ರಕ್ತರಾತ್ರಿ ನಾಟಕ ಪ್ರದರ್ಶನ ಉದ್ಘಾಟನೆ


ಸಿದ್ದಾಪುರ
ಮನುಷ್ಯ ಜೀವನಕ್ಕೆ ಸದಭಿರುಚಿಯ ಕಲೆ ನೆಮ್ಮದಿಯನ್ನು, ಒಳಿತನ್ನು ಒದಗಿಸುತ್ತದೆ. ಅಂಥ ಕಲೆಗಳಿಗೆ ಜನತೆಯ ಪ್ರೋತ್ಸಾಹ ಅಗತ್ಯ ಎಂದು ಶಿರಸಿಯ ತೋಟಗಾರ್ಸ ಸೊಸೈಟಿ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಹೇಳಿದರು.
ಅವರು ರಂಗ ಸೌಗಂಧ ರಂಗತಡ ತಾಲೂಕಿನ ವಾಜಗದ್ದೆಯ ಶ್ರೀ ದುರ್ಗಾವಿನಾಯಕ ದೇವಾಲಯ ಹಾಗೂ ಶ್ರೀ ದುರ್ಗಾವಿನಾಯಕ ಕೃಷಿಕ ಯುವಕಸಂಘದ ಸಹಯೋಗದಲ್ಲಿ ಕಂದಗಲ್ ಹನುಮಂತರಾಯ ರಚನೆಯ,ಗಣಪತಿಹೆಗಡೆ ಹುಲಿಮನೆ ನಿರ್ದೇಶನದ ರಕ್ತರಾತ್ರಿ ಪೌರಾಣಿಕ ನಾಟಕಪ್ರದರ್ಶನ ಉದ್ಘಾಟಿಸಿ ಮಾತನಾಡಿ ಹಿರಿಯರು ಉತ್ತಮ ಅಭಿರುಚಿಯ ಕಲೆಗಳ ಕುರಿತು ಅರಿವು ಮೂಡಿಸಿದಾಗ ಕಿರಿಯರ ಬದುಕು ಉತ್ತಮವಾಗಲು ಸಾಧ್ಯ. ರಂಗಸೌಗಂಧ ತಂಡ ಅತ್ಯಂತ ಶ್ರಮಪಟ್ಟು ಪ್ರತಿವರ್ಷವೂ ಅತ್ಯುತ್ತಮ ನಾಟಕಗಳನ್ನು ಪ್ರದರ್ಶಿಸುತ್ತ ಕಲೆಯ ಮೂಲಕ ಸಮಾಜಕ್ಕೆ ಕೊಡುಗೆ ನೀಡುತ್ತಿದೆ. ರಾಜ್ಯದಾದ್ಯಂತ ಪ್ರದರ್ಶನಗಳನ್ನು ನೀಡುತ್ತಿದೆ. ಪ್ರಸಿದ್ಧ ರಂಗಕರ್ಮಿ ಸೀತಾರಾಮ ಶಾಸ್ತಿçಯವರ ನಾಟಕಗಳನ್ನು ಪುಸ್ತಕರೂಪದಲ್ಲಿ ಪ್ರಕಟಿಸಿದೆ. ರಂಗಸೌಗಂಧ ತಂಡಕ್ಕೆ ಸಹಕಾರ ನೀಡುವದು ನಮ್ಮೆಲ್ಲರ ಕರ್ತವ್ಯ ಎಂದರು.


ಮುಖ್ಯ ಅತಿಥಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ ಮಾತನಾಡಿ ಕಲೆ ಕೇವಲ ರಂಜನೆಗೆ ಸೀಮಿತವಾಗಿಲ್ಲ. ಅದರ ಜವಾಬ್ದಾರಿ ಸಮಾಜಕ್ಕೆ ಮಾರ್ಗದರ್ಶಿಯಾಗುವದು ಕೂಡ. ನಮ್ಮ ಪರಂಪರೆಯ ಮೌಲ್ಯಗಳನ್ನು ಇಂದಿನ ಮತ್ತು ಮುಂದಿನ ತಲೆಮಾರಿಗೆ ದಾಟಿಸುವ ಶಕ್ತಿ ಅದಕ್ಕಿದೆ. ತಾಳಮದ್ದಳೆ,ಯಕ್ಷಗಾನದಂಥ ಕಲೆಗಳು ಪುರಾಣ ಪಾತ್ರಗಳ ಮೂಲಕ ಒಳಿತು ಮತ್ತು ಕೆಡುಕು ಯಾವುದು ಎನ್ನುವದನ್ನು ನಿರೂಪಿಸುತ್ತಿವೆ. ರಂಗಸೌಗಂಧ ತಂಡ ಈ ಹಿಂದೆಯೂ ಅನೇಕ ಪೌರಾಣಿಕ ನಾಟಕಗಳನ್ನು ಪ್ರದರ್ಶಿಸಿದ್ದು ರಕ್ತರಾತ್ರಿ ನಾಟಕ ಕೂಡ ಅಂಥ ವಿವೇಚನೆನೀಡುವ ನಾಟಕ. ಇಂಥ ಪುರಾತನ ಮೌಲ್ಯಗಳನ್ನು ಪ್ರಸಕ್ತ ಸಂದರ್ಭದಲ್ಲಿ ಪ್ರಸ್ತುತಪಡಿಸುವ ನಾಟಕಗಳು ರಂಗಸೌಗಂಧದಿಂದ ಪ್ರದರ್ಶನಗೊಳ್ಳಲಿ ಎಂದರು.

(ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಬಿಡುಗಡೆ ಮಾಡಿದರು.)

ಇನ್ನೊರ್ವ ಮುಖ್ಯ ಅತಿಥಿ ಶ್ರೀ ದುರ್ಗಾವಿನಾಯಕ ದೇವಾಲಯದ ಅಧ್ಯಕ್ಷ ಎಸ್.ಎಂ.ಹೆಗಡೆ ರಂಗಸೌಗAಧ ತಂಡದಿAದ ಹೆಚ್ಚಿನ ಕಲಾಸೇವೆ ನಡೆಯಲಿ ಎಂದರು. ಈ ಸಂದರ್ಭದಲ್ಲಿ ಸರಸ್ವತಿ ಕಲಾಟ್ರಸ್ಟ ವತಿಯಿಂದ ಪಿ.ವಿ.ಹೆಗಡೆ ಹೊಸಗದ್ದೆ ಗಣಪತಿ ಹೆಗಡೆ ಹುಲಿಮನೆಯವರನ್ನು ಸನ್ಮಾನಿಸಿದರು. ರಂಗಸೌಗAಧ ತಂಡದ ಮುಖ್ಯಸ್ಥ ಗಣಪತಿ ಹೆಗಡೆ ಹುಲಿಮನೆ ಸ್ವಾಗತಿಸಿದರು. ರಾಜಾರಾಮ ಭಟ್ಟ ಹೆಗ್ಗಾರಳ್ಳಿ ನಿರೂಪಿಸಿ ವಂದಿಸಿದರು.

https://samajamukhhttps://samajamukhi.net/2024/09/06/teachers-day-special-sdp-nk/i.net/2024/09/06/teachers-day-special-sdp-nk/
ರಕ್ತರಾತ್ರಿ ನಾಟಕಕ್ಕೆ ಸಂಗೀತ ನಿರ್ದೇಶನ ರಾಜೇಂದ್ರ ಹೆಗಡೆ ಕೊಳಗಿ,ವಿನ್ಯಾಸ ಶ್ರೀಪಾದ ಹೆಗಡೆ ಕೋಡನಮನೆ, ವಾದ್ಯಗಳ ಸಹಕಾರ ಜಯರಾಮಭಟ್ಟ ಹೆಗ್ಗಾರಳ್ಳಿ,ಶಶಿಭೂಷಣ ಹೆಗಡೆ ತಂಗರ‍್ಮನೆ,ಈಶ್ವರ ಶಾಸ್ತಿç,ಸಂಜಯ ಭಟ್ಟ ಬಿಳಗಿ, ಧ್ವನಿ ಮತ್ತು ಬೆಳಕು ಉದಯ ಸೌಂಡ್ಸ ಶಿರಸಿ ಒದಗಿಸಿದ್ದು ಪಾತ್ರಧಾರಿಗಳಾಗಿ ಗಣಪತಿ ಹೆಗಡೆ ಗುಂಜಗೋಡ,ಶ್ರೀಪಾದ ಹೆಗಡೆ ಕೋಡನಮನೆ, ನಾಗಪತಿ ಭಟ್ಟ ವಡ್ಡಿನಗದ್ದೆ,ಪೂರ್ಣಚಂದ್ರ ಹೆಗಡೆ ಹುಲಿಮನೆ,ಶಮಂತ ಹೆಗಡೆ ಶಿರಳಗಿ,ರಾಮ ಅಂಕೋಲೆಕರ,ರಮೇಶಭಟ್ಟ ಲಕ್ಕಿಜಡ್ಡಿ,ಅಜಿತ್ ಭಟ್ ಹೆಗ್ಗಾರಳ್ಳಿ,ಶುಭಾರಮೇಶ ಲಕ್ಕಿಜಡ್ಡಿ,ಪ್ರವೀಣಾ ಹೆಗಡೆ ಗುಂಜಗೋಡ,ಜಯಶ್ರೀ ಹೆಗಡೆ ಹುಲಿಮನೆ ಅಭಿನಯಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *