ಪುನೀತ್‌ ರಾಜಕುಮಾರ ಆಶ್ರಯಧಾಮದಲ್ಲಿ ನಡೆಯಿತು ಮಂತ್ರ ಮಾಂಗಲ್ಯ ಮದುವೆ

ಸಿದ್ದಾಪುರ: ತಾಲೂಕಿನ ಮೂಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದವರಿಗೆ ಗುರುವಾರ ಮಂತ್ರ ಮಾಂಗಲ್ಯದ ಮದುವೆ ಮಾಡಲಾಯಿತು.


ಮನೆಯವರಿಂದ ತಿರಸ್ಕರಿಸಲ್ಪಟ್ಟು ಮಾನಸಿಕವಾಗಿ ಅಸ್ವಸ್ಥರಾಗಿದ್ದ ಹೊನ್ನಾವರದ ದಿವ್ಯಾ ಹಾಗೂ ಸಿಗ್ಗಾಂವನ ಈರಣ್ಣ ಆಶ್ರಮದಲ್ಲಿ ಆಶ್ರಯ ಪಡೆದು ಚೇತರಿಸಿಕೊಂಡಿದ್ದು ಇಬ್ಬರು ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು‌. ಆಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ ಎರಡು ಮನೆಯವರಿಗೆ ವಿಷಯ ತಿಳಿಸಿ ತಾಲೂಕಿನ ಗಣ್ಯರು ಹಾಗೂ ಮುತೈದೆಯರ ಸಮ್ಮುಖದಲ್ಲಿ ಕುವೆಂಪು ಆಶಯದ ಮಂತ್ರ ಮಾಂಗಲ್ಯ ಮಾಡಿದರು. ನವಜೋಡಿಗೆ ಹೊಸಬಟ್ಟೆ, ಹೂವಿನ ಹಾರ, ಉಂಗುರ ಹಾಗೂ ತಾಳಿಯೊಂದಿಗೆ ಸರಳವಾಗಿ ವಿವಾಹ ನಡೆಸಲಾಯಿತು. ಪತ್ರಕರ್ತ ಕನ್ನೇಶ್ ನಾಯ್ಕ ಮಂತ್ರ ಮಾಂಗಲ್ಯ ನಡೆಸಿಕೊಟ್ಟರು.

‘ ಗಣ್ಯರು ಸಾಕ್ಷಿ ‘
ರಾಷ್ಟ್ರಕವಿ ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯದ ಮದುವೆಗೆ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್, ಸಿದ್ದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಜಿ.ನಾಯ್ಕ, ರೈತ ಮುಖಂಡ ವೀರಭದ್ರ ನಾಯ್ಕ, ತಾಪಂ ಮಾಜಿ ಸದಸ್ಯ ನಾಸಿರ್ ಖಾನ್, ರಾಘವೇಂದ್ರ ಕಾವಂಚೂರ, ಕೆ.ಟಿ.ಹೊನ್ನೆಗುಂಡಿ, ಎಂ.ಡಿ.ನಾಯ್ಕ, ಟಿ.ಕೆ.ಎಂ.ಆಜಾದ್, ಅಸ್ಲಾಂ ಸಿದ್ದಾಪುರ, ಚಿತ್ರಕಲಾ ಶಿಕ್ಷಕ ರಾಘವೇಂದ್ರ ನಾಯ್ಕ ಹಾಗೂ ಮಹಿಳೆಯರು ಮದುವೆಯಲ್ಲಿ ಹಾಜರಿದ್ದು ವಧು-ವರನನ್ನು ಹಾರೈಸಿದರು.

‘ ಆಶ್ರಮ ವಾರ್ಷಿಕೋತ್ಸವ ‘
ಇದೇ ವೇಳೆ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದ ವಾರ್ಷಿಕೋತ್ಸವ ಆಚರಿಸಲಾಯಿತು. ಜತೆಗೆ ಆಶ್ರಮದ ಮುಖ್ಯಸ್ಥೆ ಮಮತಾ ನಾಯ್ಕ ಅವರ ಜನ್ಮದಿನದ ಆಚರಿಸಲಾಯಿತು. ತಾಲೂಕಾ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಖಾನ್ ಕೂಡ ತಮ್ಮ ಹುಟ್ಟು ಹಬ್ಬದ ನಿಮಿತ್ತ ಆಶ್ರಮವಾಸಿಗಳಿಗೆ ಸಿಹಿ ನೀಡಿ ಜನ್ಮದಿನ ಆಚರಿಸಿಕೊಂಡರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *