ಚಿಣ್ಣರ ಕಲರವ- ಸಮಾರೋಪ, ಬೇಸಿಗೆ ಶಿಬಿರದಿಂದ ಮಕ್ಕಳಿಗೆ ಅನುಕೂಲ


ಸಿದ್ದಾಪುರ
ಬೇಸಿಗೆ ಶಿಬಿರ ಮಕ್ಕಳ ಪಾಲಿಗೆ ಓಯಸ್ಸಿಸ್ ಇದ್ದಂತೆ. ವರ್ಷದ ಹಲವು ತಿಂಗಳು ಪಠ್ಯದ ಒತ್ತಡದಲ್ಲಿರುವ ಮಕ್ಕಳಿಗೆ ಮರುಭೂಮಿಯಲ್ಲಿ ಓಯಸ್ಸಿಸ್ ರೀತಿಯಲ್ಲಿ ಇಂಥ ಶಿಬಿರಗಳು ಮುದ ನೀಡುತ್ತವೆ ಎಂದು ಸ್ಥಳೀಯ ಜೆ.ಎಮ್.ಎಪ್.ಸಿ.ನ್ಯಾಯಾಲಯದ ನ್ಯಾಯಾಧೀಶ ಭರತಚಂದ್ರ ಕೆ.ಎಸ್.ಹೇಳಿದರು.
ಅವರು ಸ್ಥಳೀಯ ಸರಕಾರಿನಿವೃತ್ತ ನೌಕರರ ಸಂಘ, ಲಯನ್ಸ ಕ್ಲಬ್ ಸಹಯೋಗದಲ್ಲಿ ೭ ದಿನಗಳ ಕಾಲ ಆಯೋಜಿಸಿದ ಚಿಣ್ಣರ ಕಲರವ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಬಹುಮಾನ ವಿತರಿಸಿ ಮಾತನಾಡಿ ಇಂಥ ಶಿಬಿರಗಳು ಮಕ್ಕಳ ಮನಸ್ಸನ್ನು ಅರಳಿಸುತ್ತವೆ. ಮಕ್ಕಳ ಬೌದ್ಧಿಕ ಮತ್ತು ಶಾರೀರಿಕ ಬೆಳವಣಿಗೆಗೆ ಕಾರಣವಾಗುತ್ತವೆ ಎಂದರು.


ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಲಯನ್ಸ ಕ್ಲಬ್ ಅಧ್ಯಕ್ಷ ಆರ್.ಎಂ.ಪಾಟೀಲ ಇಂಥ ಶಿಬಿರಗಳು ಮಕ್ಕಳ ವ್ಯಕ್ತಿತ್ವದ ಬೆಳವಣಿಗೆಗೆ ಸಹಕಾರಿ. ಸ್ವತಂತ್ರವಾಗಿ ಪಾಲ್ಗೊಂಡು ಹಲವು ವಿಷಯಗಳ ಬಗ್ಗೆ ಅರಿತುಕೊಳ್ಳುವದರಿಂದ ಮುಂದಿನ ವಿದ್ಯಾಭ್ಯಾಸ ಮತ್ತು ಸಾಮಾಜಿಕವಾದ ಜ್ಞಾನ ದೊರೆಯುತ್ತದೆ ಎಂದರು.


ಇನ್ನೊರ್ವ ಅತಿಥಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ ಹಿಂದಿನ ತಲೆಮಾರಿನವರಿಗೆ ಇಂಥ ಶಿಬಿರಗಳ ಸೌಲಭ್ಯ ಇರಲಿಲ್ಲ. ಸುತ್ತಲಿನ ಪರಿಸರ,ಕಾಡು,ಹೊಳೆ ಮುಂತಾದವು ಹೊಸ ಕಲಿಕೆಯ ವಿಧಾನಗಳಾಗಿದ್ದವು. ಬದಲಾದ ಬದುಕಿನ ಕ್ರಮದಲ್ಲಿ ಇಂದಿನ ಮಕ್ಕಳಿಗೆ ಇಂಥ ಶಿಬಿರಗಳು ಅಗತ್ಯ ಎಂದರು.


ಅಧ್ಯಕ್ಷತೆವಹಿಸಿದ್ದ ಸರಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿ ಕಳೆದ ೫ ವರ್ಷದಿಂದ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸುತ್ತಿದ್ದು ಈ ವರ್ಷ ೮೨ ಮಕ್ಕಳು ಪಾಲ್ಗೊಂಡಿದ್ದಾರೆ. ಚಿತ್ರಕಲೆ, ನಾಟಕ, ಹಾಡು ಮುಂತಾದವುಗಳ ಕಲಿಕೆಯ ಜೊತೆಗೆ ಪರಿಸರದ ಕುರಿತಾಗಿಯೂ ಅವರಿಗೆ ತಜ್ಞರಿಂದ ಕಲಿಕೆ ಒದಗಿಸಲಾಗಿದೆ. ಹಲವು ಸಂಘ,ಸಂಸ್ಥೆಗಳು,ವ್ಯಕ್ತಿಗಳು ಈ ಕಾರ್ಯದಲ್ಲಿ ಕೈಜೋಡಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪಟ್ಟಣದ ನೆಹರೂ ಮೈದಾನದ ಪಕ್ಕದಲ್ಲಿನ ಮಕ್ಕಳ ಪಾರ್ಕ ಲ್ಲಿ ಅತ್ಯತ್ತಮವಾಗಿ ಕಾರ್ಯನಿರ್ವಹಿಸುವ ಪಪಂ ಸಿಬ್ಬಂದಿ ಮಾದು ಸುಬ್ಬಾ ಕೋರಾರ್ ಅವರನ್ನು ಸನ್ಮಾನಿಸಲಾಯಿತು.


ವೇದಿಕೆಯಲ್ಲಿದ್ದ ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ,ಲಯನ್ಸ ಕ್ಲಬ್ ಕಾರ್ಯದರ್ಶಿ ಕುಮಾರ ಗೌಡರ್,ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪಿ.ಬಿ.ಹೊಸೂರ, ಡಾ|ಶರತ್‌ಚಂದ್ರ ಕೆ.ಎಸ್. ಮಾತನಾಡಿದರು. ಸ.ನಿ.ನೌಕರರ ಸಂಘದ ಉಪಾಧ್ಯಕ್ಷ ಎನ್.ವಿ.ಹೆಗಡೆ ಲಯನ್ಸ ಡಿಸ್ಟಿçಕ್ಟ ಚೇರ್ ಪರ್ಸನ್ ಸತೀಶ ಗೌಡರ್ ಉಪಸ್ಥಿತರಿದ್ದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಿ.ಜಿ.ಹೆಗಡೆ ಬಾಳಗೋಡ ನಿರೂಪಿಸಿದರು. ಸ.ನಿ.ನೌ.ಸಂಘದ ಕಾರ್ಯದರ್ಶಿ ವಿ.ಎಸ್.ಶೇಟ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *