

ರಾಜ್ಯ ಸಮ್ಮಿಶ್ರ ಸರ್ಕಾರದ ಅತೃಪ್ತಶಾಸಕರ
ತಂಡದಲ್ಲಿರುವ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಪತ್ತೆಗೆ ಡಿ.ಸಿ.ಸಿ. ಉತ್ತರ ಕನ್ನಡ ಪೊಲೀಸ್ ಮೊರೆಹೋಗಿದೆ.
ಬುಧವಾರ ಶಿರಸಿ ಉಪ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿರುವ ಜಿಲ್ಲಾ ಕಾಂಗ್ರೆಸ್ ತಂಡ ಯಲ್ಲಾಪುರ ಕ್ಷೇತ್ರದಲ್ಲಿ ಬರ,ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಈ ಸಾರ್ವಜನಿಕ ಸಮಸ್ಯೆಗೆ ಸ್ಫಂದಿಸಬೇಕಿದ್ದ ಶಾಸಕ ಶಿವರಾಮ ಹೆಬ್ಬಾರರನ್ನು ಅಕ್ರಮವಾಗಿ ಕರೆದೊಯ್ದು ಒತ್ತಡ,ಆಮಿಷ ತೋರಿಸಿ ಅಪಹರಿಸಿದಂತಿದೆ.
ಕಳೆದ 10 ದಿವಸಗಳಿಂದ ಜನರ ಸಂಪರ್ಕ, ಮಾತಿಗೆ ಸಿಗದ ಹೆಬ್ಬಾರ್ ನಾಪತ್ತೆ ಹಿಂದೆ ಷಡ್ಯಂತ್ರ, ಕುತಂತ್ರಗಳಿರಬಹುದು ಹಾಗಾಗಿ ಅವರನ್ನು ಶೀಘ್ರಬಂಧಮುಕ್ತಗೊಳಿಸಿ ಸಾರ್ವಜನಿಕ ಸೇವೆಗೆ ಅನುಕೂಲವಾಗುವಂತೆ ಸಹಕರಿಸಬೇಕೆಂದು ಪೊಲೀಸ್ ದೂರಿನಲ್ಲಿ ವಿನಂತಿಸಲಾಗಿದೆ.
ಪೊಲೀಸ್ ದೂರು ನೀಡುವ ವೇಳೆ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಭೀಮಣ್ಣ ಪ್ರತಿಕ್ರೀಯಿಸಿ ನಮ್ಮ ಶಾಸಕ ಶಿವರಾಮ ಹೆಬ್ಬಾರ ಕಳೆದ ಹತ್ತು ದಿವಸಗಳಿಂದ ನಾಪತ್ತೆಯಾಗಿದ್ದಾರೆ. ಅವರ ಮನೆಗೆ ತೆರಳಿ ವಿಚಾರಿಸಿದರೂ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ ಹಾಗಾಗಿ ಅವರ ಪತ್ತೆಗಾಗಿ ಪೊಲೀಸ್ ದೂರು ನೀಡಲಾಗಿದೆ ಎಂದು ಹೇಳಿದರು.
ಇದೇ ರೀತಿ ಕಾಂಗ್ರೆಸ್, ಜೆ.ಡಿ.ಎಸ್. ಗಳಿಂದ ಆಯ್ಕೆಯಾಗಿ ಈಗ ಅನ್ಯ ಚಿತಾವಣೆಗಳಿಂದ ಕ್ಷೇತ್ರಗಳಿಂದ ತಲೆ ಮರೆಸಿಕೊಂಡಿರುವ ಶಾಸಕರ ಪತ್ತೆಗೆ ಆಯಾ ಜಿಲ್ಲೆಗಳಿಂದ ಪೊಲೀಸ್ ದೂರು ದಾಖಲಿಸಿರುವ ಬಗ್ಗೆ ಸಮಾಜಮುಖಿಗೆ ಮಾಹಿತಿ ದೊರೆತಿದೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
