ವೃಕ್ಷ ಮಂತ್ರಾಕ್ಷತೆ ಬಗ್ಗೆ ತಿಳಿಯಬೇಕೆ? ಈ ಬರಹ ಓದಿ-

ಸ್ವರ್ಣವಲ್ಲೀ ಶ್ರೀಗಳ ಪರಿಸರ ಕಾಳಜಿ ಮಾದರಿ

ಶಿಷ್ಯರಲ್ಲಿ ವೃಕ್ಷ ಪ್ರೀತಿ ಬೆಳೆಸಲು ವಿಶಿಷ್ಟ ನಡೆ
ಚಾತುರ್ಮಾಸ್ಯದಲ್ಲಿ ಹಸಿರು ಶ್ರೀಗಳಿಂದ ವೃಕ್ಷ ಮಂತ್ರಾಕ್ಷತೆ

ಚಾತುರ್ಮಾಸ್ಯ ಅವಧಿಯಲ್ಲಿ ಪವಿತ್ರ ವೃಕ್ಷಗಳನ್ನು ಸ್ವತಃ ಸ್ವಾಮೀಜಿಗಳೇ ಶಿಷ್ಯರಿಗೆ ನೆನಪಿನ ಮಂತ್ರಾಕ್ಷತೆ ನೀಡುವ ಕಾರ್ಯಕ್ಕೆ ಈ ಬಾರಿಯೂ ಹಸಿರು ಸ್ವಾಮೀಜಿ ಎಂದೇ ಹೆಸರಾದ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಮುನ್ನುಡಿ ಬರೆದಿದ್ದಾರೆ.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರಲ್ಲೂ ಜಾಗೃತಿ ಆಗಬೇಕು. ಮಠ ನೀಡಿದ ಉಡುಗೋರೆಯನ್ನು ಪ್ರೀತಿಯಿಂದ ಬೆಳೆಸಬೇಕು ಎಂಬ ಆಶಯದಲ್ಲಿ ವೃಕ್ಷ ಮಂತ್ರಾಕ್ಷತೆಯನ್ನು ಸ್ವಾಮೀಜಿಗಳು ನೀಡುತ್ತಿದ್ದಾರೆ.
ಬೇರೆ ಬೇರೆ ಅರಣ್ಯ ಪ್ರದೇಶಗಳಲ್ಲಿ ಲಭ್ಯವಿರುವ ಅನೇಕ ಅತ್ಯಮೂಲ್ಯವಾದ ವೃಕ್ಷ ಪ್ರಭೇದಗಳು ಅನೇಕ ಕಾರಣಗಳಿಂದ ವಿನಾಶದ ಅಂಚಿಗೆ ಹೋಗುತ್ತಿರುವ ಸಸ್ಯಗಳನ್ನು ಬೆಳಸಿ, ತರಿಸಿ ಮಠದಿಂದ ಶಿಷ್ಯರಿಗೆ ನೀಡಲಾಗುತ್ತಿದೆ.
ಸಂಪಿಗೆ, ಬಿಲ್ವ, ನೆಲ್ಲಿ, ಸಾಂಬಾರು ಗಿಡ, ಹಲಸು, ರಕ್ತ ಚಂದನ, ಮಾವು, ಸೀತಾ ಅಶೋಕ, ಪುತ್ರ ಸಂಜೀವಿನಿ, ನೇರಳೆ, ಪಾರಿಜಾತ, ಕದಂಬ, ಶಮಿ, ಮೊದಲಾದ ಹಣ್ಣು, ಹೂವು, ಔಷಧ ಸೇರಿದಂತೆ 22ಕ್ಕೂ ಹೆಚ್ಚು ಬಗೆಯ ಸಸ್ಯಗಳನ್ನು ಶ್ರೀಗಳು ವಿತರಿಸುತ್ತಿದ್ದಾರೆ. ಹೀಗೆ ವಿತರಿಸುವ ಸಸ್ಯಗಳನ್ನು ಮಠದ ಪವಿತ್ರ ಸಸ್ಯಲೋಕದಲ್ಲಿ ಬೆಳೆಸಲಾಗುತ್ತಿರುವುದೂ ಇನ್ನೊಂದು ವಿಶೇಷವಾಗಿದೆ.
ಸಸ್ಯ ಲೋಕದಲ್ಲಿ ಸಾವಿರಾರು ಸಸ್ಯಗಳನ್ನು ಇಲ್ಲಿ ಬೆಳೆಸಿದ್ದು, ಕೆಲವು ಅಗತ್ಯ ಸಸಿಗಳನ್ನು ನೀಡಿ ಅರಣ್ಯ ಇಲಾಖೆ ಕೂಡ ಕೈ ಜೋಡಿಸಿ ಶ್ರೀಗಳ ಕನಸಿಗೆ ಸ್ಪಂದಿಸುತ್ತಿದೆ.
2006ರ ಚಾತುರ್ಮಾಸ್ಯದಿಂದ ವೃಕ್ಷ ಮಂತ್ರಾಕ್ಷತೆಯನ್ನು ಶ್ರೀಗಳು ಆರಂಭಿಸಿದ್ದಾರೆ. ಈ ವರೆಗೂ ಶಿಷ್ಯರಿಗೆ ಮಂತ್ರಾಕ್ಷತೆ ಜೊತೆ ಸಸಿ ನೀಡುತ್ತಿರುವ ಸಂಖ್ಯೆ ಲಕ್ಷ ದಾಟಿರಬಹುದು ಎನ್ನುತ್ತಾರೆ ಪರಿಸರ ಕಾರ್ಯಕರ್ತ ಅನಂತ ಹೆಗಡೆ ಅಶೀಸರ.
ಸೀಮಾ ಭಿಕ್ಷೆಗೆ ಬರುವ ಭಕ್ತರೆಲ್ಲರಿಗೂ ಮಂತ್ರಾಕ್ಷತೆಯ ಜೊತೆ ಸಸಿಯನ್ನು ನೀಡುವುದು ವಾಡಿಕೆ. ಪ್ರತಿ ಸೀಮಾ ಭಿಕ್ಷದಂದು 250ಕ್ಕೂ ಅಧಿಕ ಸಸಿಗಳನ್ನು ವಿತರಿಸಲಾಗುತ್ತದೆ. ವೃಕ್ಷ ಮಂತ್ರಾಕ್ಷತೆಯ ರೂಪದಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಪ್ರತಿಯೊಬ್ಬರಿಗೂ ಸಸಿಯನ್ನು ನೀಡುವುದು ಇಲ್ಲಿನ ಕ್ರಮವಾಗಿ ಬೆಳೆದಿದೆ. ವನವಾಸಿಗಳಿಗೂ ಹಸಿರು ಪ್ರೀತಿಯಿಂದ ಶ್ರೀಗಳು ವೃಕ್ಷ ನೀಡುತ್ತಿದ್ದಾರೆ. ಶಿಷ್ಯರ ಮೊಗದಲ್ಲೂ ಹಸಿರು ಪ್ರೀತಿ ಮೂಡಿಸುತ್ತಿದ್ದಾರೆ.
ಸಸ್ಯಲೋಕದಲ್ಲಿ ಪ್ರತಿ ವರ್ಷವೂ 25 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನರ್ಸರಿ ಮಾಡಿ ಬೆಳೆಸಲಾಗುತ್ತಿದೆ. ಅರಣ್ಯ ಇಲಾಖೆ, ಅರಣ್ಯ ಕಾಲೇಜುನವರು ಬೀಜವನ್ನು ನೀಡಿ ಸಹಕರಿಸುತ್ತಾರೆ ಎನ್ನುತ್ತಾರೆ ಸಸ್ಯ ಲೋಕದ ಸಹ ಸಂಚಾಲಕ ಮಹಾಬಲೇಶ್ವರ ಗುಮ್ಮಾನಿ.
ಗುರುಗಳ ಸಸ್ಯ ಪ್ರೀತಿ ಪ್ರತೀ ಚಾತುರ್ಮಾಸ್ಯವೂ ಪರಿಸರ ಸಂದೇಶವಾಗಿ ಭಕ್ತರ ಭಾವವನ್ನು ಇನ್ನಷ್ಟು ಆಪ್ತಗೊಳಿಸುತ್ತಿರುವುದು ಸತ್ಯ.
ಸ್ವರ್ಣವಲ್ಲೀ ಶ್ರೀಗಳು ಮಂತ್ರಾಕ್ಷತೆಯಾಗಿ ನೀಡಿದ ಸಸ್ಯಗಳು ನಾಡಿನ ಹಲವಡೆ ಮಾತ್ರವಲ್ಲ, ಹೊರನಾಡಾದ ಮುಂಬಯಿ, ಕಲ್ಕತ್ತ, ಪೂನಾ, ದೆಹಲಿ ಸೇರಿದಂತೆ ಹಲವು ಕಡೆ ಇಂದು ಮರವಾಗಿ ಬೆಳೆದು ಪರಿಸರ ಸಮೃದ್ಧಿ ಕೊಡುಗೆ ನೆಟ್ಟಿದೆ.

ಅನಂತ ಹೆಗಡೆ ಅಶೀಸರ, ಸಸ್ಯ ಲೋಕ ಸಂಚಾಲಕ
ಪೀಠ ನೀಡಿದ ವೃಕ್ಷ ಮಂತ್ರಾಕ್ಷತೆಯ ಗಿಡವನ್ನು ಪ್ರೀತಿಯಿಂದ ತಂದು ನೆಡುತ್ತಿದ್ದೇವೆ. ಗಿಡ ನೋಡಿದಾಗ ಗುರುಗಳು ನೆನಪಾಗುತ್ತಾರೆ.ನರೇಂದ್ರ ಎಸ್.ಹೆಗಡೆ, ಶಿಷ್ಯ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *