ಸಿದ್ಧರಾಮಯ್ಯ ಸ್ಥಾನ ಅಭಾದಿತ….. ರಾಜಕೀಯ ಬೆಳೆ ಹುಲುಸು!

‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’: ರೈತರು, ಸಿದ್ದರಾಮಯ್ಯ ರಾಜಕೀಯ ಭವಿಷ್ಯದ ಬಗ್ಗೆ ಗೊರವಯ್ಯ ಕಾರ್ಣಿಕ?

ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾರೆ.

karnika Dasara predictions

ಗೊರವಯ್ಯನ ಕಾರ್ಣಿಕ

ಹಾವೇರಿ: ದೇಶಾದ್ಯಂತ ವೈಭವದ ವಿಜಯದಶಮಿ ಆಚರಣೆ ಸಾಗಿರುವಂತೆಯೇ ಅತ್ತ ಹಾವೇರಿ ಜಿಲ್ಲೆಯ ಐತಿಹಾಸಿಕ ದೇವರಗುಡ್ಡದ ಮಾಲತೇಶಸ್ವಾಮಿ ದೇವಾಲಯದಲ್ಲಿ ಗೊರವಯ್ಯನ ಕಾರ್ಣಿಕೋತ್ಸವ ನಡೆದಿದ್ದು, ರೈತರು, ಮಳೆ ಬೆಳೆ, ರಾಜಕೀಯದ ಕುರಿತು ಭವಿಷ್ಯ ನುಡಿದಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾರೆ.

ಪ್ರತಿ ವರ್ಷ ನವರಾತ್ರಿ ವೇಳೆ ಭವಿಷ್ಯವಾಣಿ ನುಡಿಯುವ ಗೊರವಯ್ಯ 9 ದಿನ ಉಪವಾಸ ವಿದ್ದು ಸಾವಿರಾರು ಭಕ್ತರ ಸಮ್ಮುಖದಲ್ಲಿ 18 ಅಡಿ ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದಾರೆ.

karnika Dasara predictions

ಅರ್ಥ ಏನು?

ಇನ್ನು ಕಾರ್ಣಿಕ ನುಡಿ ಕುರಿತು ದೇವರಗುಡ್ಡದಲ್ಲಿ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್ ಭಟ್ ಗುರೂಜಿ ಅವರು ಹೇಳಿಕೆ ನೀಡಿದ್ದು.. ‘ಆಕಾಶದತ್ತ ಚಿಗುರಿತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್… ಆಕಾಶದತ್ತ ಚಿಗುರಿತಲೇ ಅಂದರೆ ಒಳ್ಳೆ ಮಳೆ ಆಗುತ್ತೆ, ಬೇರೆಲ್ಲಾ ಮುತ್ತಾಯಿತಲೇ ಅಂದರೆ ರೈತರಿಗೆ ಒಳ್ಳೆ ಬೆಳೆ ಬರುತ್ತೆ, ಅದನ್ನ ತೆಗೆದುಕೊಳ್ಳೋ ಫಲಾನುಭವಿಗಳಿಗೂ ಒಳ್ಳೆದಾಗುತ್ತೆ ಎಂಬ ಅರ್ಥ ಎಂದು ತಿಳಿಸಿದ್ದಾರೆ.

ಇನ್ನೂ ರಾಜಕೀಯವಾಗಿ ಹೇಳುವುದಾದರೇ ಆಕಾಶದತ್ತ ಚಿಗುರೀತಲೇ, ಅಂದರೆ ಈಗಿರುವ ನಾಯಕತ್ವ ಆಕಾಶದತ್ತ ಚಿಗುರಿಬಿಟ್ಟಿದೆ. ಬೇರೆಲ್ಲಾ ಮುತ್ತಾಯಿತಲೇ ಅಂದರೆ ಅವರಿಗೆಲ್ಲಾ ಬೆನ್ನೆಲುಬಾಗಿ ನಿಂತಿರೋದು ನೀವೆಲ್ಲಾ ನೋಡಿರಬಹುದು. ಕಾನೂನು ವ್ಯವಸ್ಥೆಯಲ್ಲಿ ಏನು ಬದಲಾವಣೆ ಆದರೂ ಕೂಡಾ ಈಗಿರುವ ನಾಯಕತ್ವ ಹೇಳಿದಂಗೆ ಅವರು ಒಪ್ಪಿಕೊಳ್ತಾರೆ. ಅಂತ ಬೇರುಗಳೆಲ್ಲಾ ಮುತ್ತಾಯಿತಲೇ ಅಂದರೆ ಆಕಾಶತ್ತ ಚಿಗುರಿರೋ ಗಿಡ ಹೇಳಿದಂಗೆ ಬೇರುಗಳು ಒಪ್ಪಿಕೊಳ್ತಾವೆ ಅಂತ ಅರ್ಥದಲ್ಲಿ ಶ್ರೀ ಕ್ಷೇತ್ರ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನ ಗೊರವಯ್ಯ ಕಾರ್ಣಿಕವನ್ನು ಶ್ರೀಗಳು ವ್ಯಾಖ್ಯಾನಿಸಿದರು.

ದೇಗುಲದ ಇತಿಹಾಸ

ಕರ್ನಾಟಕದ ಪ್ರಮುಖ ದೇವಸ್ಥಾನಗಳಲ್ಲಿ ಐತಿಹಾಸಿಕ ದೇವರಗುಡ್ಡದ ಮಾಲತೇಶಸ್ವಾಮಿ ದೇವಾಲಯವೂ ಒಂದು. ಇದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿದೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *