ಪುನೀತ್‌ ರಾಜಕುಮಾರ ಆಶ್ರಯಧಾಮದಲ್ಲಿ ನಡೆಯಿತು ಮಂತ್ರ ಮಾಂಗಲ್ಯ ಮದುವೆ

ಸಿದ್ದಾಪುರ: ತಾಲೂಕಿನ ಮೂಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದವರಿಗೆ ಗುರುವಾರ ಮಂತ್ರ ಮಾಂಗಲ್ಯದ ಮದುವೆ ಮಾಡಲಾಯಿತು.


ಮನೆಯವರಿಂದ ತಿರಸ್ಕರಿಸಲ್ಪಟ್ಟು ಮಾನಸಿಕವಾಗಿ ಅಸ್ವಸ್ಥರಾಗಿದ್ದ ಹೊನ್ನಾವರದ ದಿವ್ಯಾ ಹಾಗೂ ಸಿಗ್ಗಾಂವನ ಈರಣ್ಣ ಆಶ್ರಮದಲ್ಲಿ ಆಶ್ರಯ ಪಡೆದು ಚೇತರಿಸಿಕೊಂಡಿದ್ದು ಇಬ್ಬರು ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು‌. ಆಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ ಎರಡು ಮನೆಯವರಿಗೆ ವಿಷಯ ತಿಳಿಸಿ ತಾಲೂಕಿನ ಗಣ್ಯರು ಹಾಗೂ ಮುತೈದೆಯರ ಸಮ್ಮುಖದಲ್ಲಿ ಕುವೆಂಪು ಆಶಯದ ಮಂತ್ರ ಮಾಂಗಲ್ಯ ಮಾಡಿದರು. ನವಜೋಡಿಗೆ ಹೊಸಬಟ್ಟೆ, ಹೂವಿನ ಹಾರ, ಉಂಗುರ ಹಾಗೂ ತಾಳಿಯೊಂದಿಗೆ ಸರಳವಾಗಿ ವಿವಾಹ ನಡೆಸಲಾಯಿತು. ಪತ್ರಕರ್ತ ಕನ್ನೇಶ್ ನಾಯ್ಕ ಮಂತ್ರ ಮಾಂಗಲ್ಯ ನಡೆಸಿಕೊಟ್ಟರು.

‘ ಗಣ್ಯರು ಸಾಕ್ಷಿ ‘
ರಾಷ್ಟ್ರಕವಿ ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯದ ಮದುವೆಗೆ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್, ಸಿದ್ದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಜಿ.ನಾಯ್ಕ, ರೈತ ಮುಖಂಡ ವೀರಭದ್ರ ನಾಯ್ಕ, ತಾಪಂ ಮಾಜಿ ಸದಸ್ಯ ನಾಸಿರ್ ಖಾನ್, ರಾಘವೇಂದ್ರ ಕಾವಂಚೂರ, ಕೆ.ಟಿ.ಹೊನ್ನೆಗುಂಡಿ, ಎಂ.ಡಿ.ನಾಯ್ಕ, ಟಿ.ಕೆ.ಎಂ.ಆಜಾದ್, ಅಸ್ಲಾಂ ಸಿದ್ದಾಪುರ, ಚಿತ್ರಕಲಾ ಶಿಕ್ಷಕ ರಾಘವೇಂದ್ರ ನಾಯ್ಕ ಹಾಗೂ ಮಹಿಳೆಯರು ಮದುವೆಯಲ್ಲಿ ಹಾಜರಿದ್ದು ವಧು-ವರನನ್ನು ಹಾರೈಸಿದರು.

‘ ಆಶ್ರಮ ವಾರ್ಷಿಕೋತ್ಸವ ‘
ಇದೇ ವೇಳೆ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದ ವಾರ್ಷಿಕೋತ್ಸವ ಆಚರಿಸಲಾಯಿತು. ಜತೆಗೆ ಆಶ್ರಮದ ಮುಖ್ಯಸ್ಥೆ ಮಮತಾ ನಾಯ್ಕ ಅವರ ಜನ್ಮದಿನದ ಆಚರಿಸಲಾಯಿತು. ತಾಲೂಕಾ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಖಾನ್ ಕೂಡ ತಮ್ಮ ಹುಟ್ಟು ಹಬ್ಬದ ನಿಮಿತ್ತ ಆಶ್ರಮವಾಸಿಗಳಿಗೆ ಸಿಹಿ ನೀಡಿ ಜನ್ಮದಿನ ಆಚರಿಸಿಕೊಂಡರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

wild news….! ಜಿಂಕೆ, ಚಿರತೆ ಸಾವು!

ಜಿಂಕೆ ಬೇಟೆಯಾಡಿ ಕೊಂದ ಅರೋಪದ ಮೇಲೆ ಅರಣ್ಯ ಇಲಾಖೆಯವರು ಯಲ್ಲಾಪುರ ತಾಲೂಕಿನ ಮದನೂರು ಗ್ರಾಮದ ಹುಲಗೋಡಿನ ರಮೇಶ ನಾಗೇಶ ಗಾಂವ್ಕರ ಎಂಬಾತನನ್ನು ಬಂಧಿಸಿ ಆತನಿಂದ...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ!

ಸಾವಿನಲ್ಲೂ ಸಾರ್ಥಕತೆ ಮೆರೆದ ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ! ಸೀತಾರಾಮ್ ಯೆಚೂರಿ ಅವರ ಇಚ್ಚೆಯಂತೆ ಅವರ ಕುಟುಂಬವು...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *