ಡಿ.ಎಸ್.ಎಸ್.ನಿಂದ ವಿವಿಧ ಬೇಡಿಕೆಗಳಿಗೆ ಆಗ್ರಹ-ಮನವಿ


ಸಿದ್ದಾಪುರ
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಶಾಖೆಯ ನೇತೃತ್ವದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲದಾರರ ಮೂಲಕ ಮುಖ್ಯಮಂತ್ರಿಗಳಿಗೆ ಆಗ್ರಹಪೂರ್ವಕವಾಗಿ ಮನವಿ ಸಲ್ಲಿಸಲಾಯಿತು.


ಪಟ್ಟಣದಲ್ಲಿನ ಸನಂ.೧೧೧ಅ\೨ನ ೨೦ಗುಂಟೆ ಸರ್ಕಾರಿ ಪಡಜಾಗವನ್ನು ಸ್ವೀಪರ್ ಕ್ವಾಟರ‍್ಸಗೆ ಮೀಸಲಿಟ್ಟಿದ್ದು ಈಗ ಅಲ್ಲಿದ್ದ ಎಲ್ಲ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.ಪಟ್ಟಣದಲ್ಲಿ ಡಾ|ಬಿ.ಆರ್.ಅಂಬೇಡ್ಕರ್ ಭವನವನ್ನು ನಿರ್ಮಿಸಲು ಈ ಜಾಗ ಸೂಕ್ತಸ್ಥಳವಾಗಿದ್ದು ಈಗಾಗಲೇ ಸಹಾಯಕ ಕಮೀಷನರ್ ಅವರ ಮಂಜೂರಿಗೆ ಕಳುಹಿಸಲಾಗಿದೆ.ಆ ಸ್ಥಳವನ್ನು ಡಾ|ಅಂಬೇಡ್ಕರ್ ಭವನ ನಿರ‍್ಮಾಣಕ್ಕೆ ಮಂಜೂರು ಮಾಡಬೇಕು.ಪಟ್ಟಣದ ಮಿನಿ ವಿಧಾನಸೌಧದ ಎದುರು ಇರುವ ಡಾ| ಅಂಬೇಡ್ಕರ್ ವೃತ್ತ ರಸ್ತೆ ಅಗಲೀಕರಣದ ಕಾರಣ ಒಡೆದುಹಾಕಿದ್ದು ಅದನ್ನು ಮರುಸ್ಥಾಪನೆ ಮಾಡಿ ಅಂಬೇಡ್ಕರ್ ಪುತ್ಥಳಿಯನ್ನು ನಿರ‍್ಮಾಣ ಮಾಡಬೇಕು.ತಾಲೂಕಿನ ಬಳ್ಳಟ್ಟೆ ಗ್ರಾಮದಲ್ಲಿ ಅಕ್ರಮ ಮದ್ಯಮಾರಾಟ ಮತ್ತು ಮಟ್ಕಾ ಜೂಜು ಹೆಚ್ಚಾಗಿದ್ದು ಇದರಿಂದ ಪ.ಜಾ ಮತ್ತು ಪ.ಪಂಗಡದ ಮಕ್ಕಳು ಆ ವ್ಯಸನಕ್ಕೆ ಸಿಲುಕಿ ವಿದ್ಯಾಭ್ಯಾಸ ನಿಲ್ಲಿಸುತ್ತಿದ್ದು ಅದನ್ನು ನಿಯಂತ್ರಿಸಬೇಕು.ಅಲ್ಲದೇ ತಾಲೂಕಿನ ಹಲವೆಡೆ ಪರಿಶಿಷ್ಠ ಜಾತಿ,ಪಂಗಡದ ವಿದ್ಯಾರ್ಥಿಗಳು ಶಾಲೆಯನ್ನು ಅರ್ಧಕ್ಕೆ ಬಿಡುತ್ತಿದ್ದು ಅದಕ್ಕೆ ಸೂಕ್ತ ಪರಿಹಾರ ಕಂಡು ಆ ಮಕ್ಕಳ ಶಿಕ್ಷಣಕ್ಕೆ ಅವಕಾಶ ಕಲ್ಪಿಸಬೇಕು.ತಾಲೂಕಿನ ಹಲವೆಡೆ ಪರಿಶಿಷ್ಠರು ಸಾಗುವಳಿ ಮಾಡುವ ಜಮೀನುಗಳು ಹಂಗಾಮಿ ಲಾಗಣಿಯಲ್ಲಿ ಇದ್ದು ತಮ್ಮ ಹೆಸರು ಲಗತ್ತಿದ್ದರೂ ಕೂಡ ಅರಣ್ಯ ಇಲಾಖೆಯವರು ದಬ್ಬಾಳಿಕೆ ಮಾಡುತ್ತಿದ್ದಾರೆ.(ಉದಾ: ಬೇಡ್ಕಣಿ ಗ್ರಾಮದ ಸ,ನಂ.೩೭).ಇಂಥ ಸಾಗುವಳಿ ಜಮೀನನ್ನು ಪರಿಶಿಷ್ಠರಿಗೆ ಮಂಜೂರು ಮಾಡಬೇಕು.ಹಲಗೇರಿ ಗ್ರಾಪಂನ ಕುಳಿಬೀಡು ಗ್ರಾಮದ ಸ.ನಂ.೮೭ರಲ್ಲಿ ಸರಕಾರಿ ಪಡ ಗೋಮಾಳವಿದ್ದು ಅದರಲ್ಲಿ ೧ ಎಕರೆ ಪರಿಶಿಷ್ಠರ ಸ್ಮಶಾನಕ್ಕೆ ಮೀಸಲಿಡಬೇಕು.

ಕಾನಗೋಡಿನ ಸ.ನಂ ೨೬೧ರಲ್ಲಿ ಚಮಗಾರ ಜಾತಿಯವರಿಗೆ ಇದ್ದ ಸ್ಮಶಾನ ಜಾಗ ಒತ್ತುವರಿಯಾಗಿದ್ದು ಅದನ್ನು ಖುಲ್ಲಾ ಪಡಿಸಬೇಕು. ಯಶಸ್ವಿನಿ ಯೋಜನೆಯಲ್ಲಿ ಜಮೀನು ಪಹಣಿಪತ್ರಿಕೆ ಹೊಂದಿದವರಿಗೆ ಮಾತ್ರ ಸೌಲಭ್ಯದ ಅವಕಾಶವಿದ್ದು ಪಹಣಿ ಇಲ್ಲದ ಪರಿಶಿಷ್ಠರಿಗೆ ಅದರಲ್ಲಿ ಅವಕಾಶ ಒದಗಿಸಬೇಕು.ಪಟ್ಟಣದಲ್ಲಿ ವಾಸವಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದವರಿಗೆ ಬೋವಿವಡ್ಡರ ಸಮಾಜದವರಿಗೆ ವಸತಿಯೋಜನೆಯಲ್ಲಿ ಸೌಲಭ್ಯ ಒದಗಿಸಬೇಕು.ಪಟ್ಟಣದ ಬೋವಿವಡ್ಡರ ಹಾಗೂ ಚಮಗಾರ ಸಮಾಜದವರು ತಮ್ಮ ಕುಲಕಸುಬನ್ನು ನಡೆಸಲು ಈಗಿರುವ ಸ್ಥಳದಲ್ಲೇ ಅವಕಾಶ ಕಲ್ಪಿಸಬೇಕು ಎಂದು ದ.ಸಂ.ಸ.ನ ಜಿಲ್ಲಾ ಸಂಘಟಕ ಸಂಚಾಲಕ ಎಚ್.ಕೆ.ಶಿವಾನಂದ,ಶಿವರಾಂ ಬಳ್ಳಟ್ಟೆ, ತಾಲೂಕ ಸಂಚಾಲಕ ಅಣ್ಣಪ್ಪ ಹಸ್ಲರ್, ಪದಾಧಿಕಾರಿಗಳಾದ ಲಕ್ಷö್ಮಣ ಬೋರ‍್ಕರ್,ಲೋಕೇಶ ಚನ್ನಯ್ಯ, ಪರಶುರಾಮ ಬೋವಿವಡ್ಡರ ಮುಂತಾದ ಅನೇಕರು ಮನವಿಯಲ್ಲಿ ಆಗ್ರಹಿಸಿದ್ದಾರೆ. ಮನವಿ ಸಲ್ಲಿಕೆಗೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *