ಉತ್ತರ ಕನ್ನಡದ ದೊಡ್ಡ ಜನಸಂಖ್ಯೆಗೆ ಮತ್ತೆ ಕೈ ಕೊಟ್ಟ ಕಾಂಗ್ರೆಸ್! ಕುಮಾರ ಬಂಗಾರಪ್ಪ ಗೆಲ್ಲುವ ಕುದುರೆಯಾಗುವ ಅವಕಾಶ

ಲೋಕಸಭೆ ಚುನಾವಣೆ ೨೪ ರ ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ ಬಹುತೇಕ ಪಕ್ಕಾ ಆದಂತಿದೆ. ನಾಮಧಾರಿ, ದೀವರು ಅಥವಾ ಈಡಿಗರ ಜನಸಂಖ್ಯೆ ಆಧಾರದಲ್ಲಿ ಮಾಜಿ ಸಚಿವ ಕುಮಾರ ಬಂಗಾರಪ್ಪ ಉತ್ತರ ಕನ್ನಡದ ಬಿ.ಜೆ.ಪಿ. ಅಭ್ಯರ್ಥಿ ಎನ್ನುವ ಸಮೀಕರಣವೂ ಸೇರಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಈಡಿಗರಿಗೆ ಆದ ಅವಮಾನದ ಬಗ್ಗೆ ಚರ್ಚೆಯಾಗುತ್ತಿದೆ.

ಉತ್ತರ ಕನ್ನಡ ಕ್ಷೇತ್ರದಲ್ಲಿ ಮರಾಠಿ ಮಾತನಾಡುವ ಮರಾಠಾ ಭಾಷಿಕರು ಬಹುಸಂಖ್ಯಾತರು ಅವರನ್ನು ಬಿಟ್ಟರೆ ಉತ್ತರ ಕನ್ನಡದ ಬಹುಸಂಖ್ಯಾತ ಸಮೂದಾಯ ಈಡಿಗರು, ದೀವರು, ಹಳೆಪೈಕರು, ನಾಮಧಾರಿಗಳೆಂದು ಕರೆಸಿಕೊಳ್ಳುವ ಇಲ್ಲಿಯ ಈಡಿಗರು ಉತ್ತರ ಕನ್ನಡ ಜಿಲ್ಲೆಯ ದೊಡ್ಡ ಸಂಖ್ಯೆಯ ಹಿಂದುಳಿದ ಸಮೂದಾಯ. ಇವರೊಂದಿಗೆ ಮುಸ್ಲಿಂರು,ಇತರ ಹಿಂದುಳಿದವರು, ಪರಿಶಿಷ್ಟರು ಸೇರಿ ಹತ್ತು ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಈ ಸಮೂದಾಯದ ದೇವರಾಯ ನಾಯಕ ಹಿಂದಿನ ಕೆನರಾ ಕ್ಷೇತ್ರವನ್ನು ನಿರಂತರ ಮೂರು ಬಾರಿ ಪ್ರತಿನಿಧಿಸಿದ್ದರು. ಇವರ ನಂತರ ಅನಂತಕುಮಾರ್‌ ಹೆಗಡೆ ಬಿ.ಜೆ.ಪಿ.ಯ ಸಂಸದರಾಗಿ, ಸಚಿವರಾಗಿ ಈಗ ಟಿಕೇಟ್‌ ಸಿಗದೆ ಹತಾಶರಾಗಿ ಮೂಲೆ ಸೇರಿದ್ದಾರೆ.

ಈ ಕ್ಷೇತ್ರದ ಬಹುಸಂಖ್ಯಾತ ನಾಮಧಾರಿಗಳಿಗೆ ಉತ್ತರ ಕನ್ನಡ ಜಿಲ್ಲೆಯ ಸಂಸದರ ಕ್ಷೇತ್ರದ ಟಿಕೇಟ್‌ ಕೊಟ್ಟರೆ ಜಯ ಸುಲಭ ಎನ್ನುವ ಗ್ರಹಿಕೆ ಇದೆ. ಇದೇ ಲೆಕ್ಕಾಚಾರದಲ್ಲಿ ಕುಮಾರ ಬಂಗಾರಪ್ಪನವರಿಗೆ ಟಿಕೇಟ್‌ ಕೊಡಿಸುವ ಮೂಲಕ ಉತ್ತರ ಕನ್ನಡ ಜಿಲ್ಲೆಯ ನಾಮಧಾರಿಗಳ ಮತವನ್ನು ಬಿ.ಜೆ.ಪಿ. ಯತ್ತ ಸೆಳೆಯಬೇಕು ಎನ್ನುವ ಲೆಕ್ಕಾಚಾರ ಯಡಿಯೂರಪ್ಪನವರದ್ದು.

ಕಾಂಗ್ರೆಸ್‌ ಅಳೆದು ತೂಗಿ ಅಂಜಲಿ ನಿಂಬಾಳ್ಕರ್‌ ಗೆ ಟಿಕೇಟ್‌ ನೀಡಿದೆ. ಅಂಜಲಿ ನಿಂಬಾಳ್ಕರ್‌ ಮರಾಠರೆನ್ನುವುದು ಕಾಂಗ್ರೆಸ್‌ ಟಿಕೇಟ್‌ ನೀಡಿಕೆಯ ಹಿಂದಿನ ವಾಸ್ತವ. ಶಿವಮೊಗ್ಗದಲ್ಲಿ ಈಡಿಗರಿಗೆ ಟಿಕೇಟ್‌ ನೀಡಲು ಉತ್ತರ ಕನ್ನಡ ಜಿಲ್ಲೆಯಲ್ಲಿ ಡಾ. ಅಂಜಲಿ ನಿಂಬಾಳ್ಕರ್‌ ಗೆ ಅವಕಾಶ ನೀಡಲಾಗಿದೆ ಎನ್ನುವ ವಿಷಯ ಚರ್ಚೆಯಲ್ಲಿದೆ.

ಈಗ ಈ ವರ್ಷ ಉತ್ತರ ಕನ್ನಡಜಿಲ್ಲೆಯ ಸಂಸದರ ಕ್ಷೇತ್ರದ ಟಿಕೇಟ್‌ ನಾಮಧಾರಿಗಳಿಗೆ ಸಿಗದಿರುವುದರಿಂದ ನಾಮಧಾರಿಗಳು ಒಂದಾಗಿ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ತೊಡೆ ತಟ್ಟಲಿರುವ ಮುನ್ಸೂಚನೆ ಸಿಗತೊಡಗಿದೆ. ಕಾಂಗ್ರೆಸ್‌ ಟಿಕೆಟ್‌ ಕೇಳಿದ್ದ ವಕೀಲ ಜಿ.ಟಿ.ನಾಯ್ಕ ಸ್ವತಂತ್ರವಾಗಿ ಸ್ಫರ್ಧಿಸುವ ಬಗ್ಗೆ ಅವರ ಅಭಿಮಾನಿ ಬಳಗ ಹೇಳಿದೆ.

ಅರಣ್ಯ ಹಕ್ಕು ಹೋರಾಟದ ಮೂಲಕ ಮನೆಮಾತಾಗಿರುವ ರವೀಂದ್ರ ನಾಯ್ಕ ಅಭಿಮಾನಿಗಳು ಕೂಡಾ ತಮ್ಮ ನಾಯಕರಿಗೆ ಕಾಂಗ್ರೆಸ್‌ ಟಿಕೇಟ್‌ ನೀಡದಿರುವುದರಿಂದ ಅವರನ್ನು ಸ್ವತಂತ್ರವಾಗಿ ಸ್ಫರ್ಧೆ ಗಿಳಿಸುವ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿದ್ದಾರೆ. ಹೀಗೆ ಜಿಲ್ಲೆಯ ಬಹುಸಂಖ್ಯಾತ ಮೂಲನಿವಾಸಿಗಳಿಗೆ ಕಾಂಗ್ರೆಸ್‌ ಅವಕಾಶ ತಪ್ಪಿಸಿದೆ ಎನ್ನುವ ಅಸಮಧಾನ ಬುಗಿಲೆದ್ದಿದೆ. ಈ ಅವಕಾಶ ಬಳಸಿಕೊಂಡು ಬಿ.ಜೆ.ಪಿ. ಕುಮಾರ ಬಂಗಾರಪ್ಪನವರನ್ನು ಉತ್ತರ ಕನ್ನಡದಿಂದ ಕಣಕ್ಕಿಳಿಸಿದರೆ ಅವರಿಗೆ ಗೆಲ್ಲುವ ಅವಕಾಶ ಹೆಚ್ಚಿದೆ. ಕುಮಾರ ಬಂಗಾರಪ್ಪ ಬಿ.ಜೆ.ಪಿ. ಅಭ್ಯರ್ಥಿಯಾದರೆ ನಾಮಧಾರಿಗಳು ಸ್ವತಂತ್ರ ಸ್ಫರ್ಧೆಗೆ ಮುಂದಾಗುವುದಿಲ್ಲ. ಬಿ.ಜೆ.ಪಿ.ಯಿಂದ ಕುಮಾರ ಬಂಗಾರಪ್ಪ ಬದಲು ವಿಶ್ವೇಶ್ವರ ಹೆಗಡೆ ಅಥವಾ ಸೂಲಿಬೆಲೆ ಚಕ್ರವರ್ತಿ ಅಭ್ಯರ್ಥಿಗಳಾದರೆ ಆಗ ನಾಮಧಾರಿಗಳ ಸ್ವತಂತ್ರ ಸ್ಫರ್ಧೆಗೆ ಅವಕಾಶವಿದೆ.

ಈ ಹಿನ್ನೆಲೆಯಲ್ಲಿ ಸ್ವತಂತ್ರ ಸ್ಫರ್ಧೆಗೆ ಅಣಿಯಾಗುತ್ತಿರುವ ಕಾಂಗ್ರೆಸ್‌ ಟಿಕೇಟ್‌ ವಂಚಿತ ಜಿ.ಟಿ. ನಾಯ್ಕ ಹಾಗೂ ಅರಣ್ಯ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ರಲ್ಲಿ ಒಬ್ಬರ ಸ್ಫರ್ಧೆ ಬಿ.ಜೆ.ಪಿ. ಅಭ್ಯರ್ಥಿ ಘೋಷಣೆಯನ್ನವಲಂಬಿಸಿದೆ. ಕುಮಾರ ಬಂಗಾರಪ್ಪ ಬಿ.ಜೆ.ಪಿ. ಅಭ್ಯರ್ಥಿಯಾಗದಿದ್ದರೆ ನಾಮಧಾರಿಗಳು ಒಮ್ಮತದ ಸ್ವತಂತ್ರ ಅಭ್ಯರ್ಥಿ ನಿಲ್ಲಿಸಲಿದ್ದಾರೆ. ಹಾಗಾಗಿ ಎಲ್ಲರ ಕಣ್ಣು-ಮನಸ್ಸು ಬಿ.ಜೆ.ಪಿ. ಟಿಕೇಟ್‌ ಘೋಷಣೆಯತ್ತ ನೆಟ್ಟಿದ್ದು ಕಾಂಗ್ರೆಸ್‌ ಕೂಡಾ ಕುಮಾರ ಬಂಗಾರಪ್ಪ ಬಿ.ಜೆ.ಪಿ. ಅಭ್ಯರ್ಥಿಯಾದಿದ್ದರೆ ಸಾಕು ಎನ್ನುವ ನಿರೀಕ್ಷೆಯಲ್ಲಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *