ಬಿ.ಜೆ.ಪಿ. ನಾಯಕರಿಗ್ಯಾಕೆ ತಮ್ಮ ಪಕ್ಷದವರ ಮೇಲೇ ಸಿಟ್ಟು!?

ರಾಮಮಂದಿರ, ಹಿಂದುತ್ವ, ದೇಶಪ್ರೇಮದ ಬಾಣ ಬಿಟ್ಟು-ಬಿಟ್ಟು ಸೋತಿರುವ ಬಿ.ಜೆ.ಪಿ.ಗೆ ಈಗ ಹೊಸ ಅಸ್ತ್ರ ಸಿಗದ ಹತಾಸೆ ಕಾಡುತ್ತಿದೆಯೆ? ಎನ್ನುವ ಪ್ರಶ್ನೆ ಈಗ ಭಾರತೀಯರನ್ನು ಕಾಡುತ್ತಿದೆ.

ಸತ್ತ ಸಾವು ಹೊಡೆಯುವಂತೆ ಕಾಂಗ್ರೆಸ್‌ ವಿರುದ್ಧ ವಿಷ ಕಾರುವ ಬಿ.ಜೆ.ಪಿ. ಮುಖಂಡರು ಚುನಾವಣೆ ಮೊದಲೇ ಶಸ್ತ್ರ ತ್ಯಾಗ ಮಾಡಿದ್ದಾರೆಯೆ? ಎನ್ನುವ ಅನುಮಾನ ಈಗ ಎಲ್ಲರನ್ನೂ ಕಾಡುವಂತಾಗಿದೆ.

ಇಂಡಿಯಾ ಒಕ್ಕೂಟ ನಿಧಾನವಾಗಿ ಮೋದಿ ವಿರುದ್ಧ ಒಂದಾಗುತಿದ್ದರೆ ಪ್ರಧಾನಿ ಮೋದಿ ಹೋದಲ್ಲಿ ಬಂದಲ್ಲಿ ಕಾಂಗ್ರೆಸ್‌ ನಿಂದಿಸುತ್ತಾ ಕಳೆದ ಹತ್ತು ವರ್ಷ ಆಡಳಿತ ಮಾಡಿದ್ದು ಬಿ.ಜೆ.ಪಿ. ನೇತೃತ್ವದ ಎನ್.ಡಿ.ಎ. ಯೋ? ಕಾಂಗ್ರೆಸ್ಸೋ ಎನ್ನುವ ಗೊಂದಲದಲ್ಲಿ ಮಾತನಾಡಿದಂತೆ ಗೋಚರಿಸತೊಡಗಿದ್ದಾರೆ.

ಕಾಂಗ್ರೆಸ್‌ ಮತ್ತು ಇತರ ವಿರೋಧ ಪಕ್ಷಗಳನ್ನು ಐ.ಟಿ. ಇ.ಡಿ ಗಳ ಮೂಲಕ ಬೇಟೆಯಾಡಿದ ಮೋದಿ ಪರಿವಾರ ಹತಾಸೆಯ ಹಂತ ತಲುಪಿದಂತಿದ್ದು ತನ್ನ ಎಲ್ಲಾ ತಂತ್ರ-ಮಂತ್ರ ಬಳಸಿದ ಮೇಲೆನಿತ್ರಾಣನಾಗುವಂತಾದ ಮೋದಿ ನೇತೃತ್ವದ ಪರಿವಾರ ಈಗ ಹತಾಸೆಯ ಹಂತ ದಾಟಿ ಸ್ಯಾಡಿಸ್ಟ್‌ ಎನಿಸಿಕೊಳ್ಳತೊಡಗಿದೆ.

ಇದಕ್ಕೆ ಉದಾಹರಣೆ- ದೇಶದಾದ್ಯಂತ ಪ್ರಭಾವಿ ನಾಯಕರನ್ನು ಹೆದರಿಸಿ ಪಕ್ಷಕ್ಕೆ ಸೇರಿಸಿಕೊಂಡಿರುವ ಬಿ.ಜೆ.ಪಿ. ಗುಜರಾತ್‌ (ಇನ್ನೂ ಹೆಚ್ಚು ಸ್ಥಾನ) ನಲ್ಲಿ ಮತ್ತೆ ಗೆಲ್ಲಲು ಅವಕಾಶವೇ ಇಲ್ಲ, ಮಧ್ಯಪ್ರದೇಶ, ಉತ್ತರ ಪ್ರದೇಶಗಳ ಸ್ಥಿತಿ ಗುಜರಾತ್‌ ಗಿಂತ ಭಿನ್ನವಿಲ್ಲ. ದೆಹಲಿ, ಪಂಜಾಬ್‌,ರಾಜಸ್ಥಾನ, ಕರ್ನಾಟಕ, ಕೇರಳ, ತಮಿಳುನಾಡು,ಆಂಧ್ರಗಳಲ್ಲಿ ಈ ಚುನಾವಣೆಯಲ್ಲಿ ಬಿ.ಜೆ.ಪಿ. ಪಡೆದುಕೊಳ್ಳುವುದಕ್ಕಿಂತ ಕಳೆದುಕೊಳ್ಳುವುದೇ ಹೆಚ್ಚು. ಈ ವಾಸ್ತವ ಅರಿತಿರುವ ಬಿ.ಜೆ.ಪಿ. ನಾಯಕರು ಹತಾಶರಾಗಿ ಮತಿವಿಕಲರಂತೆ ಅರಚುತಿದ್ದಾರಾ ಎನ್ನುವ ಅನುಮಾನ ಸತ್ಯವಾಗುವಂತೆ ಬಿ.ಜೆ.ಪಿ. ನಾಯಕರ ವರ್ತನೆ ಇದೆ.

ಅಹಿಂದ್‌ ವಿರೋಧಿಗಳಾದ ಮನುವಾದಿ ಬಿ.ಜೆ.ಪಿ. ದೇಶದಲ್ಲಿ ಜನ ಕೇಳದೆ ಇ.ವಿ.ಎಸ್.‌ ಮೀಸಲಾತಿ ಪ್ರಕಟಿಸಿತು. ಮುಸ್ಲಿಂ ಮೀಸಲಾತಿ ವಿರೋಧದ ನೆಪದಲ್ಲಿ ಅಲ್ಪಸಂಖ್ಯಾತ ಮತಧರ್ಮಗಳ ವಿರೋಧಕ್ಕೆ ಕಾರಣವಾಗಿರುವ ಬಿ.ಜೆ.ಪಿ. ದೇಶದ ಬಹುಸಂಖ್ಯಾತ ಮೂಲನಿವಾಸಿ ಬಹುಜನರ ವಿರೋಧಿ ಎಂಬುದನ್ನು ಮತ್ತೆ ಮತ್ತೆ ಸಾಬೀತು ಮಾಡಿದೆ.

ಈ ಹಿನ್ನೆಲೆಯಲ್ಲಿ ಪಿ.ಎಂ. ಕೇರ್ಸ್‌, ಚುನಾವಣಾ ಬಾಂಡ್‌ ಬ್ರಷ್ಟಾಚಾರದ ಬಗ್ಗೆ ಉತ್ತರಿಸುವ ನೈತಿಕತೆ ಕಳೆದುಕೊಂಡಿರುವ ಬಿ.ಜೆ.ಪಿ. ನಿರಂತರ ಕಾಂಗ್ರೆಸ್‌ ವಿರೋಧ ಮಾಡುವುದನ್ನು ಇಂಡಿಯಾದ ಜನತೆ ಒಪ್ಪುತ್ತಿಲ್ಲ.

ತಾನು ಕಳ್ಳ, ಪರರನ್ನು ನಂಬ ಎನ್ನುವಂತಾಗಿರುವ ಬಿ.ಜೆ.ಪಿ. ಬೂಟಾಟಿಕೆಗೆ ಮೋದಿಯೇ ಮಾದರಿಯಾದರೆ ಅವರ ಪಕ್ಷ ಪರಿವಾರದ ನಾಯಕರು ಈಗ ಈ ವಿಚಾರದಲ್ಲಿ ಗೇಲಿಯ ವಸ್ತುವಾಗಿದ್ದಾರೆ.

ಮೋದಿ ವಿರೋಧ ಪಕ್ಷಗಳನ್ನು ಟೀಕಿಸುವುದು ತಾನು ತನ್ನ ಪರಿವಾರವನ್ನೇ ಹೊಗಳಿಕೊಳ್ಳುವುದು ಮಾಡುತ್ತಾ ಆಡುತ್ತಿರುವ ಕಪಟ ನಾಟಕ ಎಂಥ ದಡ್ಡರಿಗೂ ಅರ್ಥವಾಗುತ್ತದೆ.

ಕೇಜ್ರವಾಲ್‌ ವಿರುದ್ಧ,ರಾಹುಲ್‌ ವಿರುದ್ಧ, ಖರ್ಗೆ ವಿರುದ್ಧ. ಪಿಣರಾಯಿ ವಿರುದ್ಧ, ಸ್ಟಾಲಿನ್‌ ವಿರುದ್ಧ, ಉದಯನಿಧಿ ವಿರುದ್ಧ, ಮಮತಾ ಬ್ಯಾನರ್ಜಿ ವಿರುದ್ಧ, ಉದ್ಭವ್‌ ಠಾಕ್ರೆ ವಿರುದ್ಧ ಹೀಗೆ ಮೋದಿ, ಬಿ.ಜೆ.ಪಿ. ಪರಿವಾರ ಕತ್ತಿಮಸೆಯುತ್ತಿರುವ ಪ್ರಮುಖರಲ್ಲಿ ಬಿ.ಜೆ.ಪಿ.ಯವರನ್ನು ಬಿಟ್ಟು ಉಳಿದವರೆಲ್ಲರೂ ಸೇರಿರುವುದು ಕಾಕತಾಳೀಯವಲ್ಲ.

ಇದು ದೇಶದ ಕತೆಯಾದರೆ ವಿರೋಧ ಪಕ್ಷದ ನಾಯಕ ಅಶೋಕ ಬಾಲಿಶತನ, ಈಶ್ವರಪ್ಪ ಮೂರ್ಖತನ, ಪ್ರತಾಪಸಿಂಹನ ಹುಚ್ಚಾಟ, ತೇಜಸ್ವಿಸೋರ್ಯನ ಗೋಸುಂಬೆತನ ಅನಂತಕುಮಾರ ಹೆಗಡೆಯ ತಿಕ್ಕಲುತನ ಇವುಗಳನ್ನೆಲ್ಲಾ ನೋಡುತ್ತಿರುವ ಕನ್ನಡಿಗರು ಮತಾಂಧ ಅವಿವೇಕಿಗಳು ಮಾತ್ರ ಹೀಗಿರಲು ಸಾಧ್ಯ ಎಂದು ಛೀ.. ಥೂ… ಎನ್ನುತಿದ್ದಾರೆ.

ಇಷ್ಟಾದ ಮೇಲೆ ಅಸಲು ವಿಚಾರಕ್ಕೆ ಬಂದರೆ ಉತ್ತರ ಕನ್ನಡ ಸಂಸದ ತನ್ನ ಲಾಗಾಯ್ತಿನ ನೀಚತನದಂತೆ ಭಟ್ಕಳದಲ್ಲಿ ಸಭೆಯ ಮೇಜಿನ ಮೇಲೆ ಕುರ್ಚಿ ಇಟ್ಟು ತಾಕತ್ತಿದ್ದರೆ ನೀವ್ಯಾರಾದರೂ ಕೂರಿ ಎಂದು ತನ್ನ ಷಂಡತನ ಪ್ರದರ್ಶಿಸಿದ್ದು ಕರಾವಳಿ ಜನರ ಬೇಸರಕ್ಕೆ ಕಾರಣವಾಗಿದೆ. ಒಂದೆರಡು ದಶಕಗಳ ಧೀರ್ಘ ನಿದ್ರೆಯಿಂದ ಎಚ್ಚೆತ್ತ ಈ ಹೆಗಡೆ ಟಿಕೇಟ್‌ ತಪ್ಪುವ ಹೆದರಿಕೆಯಿಂದ ಹೀಗೆ ತನ್ನ ಪಕ್ಷದ ಕಾರ್ಯಕರ್ತರ ಮೇಲೆ ರೇಗುತಿದ್ದಾನೆ ಎಂದು ಸಂಘದ ಜನರೇ ಮತನಾಡುತಿದ್ದಾರೆ. ಇದು ಮೂವತ್ತು ವರ್ಷ ಜನಪ್ರತಿನಿಧಿಯಾದ ಒಬ್ಬನಿಷ್ಪ್ರಯೋಜಕ ಸಂಸದ,ಮಾಜಿ ಮಂತ್ರಿಯ ಸ್ಥಿತಿಯಾದರೆ ಇದೇ ರೀತಿ ನಿರಂತರ ಮೂವತ್ತು ವರ್ಷ ಜನಪ್ರತಿನಿಧಿಯಾಗಿ ಕನಿಷ್ಟ ಸೌಜನ್ಯ ದಿಂದಾದರೂ ಮಾತನಾಡುತ್ತಾರೆ ಎನ್ನುವ ರಿಯಾಯತಿ ಇರುವ ಮಾಜಿ ಸ್ಫೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕತೆ ಇದಕ್ಕಿಂತ ಭಿನ್ನವಲ್ಲ. ರಾಜ್ಯ ವಿಧಾನಸಭೆಯ ಕಳೆದ ಅವಧಿಯ ಸೋಲಿನಿಂದ ಹೊರಬರದ ಕಾಗೇರಿ ಒಂದು ವರ್ಷದಲ್ಲಿ ಕನಿಷ್ಟ ಹತ್ತು ಬಾರಿ ಅವರ ಪಕ್ಷದ ಪ್ರಮುಖರು, ಕಾರ್ಯಕರ್ತರ ವಿರುದ್ಧ ವೇ ಹರಿಹಾಯ್ದಿದ್ದಾರೆ.

ಸಿದ್ಧಾಪುರದಲ್ಲಿ ನಡೆದ ಬಿ.ಜೆ.ಪಿ. ಪಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಗೇರಿ ಮೋದಿಯಂತೆ ಅನಾವಶ್ಯಕ ಆರೋಪದ ಮಾತುಗಳನ್ನಾಡಿದರು. ಪಕ್ಷಕ್ಕೆ ಯಾರೂ ಅನಿವಾರ್ಯರಲ್ಲ, ತನ್ನಿಂದಲೇ ಎಲ್ಲಾ ಎನ್ನುವ ವ್ಯಕ್ತಿಗಳಿಗೆ ಸಂಘಟನೆ ಉತ್ತರ ನೀಡುತ್ತದೆ ಎಂದರು. ಈ ಟಾಂಗ್‌, ನಂಜಿನ ಮಾತು ಅವರದೇ ಪಕ್ಷದ ಕೆಲವು ಭಿನ್ನಮತೀಯರ ವಿರುದ್ಧ ಎನ್ನುವುದು ಬಹಿರಂಗ ಗುಟ್ಟು.

ಅಭಿವೃದ್ಧಿ, ಜನಪರತೆ ಇಲ್ಲದ ಮತಾಂಧ ಪರಿವಾರ ಅಧಿಕಾರ ಇದ್ದಾಗ, ಇಲ್ಲದಾಗ, ಕೈ ತಪ್ಪಿ ದಾಗ ತಲುಪುವ ಹೀನಾಯ ಸ್ಥಿತಿಗೆ ಬಿ.ಜೆ.ಪಿ. ಮತ್ತು ಬಿ.ಜೆ.ಪಿ. ಮುಖಂಡರ ಈ ವರ್ತನೆಗಳು ಸಾಕ್ಷಿ. ಈಗ ಜನರ ಕೈಯಲ್ಲಿ ಅಧಿಕಾರವಿದೆ ಇಂಥ ಸುಳ್ಳುಬುರುಕ, ಜನವಿರೋಧಿ, ಜನದ್ರೋಹಿ, ದೇಶದ್ರೋಹಿ ಮತೀಯಶಕ್ತಿಗಳಿಗೆ ಇಂಡಿಯಾದಲ್ಲಿ ಉಳಿಗಾಲ ಬೇಕೆ?

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *