷವೂ ಹೊಸದೊಂದು ನಾಟಕದೊಂದಿಗೆ ತನ್ನ ರಂಗ ಪರ್ಯಟನ ಪ್ರಾರಂಭಿಸುವ ಒಡ್ಡೋಲಗ ರಂಗಪರ್ಯಟನ ಹಿತ್ಲಕೈ ಈ ವರ್ಷ ವಿವೇಕ ಶಾನಭಾಗ ವಿರಚಿತ ಬಹುಮುಖಿ ನಾಟಕವನ್ನು ಬಹು ಆಪ್ಯಾಯಮಾನವಾಗಿ ಪ್ರಸ್ತುತಪಡಿಸಿತು. ಪಟ್ಟಣದ ಶ್ರೀ ಶಂಕರ ಮಠದಲ್ಲಿ ನಡೆದ ಮೊದಲ ಪ್ರದರ್ಶನದ ಸಂದರ್ಭದಲ್ಲಿ ರಂಗ ಸಂಚಾರ ಉದ್ಘಾಟಿಸಿದ ಪತ್ರಕರ್ತ ಹಾಗೂ ಲೇಖಕ ಗಣೇಶ ಅಮ್ಮಿನಗಡ ನಾಟಕದ ಪಠ್ಯ ರಂಗದಲ್ಲಿ ಅಭಿನಯಗೊಳ್ಳುವುದನ್ನು ಪ್ರೇಕ್ಷಕರು ನೋಡಿ ಆನಂದಿಸಬೇಕು.ಅದರಿಂದ ನಮ್ಮ ಮನಸ್ಸು ಆರೋಗ್ಯಕರವಾಗಿರುತ್ತ ದೆ ಎಂದರು. ಕದಂಬ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಬೇಕ್ರಿ ರಮೇಶ ಮಂಡ್ಯ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಒಡ್ಡೋಲಗ ತಂಡದ ರಂಗ ಕಾಯಕವನ್ನು ಪ್ರಶಂಸಿದರು.

ಗಂಗಾಧರ ಕೊಳಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಚಾರ್ಯ ಎಂ.ಕೆ.ನಾಯ್ಕ ಹೊಸಳ್ಳಿ ಸ್ವಾಗತಿಸಿ ಪರಿಚಯಿಸಿದರು. ಪ್ರಜ್ಞಾ ಹಿತ್ಲಕೈ ವಂದಿಸಿದರು. ಸಂಧ್ಯಾ ಶಾಸ್ತ್ರಿ ನಿರೂಪಿಸಿದರು. ರೋಚಕ ಕತೆಯನ್ನು ಓದುಗರಿಗೆ ಕೊಡಬೇಕೆಂದು ಸುದ್ದಿಯನ್ನು ಬೆನ್ನಟ್ಟಿಹೋಗುವ ಪತ್ರಕರ್ತನಿಗೆ ಎದುರಾಗುವ ಜಗತ್ತು, ನಮ್ಮ ದಿನನಿತ್ಯದ ಬದುಕನ್ನು ಅನೇಕ ವಿಧಗಳಲ್ಲಿ ಪ್ರಭಾವಿಸುವ ಮಾಧ್ಯಮಗಳು ಮುಂತಾದ ವಿಷಯಗಳ ಸುತ್ತ ತಳುಕು ಹಾಕುವ ಬಹುಮುಖಿ ನಾಟಕ ಒಡ್ಡೋಲಗ ತಂಡದ ಗಣಪತಿ ಬಿ ಹಿತ್ಲಕೈ ಅವರ ನಿರ್ದೇಶನದಲ್ಲಿ ಮೊದಲ ಪ್ರಯೋಗದಲ್ಲೆ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ಸು ಕಂಡಿತು. ನಾಗರಾಜ ಬರೂರು, ಮಾಧವ ಶರ್ಮ ಕಲಗಾರ, ಕೇಶವ ಹೆಗಡೆ ಕಿಬ್ಳೆ, ಪುಷ್ಪಾ ರಾಘವೇಂದ್ರ ಸಾಗರ, ಪ್ರಸನ್ನಕುಮಾರ ಎನ್.ಎಮ್. ಸಾಗರ, ಗಣಪತಿ ಬಿ ಹಿತ್ತಲಕೈ, ಶ್ರೀರಾಮ ಗೌಡ ಹೊಸೂರು, ಸಂಧ್ಯಾ ಶಾಸ್ರ್ರಿ ಭೈರುಂಬೆ, ನವೀನಕುಮಾರ ಕುಣಜಿ, ಪ್ರೀತಿ ಹೆಗಡೆ, ನಂದಿತಾ ಭಾಗ್ವತ್ ಯಲ್ಲಾಪುರ, ಯೋಗೇಶ ಕುಣಜಿ, ಸಮರ್ಥ ಹೊನ್ನೆಕೈ ನಾಟಕದ ವಿವಿಧ ಪಾತ್ರಗಳಿಗೆ ಜೀವತುಂಬಿ ಅಭಿನಯಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *