ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ.

ಕಬೀರ್‌ ಎನ್ನುವ ಪಕ್ಕಾ ಕಾಂಗ್ರೆಸ್‌ ಅಭಿಮಾನಿ ಸಿದ್ಧಾಪುರ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ವಸಂತ ನಾಯ್ಕ ಬಿ.ಜೆ.ಪಿ. ಸೇರುತ್ತಾರೆ ಎನ್ನುವ ಗಾಳಿ ಸುದ್ದಿಗೆ ಪ್ರತಿಕ್ರೀಯಿಸಿದ್ದೇ ಇಷ್ಟೆಲ್ಲಾ ಗಲಿಬಿಲಿಗೆ ಕಾರಣ.

ಅಸಲಿಗೆ ಆದದ್ದೇನೆಂದರೆ…… ಸಿದ್ಧಾಪುರದ ತಂಟೆಕೋರ! ವಸಂತ ನಾಯ್ಕ ಹಿಂದಿನ ವಾರದ ಕೊನೆಗೆ ದಿಢೀರನೇ ರಾಜೀನಾಮೆ ಪ್ರಕಟಿಸಿದರು. ಈ ರಾಜೀನಾಮೆ ಪ್ರಹಸನ ಆಕಸ್ಮಿಕ, ದೀಢೀರ್‌ ಅಲ್ಲ ಎನ್ನುವುದು ಕಾಂಗ್ರೆಸ್‌ ವಲಯದವರಿಗೆ ತಿಳಿದದ್ದೇ ಆದರೆ ವಸಂತ್‌ ನಾಯ್ಕ ರಾಜೀನಾಮೆ ಸುದ್ದಿ ನಂತರ ಅವರ ಆಪ್ತರು, ಹಿತೈಶಿಗಳು ವಸಂತ ನಾಯ್ಕರ ರಾಜೀನಾಮೆಗೆ ಅವರದೇ ರೀತಿಯಲ್ಲಿ ಪ್ರತಿಕ್ರೀಯಿಸಿದರು.

ಕೆಲವರು ಭಾವನಾತ್ಮಕವಾಗಿ, ಕೆಲವರು ವ್ಯವಹಾರಿಕವಾಗಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಪ್ರತಿಕ್ರೀಯಿಸಿರುವ ಹಿಂದೆ ವಸಂತ ನಾಯ್ಕರ ಹೆಚ್ಚುಗಾರಿಕೆ ಇದೆ.

ಆದರೆ ಇಂಥ ವ್ಯವಹಾರಿಕ ಸಂಗತಿಗಳಿಗೆ ಸಲ್ಲದ ಕಬೀರ್‌ ಎನ್ನುವ ಯುವಕ ಕಾಂಗ್ರೆಸ್‌ ಪಕ್ಷ ನಿಷ್ಠೆಯಿಂದ ವಸಂತ ವಿರುದ್ಧ ಒಂದು ಪೋಸ್ಟ್‌ ತೇಲಿಸಿಬಿಟ್ಟರು. ಅದಕ್ಕೆ ವಸಂತ ನಾಯ್ಕರ ಹಿಂಬಾಲಕರು ಉಗ್ರವಾಗಿ ಪ್ರತಿಕ್ರೀಯಿಸಿದರು. ಈ ವಿಚಾರದಲ್ಲಿ ವಸಂತ ನಾಯ್ಕ ಕೂಡಾ ತೀಕ್ಷ್ಣ ವಾಗಿ ಪ್ರತಿಕ್ರೀಯಿಸಿ ರೋಶದ ಬೆಂಕಿಗೆ ತುಪ್ಪ ಸುರಿದು ಬಿಟ್ಟರು. ಇದರಿಂದ ಸಾಮಾಜಿಕ ಜಾಲತಾಣದಲ್ಲಿ ಧೂಳ್‌ ಏಳುವ ಬದಲು ರಾಡಿ ಎದ್ದು ಬಿಟ್ಟಿತು!.

ಈ ಬಗ್ಗೆ ಸಮಾಜಮುಖಿ ಡಾಟ್‌ ನೆಟ್‌ ಗೆ ಪ್ರತಿಕ್ರೀಯಿಸಿದ ಕಬೀರ್‌ʼ ಏನಿಲ್ಲ ಬ್ಲಾಕ್‌ ಅಧ್ಯಕ್ಷರಾದ ವಸಂತ ನಾಯ್ಕ ಕಾಂಗ್ರೆಸ್‌ ಬಿಡುತ್ತಾರೆ, ಬಿ.ಜೆ.ಪಿ. ಸೇರುತ್ತಾರೆ ಎನ್ನುವ ಗಾಳಿ ಸುದ್ದಿಗೆ ಪ್ರತಿಕ್ರೀಯಿಸಿ ಹೀಗಾಗಿದೆ. ನನಗೇನೂ ಯಾರ ಮೇಲೂ ದ್ವೇಶ ಇಲ್ಲ, ಕಾಂಗ್ರೆಸ್‌ ಪಕ್ಷದಲ್ಲಿ ಪ್ರಮುಖ ಹುದ್ದೆ ಪಡೆದು ವಸಂತ್‌ ಬಿ.ಜೆ.ಪಿ. ಹೋಗುತ್ತಾರೆ ಎನ್ನುವ ತಪ್ಪು ತಿಳುವಳಿಕೆಯಿಂದ ನಾನು ಹಾಗೆ ಪ್ರತಿಕ್ರೀಯಿಸಿದ್ದೆ ಅದು ಮುಗಿದ ಪ್ರಕರಣ ಎಂದರು.

ವಸಂತ ನಾಯ್ಕ ಕಾಂಗ್ರೆಸ್‌ ನ ಸಿದ್ಧಾಪುರ ಬ್ಲಾಕ್‌ ಅಧ್ಯಕ್ಷತೆಗೆ ರಾಜೀನಾಮೆ ಕೊಟ್ಟಿದ್ದು ಸತ್ಯ. ಅದಕ್ಕೆ ಕಾಂಗ್ರೆಸ್‌ ವಲಯದಲ್ಲಿ ಪರ- ವಿರೋಧಗಳು ವ್ಯಕ್ತವಾಗಿದ್ದೂ ಸತ್ಯ. ಆದರೆ ತುಸು ಭಾವನಾತ್ಮಕವಾಗಿ ಪ್ರತಿಕ್ರೀಯಿಸಿದ ಕಬೀರ್‌ ಮತ್ತು ವಸಂತ ನಾಯ್ಕರ ಪೋಸ್ಟ್‌ ಗಳು ಚರ್ಚೆಗೆ ಕಾರಣವಾಗಿವೆಯಷ್ಟೇ.

ಕಾಂಗ್ರೆಸ್‌ ನೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುವ ಕಬೀರ್‌ ಹೆಗ್ಗರಣಿಯ ನಿಲ್ಕುಂದ ಮೂಲದವರು. ಕಬೀರ್‌ ರ ತಂದೆ ಮತ್ತವರ ಕುಟುಂಬ ಕಾಂಗ್ರೆಸ್‌ ಪಕ್ಷದೊಂದಿಗೆ ಅವಿನಾಭಾವ ಸಂಬಂಧ ಹೊಂದಿತ್ತು. ಕಬೀರ್‌ ಕುಟುಂಬದೊಂದಿಗಿನ ಎಸ್.‌ ಬಂಗಾರಪ್ಪನವರ ಹಾಗೂ ಗೋಪಾಲ ಕಾನಡೆಯವರ ಸಂಬಂಧ ನಿಕಟವಾಗಿತ್ತು. ಈ ಹಿನ್ನೆಲೆಯ ಕಬೀರ್‌ ಕಾಂಗ್ರೆಸ್‌ ಅಭಿಮಾನ ಈ ಗಲಿಬಿಲಿಗೆ ಕಾರಣವಾಗಿತ್ತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *