ಮೆಚ್ಚುಗೆಗೆ ಕಾರಣವಾದ ಅಘನಾಶಿನಿ ಸಾಂಸ್ಕೃತಿಕ ಸಂಭ್ರಮ,ಮಹಿಳೆಯರು ನೀರಿನ ಬಳಕೆ ಕಡಿಮೆ ಮಾಡಲಿ: ಭೀಮಣ್ಣ ನಾಯ್ಕ್

ನದಿ ತೀರದಲ್ಲೊಂದು ವಿನೂತನ ಕಾರ್ಯಕ್ರಮ| ಮೆಚ್ಚುಗೆಗೆ ಕಾರಣವಾದ ಅಘನಾಶಿನಿ ಸಾಂಸ್ಕೃತಿಕ ಸಂಭ್ರಮ
ಮಹಿಳೆಯರು ನೀರಿನ ಬಳಕೆ ಕಡಿಮೆ ಮಾಡಲಿ: ಭೀಮಣ್ಣ ನಾಯ್ಕ್

ಶಿರಸಿ: ಬಿರು ಬೇಸಿಗೆ ಹೆಚ್ಚುತ್ತಿದೆ. ಎಲ್ಲ ಕಡೆ ನೀರಿನ ಅಭಾವ ತೀವ್ರವಾಗುತ್ತಿದೆ. ಮಹಿಳೆಯರು ನೀರಿನ ಬಳಕೆಯನ್ನು ಕಡಿಮೆ ಮಾಡಬೇಕು. ನೀರನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಆಲೋಚಿಸಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ್ ಕಿವಿಮಾತು ಹೇಳಿದರು.
ಸಿದ್ದಾಪುರ ತಾಲೂಕಿನ ಕಾನಸೂರು ಪಂಚಾಯತ ವ್ಯಾಪ್ತಿಯ ದಂಟಕಲ್ ಅಘನಾಶಿನಿ ನದಿ ತೀರದಲ್ಲಿ ನಡೆದ ಅಘನಾಶಿನಿ ಸಾಂಸ್ಕೃತಿಕ ಸಂಭ್ರಮ ಎನ್ನುವ ವಿನೂತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಸಂಗೀತ ಕಾರ್ಯಕ್ರಮಗಳು ಹೆಚ್ಚಬೇಕು. ಅಘನಾಶಿನಿ ನದಿ ತೀರದಲ್ಲಿ ನಡೆಯುತ್ತಿರುವ ವಿನೂತನವಾದ ಸಾಂಸ್ಕೃತಿಕ ಕಾರ್ಯಕ್ರಮ ಇನ್ನಷ್ಟು ಹೆಚ್ಚಲಿ ಎಂದು ಹಾರೈಸಿದರು.


ಅಘನಾಶಿನಿ ನದಿ ಶಿರಸಿ-ಸಿದ್ಧಾಪುರದವರ ಪಾಲಿಗೆ ಜೀವ ನದಿ. ಈ ನದಿಯನ್ನು ನಂಬಿ ಸಹಸ್ರಾರು ಜನರು ಜೀವನ ನಡೆಸುತ್ತಿದ್ದಾರೆ. ಈ ನದಿಯಲ್ಲಿ ಆತಂಕಕಾರಿಯಾಗಿ ನೀರಿನ ಹರಿವು ಕಡಿಮೆಯಾಗಿದೆ. ಶಿರಸಿ ನಗರಕ್ಕೂ ಈ ನದಿ ನೀರನ್ನು ಉಣ್ಣಿಸುವ ಕಾರ್ಯ ಮಾಡುತ್ತಿದೆ. ಈ ನದಿ ನೀರು ಎಲ್ಲರಿಗೂ ಮುಖ್ಯ. ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕಾದ ಅಗತ್ಯವಿದೆ. ಶಿರಸಿ ನಗರವಾಸಿಗಳು ಹಾಗೂ ಗ್ರಾಮೀಣ ಭಾಗದ ಜನರು ಅಘನಾಶಿನಿ ನೀರನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು.


ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಯುವ ಧುರೀಣ ಶ್ರೀಪಾದ ಹೆಗಡೆ ಕಡವೆ ಮಾತನಾಡಿ, ನದಿ ತೀರದಲ್ಲಿ ವೇದಿಕೆ ನಿರ್ಮಿಸಿ, ಅಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುತ್ತಿರುವ ಮೊದಲ ನಿದರ್ಶನ ಇದು. ಇದೊಂದು ವಿನೂತನ ಕಾರ್ಯಕ್ರಮ. ಇಂತಹ ಅಪರೂಪದ ಕಾರ್ಯಕ್ರಮಗಳು ಇನ್ನಷ್ಟು ಹೆಚ್ಚಲಿ ಎಂದು ಹಾರೈಸಿದರು.
ಅತಿಥಿಗಳಾದ ಕೆ. ಆರ್. ಹೆಗಡೆ ಕಾನಸೂರು ಅವರು ಮಾತನಾಡಿ, ದಂಟಕಲ್ ಭಾಗದ ಜನರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಎತ್ತಿದ ಕೈ. ಸದಾ ಒಂದಿಲ್ಲೊಂದು ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಅವರು ಇದೀಗ ನದಿ ತೀರದಲ್ಲಿ ಸಂಗೀತ ಕಾರ್ಯಕ್ರಮ ನಡೆಸುವ ಮೂಲಕ ಹೊಸತನಕ್ಕೆ ಹೆಜ್ಜೆ ಹಾಕಿದ್ದಾರೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಕಾನಸೂರು ಗ್ರಾಮ ಪಂಚಾಯತ ಸದಸ್ಯ ಕೃಷ್ಣಮೂರ್ತಿ ಹೆಗಡೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ನಾಗೇಂದ್ರ ಮುತ್ಮುರಡು, ಪತ್ರಕರ್ತ ಪ್ರದೀಪ ಶೆಟ್ಟಿ, ನಾಗರಾಜ ಹೆಗಡೆ ಉಪಸ್ಥಿತರಿದ್ದರು. ಶ್ರೀಕಾಂತ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ವಿನಯ್ ಹೆಗಡೆ ಪ್ರಸ್ತಾವಿಸಿದರು.


ತೆರೆಮರೆಯ ಸಾಧಕರಿಗೆ ಸನ್ಮಾನ
ಕಾರ್ಯಕ್ರಮದಲ್ಲಿ ಜಾನುವಾರುಗಳಿಗೆ ಔಷಧಿ ನೀಡುತ್ತಾ ಬಂದಿರುವ ನಾಟಿ ವೈದ್ಯ ಸುಬ್ರಾಯ ಹೆಗಡೆ, ಮಸಾಜ್ ಥೆರಪಿ ಮೂಲಕ ಸೀತಾರಾಮ ಹೆಗಡೆ ಸಂಗೊಳ್ಳಿಮನೆ, ಬಾಳಂತಿ ಆರೈಕೆಯಲ್ಲಿ 6 ದಶಕಗಳ ಕಾಲ ಸೇವೆ ಮಾಡಿದ ಜಾನಿ ಗಣಪ ಗೌಡ ಹಾಗೂ ಅಂತಾರಾಷ್ಟ್ರೀಯ ಛಾಯಾಚಿತ್ರಗ್ರಾಹಕ ನಾಗೇಂದ್ರ ಹೆಗಡೆ ಮುತ್ಮುರಡು ಅವರುಗಳನ್ನು ಸನ್ಮಾನಿಸಲಾಯಿತು.


ಜನಮನ ಸೆಳೆದ ಸಂಗೀತ ಕಾರ್ಯಕ್ರಮ
ಕಾವ್ಯಶ್ರೀ ಅನಂತ ಹೆಗಡೆ ಅವರ ಗಾಯನ ಕಾರ್ಯಕ್ರಮ ಸಭಿಕರ ಮನಸ್ಸು ಸೂರೆಗೊಂಡಿತು. ನಂತರ ಅನಂತ ಹೆಗಡೆ ಹಾಗೂ ಅವರ ಶಿಷ್ಯರಿಂದ ತಬಲಾ ವಾದನ ಎಲ್ಲರನ್ನೂ ತಲೆದೂಗುವಂತೆ ಮಾಡಿತು. ಕೊನೆಯಲ್ಲಿ ರೇಖಾ ದಿನೇಶ್ ಅವರು ನಡೆಸಿಕೊಟ್ಟ ಸಂಗೀತ ಕಾರ್ಯಕ್ರಮ ಎಲ್ಲರನ್ನೂ ರಂಜಿಸಿತು. ಸತೀಶ್ ಹೆಗ್ಗಾರ್ ಹಾರ್ಮೋನಿಯಂ ಜೊತೆಗಾರಿಕೆ ನೀಡಿದರೆ, ಗಣೇಶ್ ಗುಂಡ್ಕಲ್ ತಬಲಾ ಸಾಥ್ ನೀಡಿದರು. ನದಿಯಲ್ಲಿ ಕಾಲು ಇಳಿ ಬಿಟ್ಟು ಸಂಗೀತವನ್ನು ಆಸ್ವಾದಿಸಿದ ನೂರಾರು ಜನರು ಹೊಸ ರೀತಿಯ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *