ಗ್ಯಾರಂಟಿ ಮುಂದುವರಿಕೆ ಗ್ಯಾರಂಟಿ…..

ಗ್ಯಾರಂಟಿಗಳಿಂದ ‘ರಾಜ್ಯ ದಿವಾಳಿ’ ಎಂದವರಿಗೆ ಉತ್ತರ ಸಿಕ್ಕಿದೆ, ಭರವಸೆ ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ

78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು.

ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ

Manjula VN

ಬೆಂಗಳೂರು: ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಮುಂದುವರೆಯುತ್ತವೆ. ಗ್ಯಾರಂಟಿ ಯೋಜನೆಗಳಿಂದ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣೆಗಯನ್ನ ಸಾಧಿಸಿ ಉತ್ತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು.

ಸಿಎಂ ಸಿದ್ದರಾಮಯ್ಯ

ಭಾಷಣದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ಮೆರೆಯಲಾಗದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.

ಸರ್ಕಾರದ ಗ್ಯಾರಂಟಿ ಗಳಿಂದ ಪ್ರತಿಯೊಬ್ಬ ಫಲಾನುಭವಿಗೆ ಅನುಕೂಲ ಆಗಿದೆ. ಸುಮಾರು 4 ರಿಂದ 5 ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಅನೇಕ ಬಡಕುಟುಂಬಗಳಿಗೆ ಅನುಕೂಲವಾಗಿದೆ. ಈ ಯೋಜನೆಗಳು ರಾಜ್ಯದಲ್ಲಿ ಮುಂದುವರೆಯುತ್ತಿದೆ. ಇದರಿಂದ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣೆಗಯನ್ನ ಸಾಧಿಸಿ ಉತ್ತರ ನೀಡುತ್ತೇವೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ

ಇದೇ ವೇಳೆ ಕೇಂದ್ರ ಸರ್ಕಾರದ ತಾರತಮ್ಯ ವಿರುದ್ಧ ಮುಖ್ಯಮಂತ್ರಿಗಳು ಆಕ್ರೋಶದ ಭಾಷಣ ಮಾಡಿದರು.

ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ರಾಜ್ಯದ ಜವಬ್ದಾರಿಯಾದರೆ. ಇವುಗಳಿಗೆ ಪೂರಕ ಸಂಪನ್ಮೂಲ ಒದಿಗಿಸುವುದು ಕೇಂದ್ರದ ಹೊಣೆಗಾರಿಕೆ. ಇತ್ತೀಚಿನ ಕೆಲ ವರ್ಷಗಳಲ್ಲಿ ಕೇಂದ್ರ ಸರ್ಕಾರ ಈ ಆಶಯದಿಂದ ದೂರ ಸರಿಯುತ್ತಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ. ಸಂವಿಧಾನದ ಆಶಯಗಳನ್ನು ನಿರ್ಲಕ್ಷಿಸಿ ರಾಜ್ಯಗಳಿಗೆ ದೊರೆಯಬೇಕಾದ ಹಣಕಾಸಿನ ಪಾಲನ್ನು ನೀಡಲು ಮೀನಾಮೇಷ ಎಣಿಸುತ್ತಿದೆ. ಕೇಂದ್ರದಿಂದ ಪರಿಹಾರ ಮೊತ್ತ ಪಡೆಯಲು ನ್ಯಾಯಾಲಯದ ಮೊರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಇದು ಜನಹಿತಕ್ಕೆ ಒಳ್ಳೆಯದಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಹೀಗಾಗಿ ರಾಜ್ಯಗಳಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಈ ಸಂದರ್ಭದಲ್ಲಿ ಸಮಸ್ತ ನಾಡ ಬಂಧುಗಳ ಪರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ತಮ್ಮ ರಾಜಕೀಯ ಪ್ರಬುದ್ಧತೆ ಮೆರೆದಿದ್ದಾರೆ ಮತದಾರರು. ಪ್ರಜಾಪ್ರಭುತ್ವ ಯಾರ ಕೈಗೊಂಬೆಯಾಗಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ. ಜನತೆಯ ತೀರ್ಪನ್ನು ಧಿಕ್ಕರಿಸಿ ನಡೆಸುವ ಹಿಂಬಾಗಿಲ ರಾಜಕಾರಣವನ್ನು ಇತಿಹಾಸದಲ್ಲಿ ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ

ಇದೇ ವೇಳೆ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯಡಿ 1.20 ಕೋಟಿ ಮಹಿಳೆಯರಿಗೆ ಅನುಕೂಲ ಆಗಿದೆ. ಈವರೆಗೆ 25,258 ಕೋಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡೋದಾಗಿ ಘೋಷಿಸಲಾಗಿತ್ತು. ಆದರೆ, ಕೇಂದ್ರದ ಅಸಹಕಾರದಿಂದ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡಲಾಗಿದೆ. ಈವರೆಗೆ 4.08 ಕೋಟಿ ಫಲಾನುಭವಿಗಳಿಗೆ 7,763 ಕೋಟಿ ನೆರವು ನೀಡಲಾಗಿದೆ.

ಉಚಿತವಾಗಿ 200 ಯೂನಿಟ್​ವರೆಗೆ ನೀಡುವ ಗೃಹಜ್ಯೋತಿ ಯೋಜನೆಯಡಿ ರಾಜ್ಯದ 1.60 ಕೋಟಿ ಕುಟುಂಬಗಳು ಈ ಯೋಜನೆ ಪಡೆದುಕೊಳ್ಳುತ್ತಿವೆ. ಶಕ್ತಿ 8,844 ಕೋಟಿ ರೂ. ವೆಚ್ಚ ಮಾಡಲಾಗಿದೆ. ಯುವನಿಧಿ ಯೋಜನೆಯಡಿ 1.31 ಲಕ್ಷ ಪದವಿ/ಡಿಪ್ಲೊಮಾ ನಿರುದ್ಯೋಗಗಳಿಗೆ ನೆರವು ನೀಡಲಾಗುತ್ತಿದೆ. ಇದಕ್ಕಾಗಿ 91 ಕೋಟಿ ರೂ. ಗಳನ್ನ ಭರಿಸಲಾಗಿದೆ ಎಂದು ತಿಳಿಸಿದರು. ಭಾಷಣದ ವೇಳೆ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳು ಮುಂದುವರಿಯಲಿದೆ ಎಂದು ಎರಡೆರೆಡು ಬಾರಿ ಒತ್ತಿ ಹೇಳಿದರು.

ಭಾಷಣಜ ವೇಳೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಟ್ರಾಫಿಕ್​ ಸಮಸ್ಯೆ ತಪ್ಪಿಸಲು ಫೆರಿಫೆರಲ್ ರಿಂಗ್ ರೋಡ್ ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದು 100 ವರ್ಷಗಳಾಗಿವೆ. ಅಂಬೇಡ್ಕರ್ ಬಹಿಷ್ಕೃತ ಹಿತಕಾರಣಿ ಸಭಾ ಸ್ಥಾಪನೆಗೂ 100 ವರ್ಷಗಳಾಗಿವೆ. ಹೀಗಾಗಿ ಶತಮಾನೋತ್ಸವವನ್ನು ಆಚರಿಸುವುದಾಗಿ ಸಿಎಂ ಘೋಷಣೆ ಮಾಡಿದರು. (kp.c)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *