ಹಿಂಗ್ಯಾಕಾಡ್ತಾರೆ ಎ.ರವೀಂದ್ರ…… ರಾಜ್ಯ ಸರ್ಕಾರ, ಒಕ್ಕೂಟ ಸರ್ಕಾರಗಳು ಹೇಳುವುದೇನು?

ಉತ್ತರ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆ ಅರಣ್ಯ ಭೂಮಿ ಹಕ್ಕು ಹೋರಾಟವನ್ನು ಕಳೆದ ನಾಲ್ವತ್ತು ವರ್ಷಗಳಿಂದ ಜೀವಂತವಿಟ್ಟಿರುವ ಎ.ರವೀಂದ್ರ ಅಲಿಯಾಸ್‌ ರವೀಂದ್ರನಾಥ ನಾಯ್ಕ ಇತ್ತೀಚಿಗೆ ಹಿಂಗ್ಯಾಕಾಡ್ತಾರೆ ಎನ್ನುವ ಅನುಮಾನ ಬರತೊಡಗಿದೆ.

ನಿರಂತರ ಜನಪ್ರತಿನಿಧಿಯಾಗುತ್ತಿರುವ ಮಾಜಿ ಸ್ಫೀಕರ್‌ ಹಾಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚೆಗೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವರಿಗೆ ಮನವಿ ನೀಡಿ ಅರಣ್ಯ ಅತಿಕ್ರಮಣ ಸಕ್ರಮಕ್ಕೆ ಅವಶ್ಯವಿರುವ ಅರಣ್ಯ ಹಕ್ಕು ಕಾನೂನು ತಿದ್ದುಪಡಿ ಮಾಡಿ ಅರಣ್ಯ ಸಾಗುವಳಿದಾರರಿಗೆ ನ್ಯಾಯ ಒದಗಿಸಿ ಎಂದು ಕೇಳಿದರು.

ಇದಾದ ಒಂದು ದಿನದೊಳಗೆ ಮಾಧ್ಯಮ ಹೇಳಿಕೆ ನೀಡಿದ ಎ. ರವೀಂದ್ರ ಅರಣ್ಯ ವಾಸಿಗಳಿಗೆ ನ್ಯಾಯ ನೀಡಲು ಕಾಯಿದೆ ಬದಲಾವಣೆ ಅಗತ್ಯವಿಲ್ಲ ಎಂದು ಬಿಟ್ಟರು.

ಅರಣ್ಯ ಹಕ್ಕು ಕಾಯಿದೆಗೆ ತಿದ್ದುಪಡಿ ಅಗತ್ಯವಿಲ್ಲದಿರುವುದನ್ನು ಗ್ರಹಿಸದಷ್ಟು ಹಿರಿಯ ರಾಜಕಾರಣಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಪ್ರಬುದ್ಧರೆ? ಅಥವಾ ಸಂಸದರ ಕಾಳಜಿ ಅರಿಯದಷ್ಟು ಎ. ರವೀಂದ್ರ ಅಪ್ರಬುದ್ಧರೆ?

ಒಬ್ಬರು ನ್ಯಾಯವಾದಿ, ಇನ್ನೊಬ್ಬರು ವೃತ್ತಿಪರ ರಾಜಕಾರಣಿ ಇವರಿಬ್ಬರಲ್ಲಿ ಯಾರು ಸರಿ?

ರಾಜ್ಯದ ಅರಣ್ಯ ಸಚಿವರು ಅರಣ್ಯದಲ್ಲಿರುವ ಅನಧೀಕೃತ ವಾಣಿಜ್ಯ ವ್ಯವಹಾರ ಸಂರಚನೆಗಳನ್ನು ತಕ್ಷಣ ಖುಲ್ಲಾ ಪಡಿಸಿ ಎಂದು ಆದೇಶ ಮಾಡುತ್ತಲೇ ಅರಣ್ಯ ಹಕ್ಕು ಹೋರಾಟಗಾರರು ಈಗಾಗಲೇ ಅರ್ಜಿ ಸಲ್ಲಿಸಿ ಅರಣ್ಯ ಹಕ್ಕು ಮಾನ್ಯತೆ ಕೇಳಿರುವ ಅತಿಕ್ರಮಣದಾರರಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿದರು. ಇವುಗಳಲ್ಲಿ ಯಾವುದು ಸರಿ, ಯಾವದು ತಪ್ಪು. ಈ ಬಗ್ಗೆ ಸ್ಫಷ್ಟತೆ ಇರುವ ಎ. ರವೀಂದ್ರ ಇತ್ತೀಚೆಗೆ ರಾಜ್ಯ ಅರಣ್ಯ ಸಚಿವರಿಗೆ ಮನವಿ ನೀಡಿ ಮನವರಿಕೆ ಮಾಡಿದ್ದೇನು? ಸಚಿವರ ಆದೇಶ ಅರಣ್ಯಾತಿಕ್ರಮಣ ಭೂಮಿ ಸಾಗುವಳಿದಾರರಿಗೆ ಅನ್ವಯಿಸದಿದ್ದರೆ ಮತ್ತೆ ಸಚಿವರಿಗೆ ಮನವಿ ನೀಡುವ ಅಗತ್ಯವಿತ್ತಾ?

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *