ಕೊಪ್ಪದ ಹುಡುಗಿ ಕೊಂದ ಸಾಗರದ ಯುವಕ ಅಂದರ್….‌

ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದು ಹೂತಿಟ್ಟ ಪ್ರಿಯಕರ

ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ.

ಸೌಮ್ಯ-ಸೃಜನ್

ಸೌಮ್ಯ-ಸೃಜನ್

ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತಮನೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಕೊಲೆ ಆರೋಪಿ ಶಿವಮೊಗ್ಗದ ಸಾಗರ ಮೂಲದ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ತನ್ನನ್ನು ಮದುವೆಯಾಗುವಂತೆ ಸೌಮ್ಯ ಸೃಜನ್ ನನ್ನು ಒತ್ತಾಯಿಸುತ್ತಿದ್ದಳು. ಇದರಿಂದ ಕೋಪಗೊಂಡ ಸೃಜನ್ ಸೌಮ್ಯಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಕೊಲೆ ಬಳಿಕ ಸೃಜನ್ ಸೌಮ್ಯಳ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದನು. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ಪೊಲೀಸರ ತನಿಖೆಯಿಂದ ವಿಚಾರ ಬೆಳಕಿಗೆ ಬಂದಿದೆ.

ಸೌಮ್ಯ ತೀರ್ಥಹಳ್ಳಿಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ಜುಲೈ 2ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು. ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ. ಈಗ ಬೇಡ, ಮನೆಯಲ್ಲಿ ಜಗಳವಾಗುತ್ತದೆ. ಸದ್ಯ ಮನೆಗೆ ಹೋಗು ಮುಂದೆ ನೋಡೋಣಾ ಎಂದು ಸಮಾಧಾನ ಮಾಡಲು ಮುಂದಾಗಿದ್ದಾನೆ. ಇದಕ್ಕೆ ಯುವತಿ ಒಪ್ಪದಿದ್ದಾಗ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಕೋಪದಲ್ಲಿ ಸೃಜನ್ ಸೌಮ್ಯಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಆಕೆಯ ಮೃತದೇಹವನ್ನು ಮುಂಬಾಳು ಬಳಿ ಹೂತಿಟ್ಟಿದ್ದಾನೆ.

ಮಗಳು ಮನೆಗೆ ಬರದಿದ್ದಾಗ ಆತಂಕ ಕೊಂಡ ಪೋಷಕರು ಕೊಪ್ಪ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರ ವಿಚಾರಣೆ ವೇಳೆ ತನ್ನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟಿದ್ದಾಗಿ ಸೃಜನ್ ಬಾಯಿ ಬಿಟ್ಟಿದ್ದಾನೆ. ಇನ್ನು ಪೊಲೀಸರು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ. (kp.c)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶಿರಸಿ – ಹಣಕಾಸಿನ ವಿಚಾರ ಒಂದು ಸಾವು, ಮಹಿಳೆಯ ಬಂಧನ!

ಶಿರಸಿ ಪೊಲೀಸ್ರಿಂದ ಕಾರ್ಯಚರಣೆ. ಎಟಿಎಂ ನಿಂದ ಹಣ ತೆಗೆಯಲು ಮುಗ್ದ ಹೆಣ್ಣು ಮಕ್ಕಳಿಗೆ ನೆರವಾಗುವ ನಾಟಕಮಾಡಿ ಅವರ ಎಟಿಎಂ ನಿಂದಲೇ ಹಣ ತೆಗೆದು ಪರಾರಿಯಾಗುತ್ತಿದ್ದ...

ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ

ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ...

ಕಾನಗೋಡು ಬಳಿ ಅಪಘಾತ, ಒಂದು ಸಾವು

ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *