ಹಿರಿಯ ಪತ್ರಕರ್ತ Shashidhar Bhatt ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: CM Siddaramaiah

ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ.

journalist Shashidhar Bhatt

ಪತ್ರಕರ್ತ ಶಶಿಧರ್ ಭಟ್

ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಅನಾರೋಗ್ಯಕ್ಕೀಡಾಗಿರುವ ಹಿರಿಯ ಪತ್ರಕರ್ತ Shashidhar Bhatt ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ. ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

journalist Shashidhar Bhatt

ನನ್ನ ಪರವಾಗಿ ಯಾರೂ ಇಲ್ಲ: ಅಳಲು ತೋಡಿಕೊಂಡಿದ್ದ ಪತ್ರಕರ್ತ

ಇನ್ನು ಅನಾರೋಗ್ಯಕ್ಕೆ ತುತ್ತಾಗಿರುವ ಪತ್ರಕರ್ತ ಶಶಿಧರ್ ಭಟ್, ‘ಆಸ್ಪತ್ರೆಯ ಬೆಡ್‌ ಮೇಲಿಂದನೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಒಂದನ್ನು ಹಾಕಿ, “ನಾನು ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿದ್ದೇನೆ. ಅನಾರೋಗ್ಯ ಸಮಸ್ಯೆ ಈಗ ನನ್ನ ಕಣ್ಣು ತೆರೆಸಿದೆ. ಆಸ್ಪತ್ರೆಯ ಜಗತ್ತು ಎಷ್ಟು ಕ್ರೂರವಾದದ್ದು ಎಂಬುದು ಅರಿವಿಗೆ ಬಂದಿದೆ. ಹಾಗೆಯೇ ನಮ್ಮ ಸುತ್ತ ಇರುವವರು ಈ ಘಳಿಗೆಯಲ್ಲಿ ಯಾರು ನನ್ನವರಲ್ಲ ಎಂಬುದು ಅರ್ಥವಾಗುತ್ತಿದೆ. ಪ್ರೀತಿ, ನಂಬಿಕೆ ಸಂಬಂಧ ಎಲ್ಲ ಸುಳ್ಳು ಎಂಬುದು ಅರ್ಥವಾಗಿದೆ, ಧನ್ಯವಾದಗಳು ”ಎಂದು ನೋವಿನಿಂದ ಹೇಳಿದ್ದರು.

ಶಶಿಧರ್ ಭಟ್ ಅವರ ಈ ಪೋಸ್ಟ್ ಗೆ ಸಾವಿರಾರು ಅಭಿಮಾನಿಗಳು, ಸಹ ಪತ್ರಕರ್ತರು ಕಾಮೆಂಟ್ ಮೂಲಕ ಬೆಂಬಲ ನೀಡಿದ್ದರು. ಪರಸ್ಪರ ಅವರ ಪೋಸ್ಟ್ ಅನ್ನು ಶೇರ್ ಮಾಡಿದ್ದರು. ನಿಮ್ಮ ಜೊತೆ ನಾವೂ ಇದ್ದೇವೆ ಎಂಬ ಧೈರ್ಯ ತುಂಬುವ ಕೆಲಸ ಮಾಡಿದ್ದರು. ಈ ಪೋಸ್ಟ್ ವೈರಲ್ ಆಗುತ್ತಲೇ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. (ಕಪ್ರ.ಕಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

wild news….! ಜಿಂಕೆ, ಚಿರತೆ ಸಾವು!

ಜಿಂಕೆ ಬೇಟೆಯಾಡಿ ಕೊಂದ ಅರೋಪದ ಮೇಲೆ ಅರಣ್ಯ ಇಲಾಖೆಯವರು ಯಲ್ಲಾಪುರ ತಾಲೂಕಿನ ಮದನೂರು ಗ್ರಾಮದ ಹುಲಗೋಡಿನ ರಮೇಶ ನಾಗೇಶ ಗಾಂವ್ಕರ ಎಂಬಾತನನ್ನು ಬಂಧಿಸಿ ಆತನಿಂದ...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ!

ಸಾವಿನಲ್ಲೂ ಸಾರ್ಥಕತೆ ಮೆರೆದ ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ! ಸೀತಾರಾಮ್ ಯೆಚೂರಿ ಅವರ ಇಚ್ಚೆಯಂತೆ ಅವರ ಕುಟುಂಬವು...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *