ಗುರುಪೂರ್ಣೀಮಾ- ಸಂಗೀತ ಬೈಠಕ್ – ಜಯರಾಮ ಭಟ್ಟ ಹೆಗ್ಗಾರಳ್ಳಿ ಅಪರೂಪದ ವ್ಯಕ್ತಿ


ಸಿದ್ದಾಪುರ
ಭುವನಗಿರಿ,ಕಲ್ಲಾರೆಮನೆಯ ಸುಷಿರ ಸಂಗೀತ ಪರಿವಾರದ ಸಂಯೋಜನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಭುವನಗಿರಿಯ ಶ್ರೀ ಭುವನೇಶ್ವರಿ ದೇವಾಲಯದಲ್ಲಿ ಗುರುಪೂರ್ಣೀಮಾ ಮತ್ತು ಸಂಗೀತ ಬೈಠಕ್ ಕಾರ್ಯಕ್ರಮ ಜು. ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶ್ರೀ ಭುವನೇಶ್ವರಿ ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜಗೋಡ ಮಾತನಾಡಿ ಈ ಪ್ರದೇಶದಲ್ಲಿ ಸಂಗೀತದ ಕುರಿತು ಆಸಕ್ತಿಯ ವಾತಾವರಣ ರೂಪಿಸಿದ್ದು ಸುಷಿರ ಸಂಗೀತ ಪರಿವಾರ. ಈ ದೇವಾಲಯದಲ್ಲೂ ಹಲವು ಪ್ರಸಿದ್ಧ ಗಾಯಕರ,ಕಲಾವಿದರ ಕಾರ್ಯಕ್ರಮ ಆಯೋಜಿಸುವದರ ಜೊತೆಗೆ ಸ್ಥಳೀಯ ಪ್ರತಿಭೆಗಳ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಅದು ಮುಂದುವರೆಯಲಿ ನಿಶುಲ್ಕದಿಂದ ಈ ಭಾಗದ ಆಸಕ್ತರಿಗೆ ಸಂಗೀತ ಕಲಿಸುತ್ತಿರುವ ಜಯರಾಮ ಭಟ್ಟ ಹೆಗ್ಗಾರಳ್ಳಿ ಅಪರೂಪದ ವ್ಯಕ್ತಿ ಎಂದರು.


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪತ್ರಕರ್ತ,ಸಾಹಿತಿ ಗಂಗಾಧರ ಕೊಳಗಿ ಮಾತನಾಡಿ ಬುದ್ದಿ ಮತ್ತು ಭಾವ ಎರಡರ ಸಮನ್ವಯ ಸಂಗೀತದಲ್ಲಿದೆ. ಸಂಗೀತದಲ್ಲಿ ಪರಿಣಿತಿ ಪಡೆಯಲು ಬುದ್ದಿ ಬೇಕು. ಅದನ್ನು ಆಸ್ವಾದಿಸಲು ಭಾವ ಸಾಕು. ಗುರುವಿನ ಕುರಿತಾದ ಪೂಜ್ಯಭಾವ, ಭಕ್ತಿ,ಶರಣಾಗತಿಯಂಥ ಆಧ್ಯಾತ್ಮಿಕ ಮೌಲ್ಯಗಳನ್ನು ಸಂಗೀತ ನಮ್ಮಲ್ಲಿ ರೂಪಿಸುತ್ತದೆ. ಸಂಗೀತ ಕಲಿಕೆ ಉಳಿದೆಲ್ಲ ಕಲೆಗಳಿಗಿಂತ ಭಿನ್ನ. ಇಲ್ಲಿ ಗುರು-ಶಿಷ್ಯರ ಸಂಬಂಧ ಅನನ್ನಯವಾದದ್ದು. ಈ ಸಂದರ್ಭದಲ್ಲಿ ಇಲ್ಲಿನ ಸ್ವರ ಗಂಗಾ ತಂಡದ ಆಸಕ್ತರಿಗೆ ಯಾವುದೇ ಶುಲ್ಕ ಪಡೆಯದೇ ಸಂಗೀತ ಪಾಠ ಮಾಡುತ್ತಿರುವ ಹಿರಿಯ ಸಂಗೀತಗಾರ ಜಯರಾಮ ಭಟ್ ಹೆಗ್ಗಾರಳ್ಳಿಯವರಿಗೆ ಗುರುವಂದನೆ ಸಲ್ಲಿಸುತ್ತಿರುವದು ನಮ್ಮ ಪರಂಪರೆಗೆ ಸಲ್ಲುವ ಗೌರವ ಎಂದರು.


ಅಭ್ಯಾಗತರಾಗಿ ಪಾಲ್ಗೊಂಡ ರಂಗನಿರ್ದೇಶಕ ಗಣಪತಿ ಹೆಗಡೆ ಹುಲಿಮನೆ ಮಾತನಾಡಿ ಎಲ್ಲ ಕಲಾ ಪ್ರಕಾರಗಳಿಗೂ ಅಗತ್ಯವಾಗಿರುವ ಸಂಗೀತ ನಮ್ಮ ಜೀವನದಲ್ಲಿ ಹಾಸುಹೊಕ್ಕಾಗಿರುವಂಥದ್ದು. ಸಂಗೀತಗಾರರ ಕುಟುಂಬದ ಜಯರಾಮ ಭಟ್ಟರಿಗೆ ಗೌರವ ಸಲ್ಲಿಸುತ್ತಿರುವದು ನಿಜಕ್ಕೂ ಸಲ್ಲಬೇಕಾದ ಗೌರವ. ಎಲ್ಲ ಕಲಾ ಚಟುವಟಿಕೆಗಳಿಗೆ ದಾನಿಗಳ ಸಹಕಾರ ಅಗತ್ಯ ಎಂದರು.
ಈ ಸಂದರ್ಭದಲ್ಲಿ ಭುವನಗಿರಿಯ ಸ್ವರಗಂಗಾ ತಂಡದ ಸದಸ್ಯೆಯರು ತಮ್ಮ ಗುರುಗಳಾದ ಜಯರಾಮ ಭಟ್ಟರಿಗೆ ಗುರುವಂದನೆ ಸಲ್ಲಿಸಿದರು.
ರಾಜೇಶ್ವರಿ ಭಟ್ ಹಾಗೂ ಶ್ರೀನಿಧಿ ಭಟ್ ಅನಿಸಿಕೆ ವ್ಯಕ್ತಪಡಿಸಿದರು.


ಸ್ವರಗಂಗಾ ತಂಡದವರಿಂದ ಭಕ್ತಿ ಸಂಗೀತ ಹಾಗೂ ಅಜಯ ಹೆಗಡೆ ವರ್ಗಾಸರ (ಹಾರ್ಮೋನಿಯಂ) ಮತ್ತು ನಿತಿನ್ ಹೆಗಡೆ ಕಲಗದ್ದೆ(ತಬಲಾ) ಇವರಿಂದ ಸಂಗೀತ ಕಾರ್ಯಕ್ರಮ ಜರುಗಿತು.
ಸುಷಿರ ಸಂಗೀತ ಪರಿವಾರದ ಸಂಚಾಲಕ ನಾರಾಯಣ ಹೆಗಡೆ ಕಲ್ಲಾರೆಮನೆ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿ ಸಂಸ್ಥೆಯ ಚಟುವಟಿಕೆಗಳ ಕುರಿತು ವಿವರಿಸಿದರು.ಪ್ರೊ|ಪ್ರಶಾಂತ ಹೆಗಡೆ ಭುವನಗಿರಿ ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *