ಸಾರ್ವಜನಿಕರಿಗೆ ದೂರಸ್ಥ ಶಿಕ್ಷಣದ ಮೂಲಕ ಸಂಸ್ಕೃತ

ರಾಷ್ಟ್ರಿಯ ಸಂಸ್ಕೃತ ಸಂಸ್ಥಾನಮ್ ಮಾನಿತ ವಿಶ್ವವಿದ್ಯಾಲಯದ ರಾಜೀವಗಾಂಧೀ ಪರಿಸರ, ಸ್ವಾಧ್ಯಾಯಕೇಂದ್ರಮ್, ಮುಕ್ತಸ್ವಾಧ್ಯಾಯಪೀಠಮ್, ಶೃಂಗೇರಿ ವತಿಯಿಂದ 2019-2020 ನೇ ಸಾಲಿನಲ್ಲಿ ದೂರಸ್ಥ ಶಿಕ್ಷಣದ ಮೂಲಕ ಸಂಸ್ಕøತ ಕಲಿಯಬಯಸುವವರಿಗೆ ಆರು ತಿಂಗಳ ಅವಧಿಯ ಪ್ರಾಕ್‍ಶಾಸ್ತ್ರಿಸೇತು (ಸಂಸ್ಕøತಾವತರಣೀ) ಹಾಗೂ ಒಂದು ವರ್ಷದ ಅವಧಿಯ ಶಾಸ್ತ್ರಿಸೇತು (ಸಂಸ್ಕøತಾವಗಾಹನೀ) ಪಾಠ್ಯಕ್ರಮದ ವ್ಯವಸ್ಥೆ ಕಲ್ಪಿಸಲಾಗಿದ್ದು ಯಾವುದೇ ಉದ್ಯೋಗದಲ್ಲಿರುವವರು, ಗೃಹಸ್ಥರು, ಗೃಹಿಣಿಯರು ತಾಂತ್ರಿಕ/ವೈದ್ಯಕೀಯ/ಆಯರ್ವೇದ ವಿದ್ಯಾರ್ಥಿಗಳು ಅಥವಾ ಯಾರೇ ಆಸಕ್ತರು ಕೂಡ ಈ ಶಿಕ್ಷಣವನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಇದೇ ತಿಂಗಳು 31 ರ ಒಳಗಾಗಿ 9968403772 ದೂರವಾಣಿಗೆ ಕರೆ ಮಾಡಿ ವಿವರವನ್ನು ತಿಳಿದುಕೊಳ್ಳಬೇಕಾಗಿ ಕೋರಲಾಗಿದೆ.
ಅಂತರ್ಜಾಲದ ಮೂಲಕ ತಮ್ಮ ಹೆಸರನ್ನು ನೋಂದಾಯಿಸುವವರು ತಿತಿತಿ.msಠಿ.ಡಿsಞs.iಟಿ ಸಂಪಕಿರ್Àಸಬಹುದು ಎಂದು ಸ್ವಾಧ್ಯಾಯಕೇಂದ್ರದ ಸಂಯೋಜಕ ವೆಂಕಟೇಶಮೂರ್ತಿಯವರು ತಿಳಿಸಿರುತ್ತಾರೆ.

ಮಾದರಿ ಚುನಾವಣೆ-
ನಾಣಿಕಟ್ಟಾ ಕಾಲೇಜಿನಲ್ಲಿ ವಿದ್ಯಾರ್ಥಿಸಂಸತ್ತಿಗೆ ಚುನಾವಣೆ
ರಮಾನಂದ ಟಿ ಗೌಡ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
ಸಿದ್ದಾಪುರ ತಾಲೂಕಿನ ನಾಣಿಕಟ್ಟಾದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ನಡೆಯಿತು. ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳನ್ನು ನಡೆಸಲಾಯಿತು.
ಅಧಿಸೂಚನೆ ಹೊರಡಿಸುವುದರಿಂದ ಪ್ರಾರಂಭಗೊಂಡು ನಾಮಪತ್ರ ಸಲ್ಲಿಕೆ, ಪರಿಶೀಲನೆ, ಅಭ್ಯರ್ಥಿಗಳಿಗೆ ಚಿಹ್ನೆ ನೀಡುವುದು, ಮತ ಪತ್ರ ಮುದ್ರಣ, ಮತಗಟ್ಟೆ ಅಧಿಕಾರಿಗಳ ನೇಮಕ, ಚುನಾವಣೆ, ಮತ ಎಣಿಕೆ ಎಲ್ಲವನ್ನೂ ಕ್ರಮಬದ್ಧವಾಗಿ ನಡೆಸಲಾಯಿತು.
ಉ.ಕ.ಜಿಲ್ಲಾ ಪ.ಪೂ.ಶಿ.ಇಲಾಖೆಯ ಉಪನಿರ್ದೇಶಕ ಎಂ.ಜಿ.ಪೋಳ ವೀಕ್ಷಕರಾಗಿ ಆಗಮಿಸಿದ್ದರು. ಪ್ರಭಾರ ಪ್ರಾಚಾರ್ಯ ಎಂ.ಕೆ.ನಾಯ್ಕ ಚುನಾವಣಾ ಅಧಿಕಾರಿಯಾಗಿ, ಉಪನ್ಯಾಸಕರಾದ ಓಂಕಾರಪ್ಪ ಸಿ ವಿ (ರಿಟರ್ನಿಂಗ ಅಧಿಕಾರಿ) ನಾಗವೇಣಿ ನಾಯ್ಕ , ಶ್ರೀನಿವಾಸ ನಾಗರಕಟ್ಟೆ, ಮಾಲಾ ಎ, ಎ.ಎಲ್.ನಾಯ್ಕ ಮತ್ತು ಶೈಲಾ ಹೆಗಡೆ, (ಮತಗಟ್ಟೆ ಅಧ್ಯಕ್ಷಾಧಿಕಾರಿಗಳು) ಎಂ ಆಯ್ ಹೆಗಡೆ, ಎಂ ಎಂ ಭಟ್ಟ, ಆನಂದ ಡಿ.ಕೆ. ತನುಜಾ ನಾಯ್ಕ(ಮತಗಟ್ಟೆ ಅಧಿಕಾರಿಗಳು) ಕಾರ್ಯನಿರ್ವಹಿಸಿದರು.
ವಿದ್ಯಾರ್ಥಿಗಳಾದ ಮಧುರಾ ಎಂ ನಾಯ್ಕ, ಜಾನಕಿ ಗೌಡ, ತನುಶ್ರೀ.ಕೆ., ಯಶೋದಾ ಗೌಡ,ಲಿಖಿತಾ ನಾಯ್ಕ ಮತಗಟ್ಟೆ ಸಹಾಯಕರಾಗಿ ಕಾರ್ಯನಿರ್ವಹಿಸಿದರು. ವಿದ್ಯಾರ್ಥಿ ಮತದಾರರು ಉತ್ಸಾಹದಿಂದ ಗುಪ್ತಮತದಾನದಲ್ಲಿ ಪಾಲ್ಗೊಂಡರು. ಪ್ರಥಮ ಪಿಯುಸಿ ಕಲಾ ವಿಭಾಗದಿಂದ ಚೈತನ್ಯಾ ಎಂ.ಎನ್., ವಾಣಿಜ್ಯ ವಿಭಾಗದಿಂದ ದಿವ್ಯಾ ಮಂಜುನಾಥ ನಾಯ್ಕ, ವಿಜ್ಞಾನ ವಿಭಾಗದಿಂದ ದೀಕ್ಷಿತಾ ಯು. ನಾಯ್ಕ, ದ್ವಿತೀಯ ಪಿಯುಸಿ ಕಲಾ ವಿಭಾಗದಿಂದ ಸೌಮ್ಯಾ ಗಣಪತಿ ನಾಯ್ಕ, ವಾಣಿಜ್ಯ ವಿಭಾಗದಿಂದ ರಮಾನಂದ ಟಿ ಗೌಡ ಚುನಾವಣೆಯ ಮೂಲಕ ಆಯ್ಕೆಯಾದರೆ, ಪ್ರಥಮ ಪಿಯುಸಿ ಕಲಾ ವಿಭಾಗದಿಂದ ಪ್ರಜ್ವಲ್ ಧರ್ಮಾ ನಾಯ್ಕ, ವಾಣಿಜ್ಯ ವಿಭಾಗದಿಂದ ಪುನೀತ್ ಎಸ್ ನಾಯ್ಕ, ವಿಜ್ಞಾನ ವಿಭಾಗದಿಂದ ಪುರುಷೋತ್ತಮ ಆಯ್ ನಾಯ್ಕ, ದ್ವಿತೀಯ ಪಿಯುಸಿ ಕಲಾ ವಿಭಾಗದಿಂದ ಗಜಾನನ ಗೊಂಡ,ವಾಣಿಜ್ಯ ವಿಭಾಗದಿಂದ ಸ್ನೇಹಾ ಟಿ ಮಡಿವಾಳ, ವಿಜ್ಞಾನ ವಿಭಾಗದಿಂದ ವಿಜೇತಗೌಡ ಮತ್ತು ತನುಶ್ರೀ ಕ. ಅವಿರೋಧವಾಗಿ ಆಯ್ಕೆಯಾದರು.

ನಂತರ ನಡೆದ ಆಯ್ಕೆಯಾದ ಪ್ರತಿನಿಧಿಗಳ ಸಭೆಯಲ್ಲಿ ರಮಾನಂದ ಟಿ. ಗೌಡ ಸಂಸತ್ತಿನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಉಳಿದ ಪ್ರತಿನಿಧಿಗಳು ನಾನಾ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದು ಕಾಲೇಜು ಸಂಸತ್ತಿನ ಉದ್ಘಾಟನೆಯ ವೇಳೆಯಲ್ಲಿ ಕರ್ತವ್ಯದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *