ಅವರಪ್ಪನಾಣೆ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ!

ದೇಶದ ಜನತೆ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಗ್ಯಾರಂಟಿಗಳನ್ನಲ್ಲ: ಆರ್.ಅಶೋಕ್’ಗೆ ಸಿದ್ದು ತಿರುಗೇಟು

ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಸರ್ಕಾರದ ಗ್ಯಾರಂಟಿಗಳನ್ನಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ

ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ

ಬೆಂಗಳೂರು: ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಸರ್ಕಾರದ ಗ್ಯಾರಂಟಿಗಳನ್ನಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ತಿರುಗೇಟು ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ವಿರೋಧ ಪಕ್ಷದ ನಾಯಕರಾದ ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ ಸಂಶೋಧನೆ. ಅಶೋಕ್ ಅವರೇ, ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಯಾಕೆ ಇಷ್ಟೊಂದು ಸಿಟ್ಟು? ಮತ್ಸರ? ಅದರ ಫಲಾನುಭವಿಗಳಾದ ಬಡವರು, ಮಹಿಳೆಯರು, ಯುವಜನರ ಬಗ್ಗೆ ಯಾಕೆ ನಿಮಗೆ ಇಷ್ಟೊಂದು ದ್ವೇಷ, ಅಸಹನೆ?

ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಸರ್ಕಾರದ ಗ್ಯಾರಂಟಿಗಳನ್ನಲ್ಲ. ಅಶೋಕ್ ಅವರೇ, ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ. ಕಳೆದ ಲೋಕಸಭಾ ಚುನಾವಣೆಗಿಂತ ಶೇಕಡಾ 13 ರಷ್ಟು ಹೆಚ್ಚು ಮತಗಳನ್ನು ರಾಜ್ಯದ ಮತದಾರರು ಈ ಬಾರಿ ನಮಗೆ ನೀಡಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ನಮ್ಮ ಪಕ್ಷದ ನಡುವಿನ ಮತಪ್ರಮಾಣದ ಅಂತರ ಕೇವಲ 0.63. ಈಗ ಹೇಳಿ ಗೆದ್ದವರು ಯಾರು? ಸೋತವರು ಯಾರು? ಎಂದು ವ್ಯಂಗ್ಯ ಮಾಡಿದ್ದಾರೆ.

ನಮ್ಮ ಗೆಲುವಿನಿಂದ ನಾವು ತೃಪ್ತರಲ್ಲದೆ ಇದ್ದರೂ ರಾಜ್ಯದ ಜನ ಗೆಲ್ಲಿಸಿದ್ದು ನಮ್ಮನ್ನು, ಸೋಲಿಸಿದ್ದು ನಿಮ್ಮನ್ನು ಎನ್ನುವುದನ್ನು ಮರೆಯದಿರಿ. ಜೆಡಿಎಸ್ ಪಕ್ಷದ ಪಾದಕ್ಕೆ ಬಿದ್ದರೂ, 26 ಸ್ಥಾನಗಳಿಂದ 17 ಸ್ಥಾನಕ್ಕೆ ನಿಮ್ಮ ಪಕ್ಷ ಕುಸಿಯುವುದನ್ನು ತಪ್ಪಿಸಲು ಆಗಲಿಲ್ಲ. ಒಂದು ಸ್ಥಾನದಿಂದ ಒಂಬತ್ತು ಸ್ಥಾನಕ್ಕೆ ನಾವು ಏರುವುದನ್ನೂ ನಿಮಗೆ ತಪ್ಪಿಸಲಾಗಲಿಲ್ಲ. ಮೊದಲು ನಿಮ್ಮ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಿ ಆ ಮೇಲೆ ನಮ್ಮ ಪಕ್ಷದ ಚುನಾವಣಾ ಫಲಿತಾಂಶದ ವಿಶ್ಲೇಷಣೆ ನಡೆಸಿ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ

ಕೇವಲ ರಾಜಕೀಯ ಲಾಭದ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿಗೆ ತಂದಿಲ್ಲ, ಅದು ನಮ್ಮ ಬದ್ಧತೆ ಮತ್ತು ರಾಜ್ಯದ ಜನರ ಮೇಲಿನ ಕಾಳಜಿ. ಕೇಂದ್ರದ ಬಿಜೆಪಿ ಸರ್ಕಾರದ ದುರಾಡಳಿತದಿಂದ ನೆಲ ಹಿಡಿದಿರುವ ಜನತೆಗೆ ನೆರವಾಗುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಕೇಂದ್ರದ ಸರ್ಕಾರಿ ಯಂತ್ರದ ದುರುಪಯೋಗ, ಮೋದಿ ನಾಮ ಬಲ, ಅಪಾರವಾದ ಸಂಪನ್ಮೂಲಗಳ ಹೊರತಾಗಿಯೂ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯ ದಿವಾಳಿಯಾಗಬೇಕು ಎಂಬ ಆಸೆ ನಿಮಗಿದ್ದರೂ ಅದು ಈಡೇರುವುದಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿಯೂ ಸುಭದ್ರವಾಗಿರುತ್ತದೆ. ಸಾಲ ಮಾಡಿ ಸಂಬಳ ಕೊಡುವ ದುಸ್ಥಿತಿಗೆ ನಮ್ಮ ಸರ್ಕಾರ ತಲುಪಿಲ್ಲ. ನಿಮಗೆ ಬರುವ ಸಂಬಳದಲ್ಲಿ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ.

ದಲಿತರ ಬಗೆಗಿನ ನಿಮ್ಮ ಕಾಳಜಿ ಎಷ್ಟೊಂದು ಹುಸಿಯಾಗಿದೆ ಎನ್ನುವುದಕ್ಕೆ ಕೇಂದ್ರದ ಬಿಜೆಪಿ ಸರ್ಕಾರದ ಸಚಿವ ಸಂಪುಟವೇ ಸಾಕ್ಷಿ. ಈ ಸಂಪುಟದಲ್ಲಿ ರಾಜ್ಯದಿಂದ ಒಬ್ಬನೇ ಒಬ್ಬ ದಲಿತ ಇಲ್ಲವೆ ಹಿಂದುಳಿದ ಸಮುದಾಯದ ನಾಯಕನಿಗೆ ಅವಕಾಶ ನೀಡಿಲ್ಲ. ದೇಶದಲ್ಲಿಯೇ ಮೊದಲ ಬಾರಿ ಎಸ್ ಸಿಪಿ/ಟಿಎಸ್ ಪಿ ಕಾಯ್ದೆಯನ್ನು ಜಾರಿಗೊಳಿಸಿ, ಅವರ ಜನಸಂಖ್ಯೆಗೆ ಅನುಗುಣವಾಗಿ ಒಟ್ಟು ಸಂಪನ್ಮೂಲದ ಶೇಕಡಾ 25ರಷ್ಟನ್ನು ಮೀಸಲು ಇಟ್ಟವರು ನಾವು. ನಿಮಗೆ ದಮ್ಮು-ತಾಖತ್ ಇದ್ದರೆ ಈ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಲು ಪ್ರಧಾನಿ ಮೋದಿ ಅವರಿಗೆ ತಿಳಿಸಿ. ಆ ನಂತರ ನಮ್ಮ ಬಗ್ಗೆ ಮಾತನಾಡಿ.

ಡಿ.ಕೆ.ಸುರೇಶ್ ಅವರು ಸೋತಿದ್ದಾರೆ ಎನ್ನುವುದು ನಿಜ. ಆದರೆ ಬಳ್ಳಾರಿ, ಬೀದರ್, ಚಾಮರಾಜನಗರ, ಚಿಕ್ಕೋಡಿ, ದಾವಣಗೆರೆ, ಕಲ್ಬುರ್ಗಿ, ಮತ್ತು ರಾಯಚೂರುಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನೂ ನಮ್ಮ ಪಕ್ಷದ ಅಭ್ಯರ್ಥಿಗಳು ಸೋಲಿಸಿದ್ದಾರೆ. ಹುಬ್ಬಳ್ಳಿಯ ಅಮಾಯಕ ಹೆಣ್ಣೊಬ್ಬಳ ಹತ್ಯೆಯನ್ನು ನಿಮ್ಮ ಪಕ್ಷ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡ ಕಾರಣಕ್ಕಾಗಿ ನಮಗೆ ಆ ಭಾಗದಲ್ಲಿ ಹಿನ್ನಡೆಯಾಯಿತು. ಇಲ್ಲದೆ ಇದ್ದರೆ ನಿಮ್ಮ ಪಕ್ಷ ಒಂದಂಕಿಗೆ ಇಳಿಯುತ್ತಿತ್ತು. ನಿಮ್ಮ ದೆಹಲಿ ನಾಯಕರ ರೀತಿಯಲ್ಲಿ ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *