ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ.

ಕಬೀರ್‌ ಎನ್ನುವ ಪಕ್ಕಾ ಕಾಂಗ್ರೆಸ್‌ ಅಭಿಮಾನಿ ಸಿದ್ಧಾಪುರ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ವಸಂತ ನಾಯ್ಕ ಬಿ.ಜೆ.ಪಿ. ಸೇರುತ್ತಾರೆ ಎನ್ನುವ ಗಾಳಿ ಸುದ್ದಿಗೆ ಪ್ರತಿಕ್ರೀಯಿಸಿದ್ದೇ ಇಷ್ಟೆಲ್ಲಾ ಗಲಿಬಿಲಿಗೆ ಕಾರಣ.

ಅಸಲಿಗೆ ಆದದ್ದೇನೆಂದರೆ…… ಸಿದ್ಧಾಪುರದ ತಂಟೆಕೋರ! ವಸಂತ ನಾಯ್ಕ ಹಿಂದಿನ ವಾರದ ಕೊನೆಗೆ ದಿಢೀರನೇ ರಾಜೀನಾಮೆ ಪ್ರಕಟಿಸಿದರು. ಈ ರಾಜೀನಾಮೆ ಪ್ರಹಸನ ಆಕಸ್ಮಿಕ, ದೀಢೀರ್‌ ಅಲ್ಲ ಎನ್ನುವುದು ಕಾಂಗ್ರೆಸ್‌ ವಲಯದವರಿಗೆ ತಿಳಿದದ್ದೇ ಆದರೆ ವಸಂತ್‌ ನಾಯ್ಕ ರಾಜೀನಾಮೆ ಸುದ್ದಿ ನಂತರ ಅವರ ಆಪ್ತರು, ಹಿತೈಶಿಗಳು ವಸಂತ ನಾಯ್ಕರ ರಾಜೀನಾಮೆಗೆ ಅವರದೇ ರೀತಿಯಲ್ಲಿ ಪ್ರತಿಕ್ರೀಯಿಸಿದರು.

ಕೆಲವರು ಭಾವನಾತ್ಮಕವಾಗಿ, ಕೆಲವರು ವ್ಯವಹಾರಿಕವಾಗಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಪ್ರತಿಕ್ರೀಯಿಸಿರುವ ಹಿಂದೆ ವಸಂತ ನಾಯ್ಕರ ಹೆಚ್ಚುಗಾರಿಕೆ ಇದೆ.

ಆದರೆ ಇಂಥ ವ್ಯವಹಾರಿಕ ಸಂಗತಿಗಳಿಗೆ ಸಲ್ಲದ ಕಬೀರ್‌ ಎನ್ನುವ ಯುವಕ ಕಾಂಗ್ರೆಸ್‌ ಪಕ್ಷ ನಿಷ್ಠೆಯಿಂದ ವಸಂತ ವಿರುದ್ಧ ಒಂದು ಪೋಸ್ಟ್‌ ತೇಲಿಸಿಬಿಟ್ಟರು. ಅದಕ್ಕೆ ವಸಂತ ನಾಯ್ಕರ ಹಿಂಬಾಲಕರು ಉಗ್ರವಾಗಿ ಪ್ರತಿಕ್ರೀಯಿಸಿದರು. ಈ ವಿಚಾರದಲ್ಲಿ ವಸಂತ ನಾಯ್ಕ ಕೂಡಾ ತೀಕ್ಷ್ಣ ವಾಗಿ ಪ್ರತಿಕ್ರೀಯಿಸಿ ರೋಶದ ಬೆಂಕಿಗೆ ತುಪ್ಪ ಸುರಿದು ಬಿಟ್ಟರು. ಇದರಿಂದ ಸಾಮಾಜಿಕ ಜಾಲತಾಣದಲ್ಲಿ ಧೂಳ್‌ ಏಳುವ ಬದಲು ರಾಡಿ ಎದ್ದು ಬಿಟ್ಟಿತು!.

ಈ ಬಗ್ಗೆ ಸಮಾಜಮುಖಿ ಡಾಟ್‌ ನೆಟ್‌ ಗೆ ಪ್ರತಿಕ್ರೀಯಿಸಿದ ಕಬೀರ್‌ʼ ಏನಿಲ್ಲ ಬ್ಲಾಕ್‌ ಅಧ್ಯಕ್ಷರಾದ ವಸಂತ ನಾಯ್ಕ ಕಾಂಗ್ರೆಸ್‌ ಬಿಡುತ್ತಾರೆ, ಬಿ.ಜೆ.ಪಿ. ಸೇರುತ್ತಾರೆ ಎನ್ನುವ ಗಾಳಿ ಸುದ್ದಿಗೆ ಪ್ರತಿಕ್ರೀಯಿಸಿ ಹೀಗಾಗಿದೆ. ನನಗೇನೂ ಯಾರ ಮೇಲೂ ದ್ವೇಶ ಇಲ್ಲ, ಕಾಂಗ್ರೆಸ್‌ ಪಕ್ಷದಲ್ಲಿ ಪ್ರಮುಖ ಹುದ್ದೆ ಪಡೆದು ವಸಂತ್‌ ಬಿ.ಜೆ.ಪಿ. ಹೋಗುತ್ತಾರೆ ಎನ್ನುವ ತಪ್ಪು ತಿಳುವಳಿಕೆಯಿಂದ ನಾನು ಹಾಗೆ ಪ್ರತಿಕ್ರೀಯಿಸಿದ್ದೆ ಅದು ಮುಗಿದ ಪ್ರಕರಣ ಎಂದರು.

ವಸಂತ ನಾಯ್ಕ ಕಾಂಗ್ರೆಸ್‌ ನ ಸಿದ್ಧಾಪುರ ಬ್ಲಾಕ್‌ ಅಧ್ಯಕ್ಷತೆಗೆ ರಾಜೀನಾಮೆ ಕೊಟ್ಟಿದ್ದು ಸತ್ಯ. ಅದಕ್ಕೆ ಕಾಂಗ್ರೆಸ್‌ ವಲಯದಲ್ಲಿ ಪರ- ವಿರೋಧಗಳು ವ್ಯಕ್ತವಾಗಿದ್ದೂ ಸತ್ಯ. ಆದರೆ ತುಸು ಭಾವನಾತ್ಮಕವಾಗಿ ಪ್ರತಿಕ್ರೀಯಿಸಿದ ಕಬೀರ್‌ ಮತ್ತು ವಸಂತ ನಾಯ್ಕರ ಪೋಸ್ಟ್‌ ಗಳು ಚರ್ಚೆಗೆ ಕಾರಣವಾಗಿವೆಯಷ್ಟೇ.

ಕಾಂಗ್ರೆಸ್‌ ನೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುವ ಕಬೀರ್‌ ಹೆಗ್ಗರಣಿಯ ನಿಲ್ಕುಂದ ಮೂಲದವರು. ಕಬೀರ್‌ ರ ತಂದೆ ಮತ್ತವರ ಕುಟುಂಬ ಕಾಂಗ್ರೆಸ್‌ ಪಕ್ಷದೊಂದಿಗೆ ಅವಿನಾಭಾವ ಸಂಬಂಧ ಹೊಂದಿತ್ತು. ಕಬೀರ್‌ ಕುಟುಂಬದೊಂದಿಗಿನ ಎಸ್.‌ ಬಂಗಾರಪ್ಪನವರ ಹಾಗೂ ಗೋಪಾಲ ಕಾನಡೆಯವರ ಸಂಬಂಧ ನಿಕಟವಾಗಿತ್ತು. ಈ ಹಿನ್ನೆಲೆಯ ಕಬೀರ್‌ ಕಾಂಗ್ರೆಸ್‌ ಅಭಿಮಾನ ಈ ಗಲಿಬಿಲಿಗೆ ಕಾರಣವಾಗಿತ್ತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *