ಹಿಂಗ್ಯಾಕಾಡ್ತಾರೆ ಎ.ರವೀಂದ್ರ…… ರಾಜ್ಯ ಸರ್ಕಾರ, ಒಕ್ಕೂಟ ಸರ್ಕಾರಗಳು ಹೇಳುವುದೇನು?

ಉತ್ತರ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆ ಅರಣ್ಯ ಭೂಮಿ ಹಕ್ಕು ಹೋರಾಟವನ್ನು ಕಳೆದ ನಾಲ್ವತ್ತು ವರ್ಷಗಳಿಂದ ಜೀವಂತವಿಟ್ಟಿರುವ ಎ.ರವೀಂದ್ರ ಅಲಿಯಾಸ್‌ ರವೀಂದ್ರನಾಥ ನಾಯ್ಕ ಇತ್ತೀಚಿಗೆ ಹಿಂಗ್ಯಾಕಾಡ್ತಾರೆ ಎನ್ನುವ ಅನುಮಾನ ಬರತೊಡಗಿದೆ.

ನಿರಂತರ ಜನಪ್ರತಿನಿಧಿಯಾಗುತ್ತಿರುವ ಮಾಜಿ ಸ್ಫೀಕರ್‌ ಹಾಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚೆಗೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವರಿಗೆ ಮನವಿ ನೀಡಿ ಅರಣ್ಯ ಅತಿಕ್ರಮಣ ಸಕ್ರಮಕ್ಕೆ ಅವಶ್ಯವಿರುವ ಅರಣ್ಯ ಹಕ್ಕು ಕಾನೂನು ತಿದ್ದುಪಡಿ ಮಾಡಿ ಅರಣ್ಯ ಸಾಗುವಳಿದಾರರಿಗೆ ನ್ಯಾಯ ಒದಗಿಸಿ ಎಂದು ಕೇಳಿದರು.

ಇದಾದ ಒಂದು ದಿನದೊಳಗೆ ಮಾಧ್ಯಮ ಹೇಳಿಕೆ ನೀಡಿದ ಎ. ರವೀಂದ್ರ ಅರಣ್ಯ ವಾಸಿಗಳಿಗೆ ನ್ಯಾಯ ನೀಡಲು ಕಾಯಿದೆ ಬದಲಾವಣೆ ಅಗತ್ಯವಿಲ್ಲ ಎಂದು ಬಿಟ್ಟರು.

ಅರಣ್ಯ ಹಕ್ಕು ಕಾಯಿದೆಗೆ ತಿದ್ದುಪಡಿ ಅಗತ್ಯವಿಲ್ಲದಿರುವುದನ್ನು ಗ್ರಹಿಸದಷ್ಟು ಹಿರಿಯ ರಾಜಕಾರಣಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಪ್ರಬುದ್ಧರೆ? ಅಥವಾ ಸಂಸದರ ಕಾಳಜಿ ಅರಿಯದಷ್ಟು ಎ. ರವೀಂದ್ರ ಅಪ್ರಬುದ್ಧರೆ?

ಒಬ್ಬರು ನ್ಯಾಯವಾದಿ, ಇನ್ನೊಬ್ಬರು ವೃತ್ತಿಪರ ರಾಜಕಾರಣಿ ಇವರಿಬ್ಬರಲ್ಲಿ ಯಾರು ಸರಿ?

ರಾಜ್ಯದ ಅರಣ್ಯ ಸಚಿವರು ಅರಣ್ಯದಲ್ಲಿರುವ ಅನಧೀಕೃತ ವಾಣಿಜ್ಯ ವ್ಯವಹಾರ ಸಂರಚನೆಗಳನ್ನು ತಕ್ಷಣ ಖುಲ್ಲಾ ಪಡಿಸಿ ಎಂದು ಆದೇಶ ಮಾಡುತ್ತಲೇ ಅರಣ್ಯ ಹಕ್ಕು ಹೋರಾಟಗಾರರು ಈಗಾಗಲೇ ಅರ್ಜಿ ಸಲ್ಲಿಸಿ ಅರಣ್ಯ ಹಕ್ಕು ಮಾನ್ಯತೆ ಕೇಳಿರುವ ಅತಿಕ್ರಮಣದಾರರಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿದರು. ಇವುಗಳಲ್ಲಿ ಯಾವುದು ಸರಿ, ಯಾವದು ತಪ್ಪು. ಈ ಬಗ್ಗೆ ಸ್ಫಷ್ಟತೆ ಇರುವ ಎ. ರವೀಂದ್ರ ಇತ್ತೀಚೆಗೆ ರಾಜ್ಯ ಅರಣ್ಯ ಸಚಿವರಿಗೆ ಮನವಿ ನೀಡಿ ಮನವರಿಕೆ ಮಾಡಿದ್ದೇನು? ಸಚಿವರ ಆದೇಶ ಅರಣ್ಯಾತಿಕ್ರಮಣ ಭೂಮಿ ಸಾಗುವಳಿದಾರರಿಗೆ ಅನ್ವಯಿಸದಿದ್ದರೆ ಮತ್ತೆ ಸಚಿವರಿಗೆ ಮನವಿ ನೀಡುವ ಅಗತ್ಯವಿತ್ತಾ?

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *