ಸಂಬಂಧವೇ ಇಲ್ಲದ ಮೂವರ ಶರಣಾಗಿಸಿ ಸಿಕ್ಕಿಬಿದ್ದ ನಟ ದರ್ಶನ್: ಪೊಲೀಸರು ರಹಸ್ಯ ಕೊಲೆ ಭೇದಿಸಿದ್ದು ಹೇಗೆ? ಇಲ್ಲಿದೆ ಮಾಹಿತಿ…

ತಮ್ಮ ಗೆಳತಿಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ ಎಂಬ ಕಾರಣಕ್ಕೆ ತಮ್ಮದೇ ಅಭಿಮಾನಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಹತ್ಯೆಗೈದು ರಾಜಕಾಲುವೆಗೆ ಎಸೆದ ಆರೋಪದ ಮೇರೆಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಮಂದಿಯನ್ನು ಪೊಲೀಸರು ಬಂಂಧನಕ್ಕೊಳಪಡಿಸಿದ್ದಾರೆ.

ರೇಣುಕಾಸ್ವಾಮಿ-ದರ್ಶನ್

ರೇಣುಕಾಸ್ವಾಮಿ-ದರ್ಶನ್

ಬೆಂಗಳೂರು: ತಮ್ಮ ಗೆಳತಿಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ ಎಂಬ ಕಾರಣಕ್ಕೆ ತಮ್ಮದೇ ಅಭಿಮಾನಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಹತ್ಯೆಗೈದು ರಾಜಕಾಲುವೆಗೆ ಎಸೆದ ಆರೋಪದ ಮೇರೆಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಮಂದಿಯನ್ನು ಪೊಲೀಸರು ಬಂಂಧನಕ್ಕೊಳಪಡಿಸಿದ್ದಾರೆ.

ಅಷ್ಟಕ್ಕೂ ಏನಿದು ಪ್ರಕರಣ? ಚಿತ್ರದುರ್ಗದ ರೇಣುಕಾ ಸ್ವಾಮಿಗೂ ನಟ ದರ್ಶನ್‌ಗೂ ಎಲ್ಲಿಂದೆಲ್ಲಿಗೆ ಸಂಬಂಧ? ಕೊಲೆ ನಡೆದಿದ್ದು ಹೇಗೆ? ಕೊಲೆಗೂ ಮುನ್ನ ಏನೇನಾಯ್ತು? ಕೊಲೆ ಪ್ರಕರಣ ಇಂಚಿಂಚೂ ಮಾಹಿತಿ ಇಲ್ಲಿದೆ…

ಕಳೆದ 10 ವರ್ಷಗಳಿಂದ ನಟ ದರ್ಶನ್ ಹಾಗೂ ಪವಿತ್ರಾ ಗೌಡ ನಡುವೆ ಸಂಬಂಧ ಇದೆ ಎನ್ನಲಾಗುತ್ತಿದ್ದು ದರ್ಶನ್- ವಿಜಯಲಕ್ಷ್ಮೀ ಮಧ್ಯೆ ಪವಿತ್ರಾ ಗೌಡ ಬಂದಿದ್ದಾರೆ ಎಂದು ಅಭಿಮಾನಿ ರೇಣುಕಾಸ್ವಾಮಿ ಕೆರಳಿದ್ದಾರೆ. ದರ್ಶನ್-ವಿಜಯಲಕ್ಷ್ಮೀ ಸಂಸಾರದಲ್ಲಿ ಹುಳಿ ಹಿಂಡಿದ್ದು ಪವಿತ್ರಾ ಗೌಡ ಎಂಬ ಸಿಟ್ಟು, ಬೇಸರ ರೇಣುಕಾ ಸ್ವಾಮಿ ಅವರಲ್ಲಿತ್ತು. ಇದೇ ಕಾರಣಕ್ಕೆ ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್‌ಗಳನ್ನ ಕಳುಹಿಸಿದ್ದರು. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್‌ಗಳನ್ನು ಕಳುಹಿಸಿದ ಪರಿಣಾಮ ರೇಣುಕಾ ಸ್ವಾಮಿ ಹತ್ಯೆಯಾಗಿದೆ ಎನ್ನಲಾಗಿದೆ. ಈ ವಿಚಾರವನ್ನು ಪವಿತ್ರಾ ಅವರು ದರ್ಶನ್ ಅವರ ಗಮನಕ್ಕೆ ತಂದಿದ್ದು, ಇದಕ್ಕೆ ರೇಣುಕಾ ಸ್ವಾಮಿ ವಿರುದ್ಧ ದರ್ಶನ್ ಕೆಂಡಾಮಂಡಲಗೊಂಡಿದ್ದರು.

ಪರಿಣಾಮ, ಚಿತ್ರದುರ್ಗಕ್ಕೆ ದೂರವಾಣಿ ಕರೆ ಹೋಗಿದೆ. ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರಗೆ ರೇಣುಕಾ ಸ್ವಾಮಿ ಬಗ್ಗೆ ಪತ್ತೆ ಹಚ್ಚುವಂತೆ ಸೂಚಿಸಲಾಗಿದೆ.

ರೇಣುಕಾಸ್ವಾಮಿ-ದರ್ಶನ್

ಬಳಿಕ ರೇಣುಕಾ ಸ್ವಾಮಿ ಅವರನ್ನ ವಾಚ್ ಮಾಡಿ, ಫೋನ್ ನಂಬರ್ ಕಲೆಕ್ಟ್ ಮಾಡಿ, ಹುಡುಗಿಯಂತೆ ಕರೆ ಮಾಡಿ ಮಾತನಾಡಿ ನಿರ್ದಿಷ್ಟ ಜಾಗಕ್ಕೆ ಬರಲು ಸೂಚಿಸಲಾಗಿದೆ. ಅಲ್ಲಿಂದ ರೇಣುಕಾ ಸ್ವಾಮಿ ಅವರನ್ನ ಕಿಡ್ನ್ಯಾಪ್ ಮಾಡಲಾಗಿದೆ. ಆನಂತರ ಆಗಬಾರದ್ದು ಆಗಿಹೋಗಿದೆ.

  • ಜೂನ್ 8 – ರೇಣುಕಾ ಸ್ವಾಮಿ ಅವರನ್ನ ಚಿತ್ರದುರ್ಗದಿಂದ ‘ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ’ ಅಧ್ಯಕ್ಷ ರಾಘವೇಂದ್ರ & ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ಕರೆತಂದರು.
  • ಜೂನ್ 8 – ದರ್ಶನ್ ಆಪ್ತ ವಿನಯ್‌ಗೆ ಸೇರಿದ ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾ ಸ್ವಾಮಿ ಮೇಲೆ ಹಲ್ಲೆ ನಡೆಸಲಾಗಿದೆ.
  • ಜೂನ್ 8 ರಾತ್ರಿ – ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ನೀಡಲಾಗಿದೆ.
  • ಜೂನ್ 8 ರಾತ್ರಿ – ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾ ಸ್ವಾಮಿ ಹತ್ಯೆ
  • ಜೂನ್ 9 ಮುಂಜಾನೆ 4.30 – ಶೆಡ್‌ನಲ್ಲಿನ ಶವವನ್ನ ವಿನಯ್‌ ಮತ್ತು ಇತರರು ಸುಮನಹಳ್ಳಿ ರಾಜಕಾಲುವೆಗೆ ಎಸೆದರು.
  • ಜೂನ್ 9 ಬೆಳಗ್ಗೆ 8.30- ಅಪರಿಚಿತ ಶವ (ರೇಣುಕಾ ಸ್ವಾಮಿ) ಡೆಲಿವರಿ ಬಾಯ್ ಕಣ್ಣಿಗೆ ಬಿದ್ದಿದೆ.
  • ಜೂನ್ 9 ಬೆಳಗ್ಗೆ – ಅಪರಿಚಿತ ಶವ ಪತ್ತೆ ಕುರಿತು ಸ್ಥಳೀಯ ಅಪಾರ್ಟ್‌ಮೆಂಟ್‌ನ ಸೆಕ್ಯೂರಿಟಿ ಗಾರ್ಡ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಫ್‌ಐಆರ್‌ ದಾಖಲಾಗಿದೆ.
  • ಜೂನ್ 9 ಬೆಳಗ್ಗೆ – ಸುಮನಹಳ್ಳಿ ರಾಜಕಾಲುವೆಗೆ ಕಾಮಾಕ್ಷಿಪಾಳ್ಯ ಪೊಲೀಸರ ಭೇಟಿ, ಪರಿಶೀಲನೆ
  • ಜೂನ್ 10 – ಕೊಲೆ ಮಾಡಿದ್ದು ತಾವೇ ಎಂದು ಹೇಳಿ ದರ್ಶನ್ ಅವರ ಮೂವರು ಸಹಚರರು ಸರಂಡರ್ ಆದರು. ತನಿಖೆ, ವಿಚಾರಣೆ ಚುರುಕುಗೊಳಿಸಿದ ಪೊಲೀಸರು.
  • ಜೂನ್ 10 – ತನಿಖೆ ವೇಳೆ ಪೊಲೀಸರಿಗೆ ಅಚ್ಚರಿ ಕಾದಿತ್ತು. ವಿಚಾರಣೆ ನಡೆದಾಗ ಕೊಲೆಯ ಅಸಲಿ ವಿಷಯ ಬೆಳಕಿಗೆ ಬಂದಿದೆ.
  • ಜೂನ್ 10 ರಾತ್ರಿ – ಹತ್ಯೆಯಲ್ಲಿ ದರ್ಶನ್ ಕೈವಾಡ ಇದೆ ಎಂದು ತಿಳಿದ ಬಳಿಕ ‘ಚಾಲೆಂಜಿಂಗ್ ಸ್ಟಾರ್‌’ನ ಅರೆಸ್ಟ್ ಮಾಡಲು ಮೈಸೂರಿಗೆ ತೆರಳಿದ ಬೆಂಗಳೂರು ಪೊಲೀಸರು.
  • ಜೂನ್ 10 – ಪ್ರಕರಣಕ್ಕೆ ಸಂಬಂಧಿಸಿದಂತೆ ಇತರೆ ಆರೋಪಿಗಳ ಬಂಧನ.
  • ಜೂನ್ 11 ಬೆಳಗ್ಗೆ 6.30 – ಮೈಸೂರಿನ ರಾಡಿಸನ್‌ ಹೋಟೆಲ್‌ನಲ್ಲಿ ಜಿಮ್ ಮಾಡುತ್ತಿದ್ದ ದರ್ಶನ್.
  • ಜೂನ್ 11 ಬೆಳಗ್ಗೆ – ಮೈಸೂರಿನ ರಾಡಿಸನ್‌ ಹೋಟೆಲ್‌ನಲ್ಲಿ ದರ್ಶನ್‌ನ ವಶಕ್ಕೆ ಪಡೆದ ಪೊಲೀಸರು.
  • ಜೂನ್ 11 – ದರ್ಶನ್ ಅವರನ್ನ ಬೆಂಗಳೂರಿಗೆ ಕರೆತಂದ ಪೊಲೀಸರು.
  • ಜೂನ್ 11 ಮಧ್ಯಾಹ್ನ – ಪವಿತ್ರಾ ಗೌಡರನ್ನ ವಶಕ್ಕೆ ಪಡೆದ ಪೊಲೀಸರು.
  • ಜೂನ್ 11 ಮಧ್ಯಾಹ್ನ – ದರ್ಶನ್ ಬಂಧನ, ಪವಿತ್ರಾ ಗೌಡ ಬಂಧನ.
  • ಜೂನ್ 11 ಸಂಜೆ – 13 ಬಂಧಿತ ಆರೋಪಿಗಳನ್ನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು.
  • ಜೂನ್ 11 ಸಂಜೆ – ಬೌರಿಂಗ್‌ ಆಸ್ಪತ್ರೆಯಿಂದ ನ್ಯಾಯಾಲಯಕ್ಕೆ 13 ಬಂಧಿತ ಆರೋಪಿಗಳನ್ನ ಕರೆದೊಯ್ದ ಪೊಲೀಸರು. ನ್ಯಾಯಾಧೀಶರ ಮುಂದೆ 13 ಬಂಧಿತ ಆರೋಪಿಗಳು ಹಾಜರು.
  • ಜೂನ್ 11 ಸಂಜೆ – ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್
  • ಜೂನ್‌ 11 ಸಂಜೆ – 13 ಬಂಧಿತ ಆರೋಪಿಗಳನ್ನ 6 ದಿನ ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ. (kp.c)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *