budget2024- ಮನುಷ್ಯತ್ವ ಇಲ್ಲದ ಬಜೆಟ್, ಜಿಲ್ಲೆಯ ಜನರಿಗೆ, ಜನರ ಸ್ವಾಭಿಮಾನಕ್ಕೆ ಅವಮಾನ ಮಾಡಿದ್ದೀರಿ :- ಅನಂತಮೂರ್ತಿ ಹೆಗಡೆ

ಜನರು ರಸ್ತೆ ಮೇಲೆ ಸಾಯುವುದನ್ನು ನೋಡುತ್ತಾ ಸರ್ಕಾರ ಮಜಾ ತೆಗೆದುಕೊಳ್ಳುತ್ತಿದೆ

ಶಿರಸಿ:- ಉಸ್ತುವಾರಿ ಸಚಿವ ಮಂಕಾಳ ವೈದ್ಯರೆ ನಿಮ್ಮ ಸರ್ಕಾರ
ಜಿಲ್ಲೆಯ ಜನರಿಗೆ ಅವಮಾನ ಮಾಡಿದೆ ,ಉತ್ತರ ಕನ್ನಡದ ಜನ ನಿಮ್ಮನ್ನು ಯಾವತ್ತೂ ಕ್ಷಮಿಸುವುದಿಲ್ಲ, ನಮ್ಮ ಸ್ವಾಭಿಮಾನಕ್ಕೆ ಪೆಟ್ಟುಬಿದ್ದಿದೆ. ಇದರ ಪರಿಣಾಮ ಮುಂದಿನ ದಿನದಲ್ಲಿ ನೋಡುವಿರಿ, ಜನರಿಗೆ ಅಸ್ಪತ್ರೆ ಕೊಡಿಸಲು ವಿಫಲರಾದ ತಾವು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  ಸಚಿವರೇ, ತಮಗೆ  ಒಂದು ಪ್ರಶ್ನೆ,

ತಮಗೆ ಜನರ ಬಗ್ಗೆ ಕರುಣೆ ಇಲ್ಲವೇ? ಸರಕಾರ ಬಂದು 9 ತಿಂಗಳಾದರೂ ಅಸ್ಪತ್ರೆ ಬಗ್ಗೆ ಒಂದೇ ಒಂದು ಸಭೆ ಇಲ್ಲ, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಘೋಷಣೆಯಾಗಿದ್ದ ಆಸ್ಪತ್ರೆಗೆ ಹಣ ಬಿಡುಗಡೆ ಇಲ್ಲ,

ತಮಗೆ ಲಾಭ ಆಗುವ ಯೋಜನೆಗೆ ಸಾವಿರಾರು ಕೋಟಿ ಕೊಡುತ್ತೀರಿ, ಆಸ್ಪತ್ರೆಗೆ ಒಂದು ರೂಪಾಯಿ ಕೂಡ ಇಲ್ಲ, ಅಲ್ಲಿಗೆ ಸರ್ಕಾರಕ್ಕೆ ಮನುಷ್ಯತ್ವ ಇಲ್ಲ ಅಂತ ನಮಗೆ ಮನವರಿಕೆಯಾಗಿದೆ. ಜನ ರಕ್ತದ ಮಡುವಿನಲ್ಲಿ ರಸ್ತೆ ಮೇಲೆ ಬಿದ್ದು ಒದ್ದಾಡುವಾಗ ಪಡುವ ನೋವು, ಅಸ್ಪತ್ರೆಗಾಗಿ ಮಂಗಳೂರಿಗೆ ಹೋಗುವಾಗ ಪಡುವ ಕಷ್ಟ, ನಿಮ್ಮ ಸರಕಾರವನ್ನು ಶಾಪ ಹಾಕದೇ ಬಿಡುವುದಿಲ್ಲ. ಕಳೆದ 2 ಬಜೆಟ್ ನಲ್ಲಿ ಹಣ ಕೊಡದೇ ತಮಾಷೆ ಮಾಡುತ್ತಿದ್ದೀರಿ ಅಲ್ಲವೇ ?
ಎಂದು ಪ್ರಶ್ನಿಸಿದ್ದಾರೆ.

ಇಷ್ಟು ಹೋರಾಟ ಆದರೂ ಒಂದೇ ಒಂದು ಮಾತನಾಡದ ನೀವು ಶಾಸಕನಾಗಿ ಆಯ್ಕೆಯಾದರೆ ಸ್ವಂತ ಹಣದಿಂದ ಅಸ್ಪತ್ರೆ ಮಾಡುತ್ತೇನೆ ಎಂದು ಸೀರಿಯಸ್ಸಾಗಿ ಹೇಳಿದ್ದೀರಾ ಅಥವಾ ತಮಾಷೆ ಮಾಡಿದ್ದೀರಾ? ತಿಳಿಸಿ. ಅಸ್ಪತ್ರೆ ಮಾಡುವುದಿಲ್ಲ ಅಂತ ಆದರೆ ಹೇಳಿಬಿಡಿ, ನಮಗೆ ಏನು ಮಾಡಬೇಕೆಂದು ಗೊತ್ತಿದೆ.
ಮುಂದಿನ ದಿನದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮದಲ್ಲಿ ಓಡಾಡಿ ಜನಾಂದೋಲನ ನಿರ್ಮಾಣ ಮಾಡಿ, ನಿಮ್ಮ ರಾಜೀನಾಮೆ ಮತ್ತು ಅಸ್ಪತ್ರೆ ನಿರ್ಮಾಣಕ್ಕೆ ಹೋರಾಟ ಮಾಡುತ್ತೇವೆ.
ಹೋರಾಟದಿಂದ ಏನಾಗುವುದು ಅಂತ ತಾತ್ಸಾರ ಬೇಡ , ಭಾರತಕ್ಕೆ ಸ್ವಾತಂತ್ರ್ಯ ಬಂದಿದ್ದೆ ಹೋರಾಟದಿಂದ
ನೆನಪಿಡಿ.
ಹಿಂದಿನ ಸರ್ಕಾರ ಯಾಕೆ ಮಾಡಲಿಲ್ಲ ಅಂತ ಕೇಳಬೇಡಿ, ಅವರು ಮಾಡಿಲ್ಲ ಅಂತಾನೇ ನಿಮಗೆ ಜನ ಅಧಿಕಾರ ಕೊಟ್ಟಿದ್ದಾರೆ ,
ನಾನು ಏಕಾಂಗಿ ಅಲ್ಲ, ನನ್ನ ಜೊತೆ ಸಾವಿರಾರು ಬಿಸಿ ರಕ್ತದ ಯುವಕರಿದ್ದಾರೆ , ಮುಂದಿನ ದಿನ ಜನರ ಆಕ್ರೋಶದ ಪರಿಣಾಮ ಏನಾಗುತ್ತದೆ ನೋಡಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *