ಕೇಂದ್ರ ಸಚಿವ ಸ್ಥಾನದಿಂದ ಪ್ರಲ್ಹಾದ್ ಜೋಶಿ ವಜಾಕ್ಕೆ ಒತ್ತಾಯ: ಕಾಂಗ್ರೆಸ್ ಪ್ರತಿಭಟನೆ

ಲೋಕಸಭಾ ಚುನಾವಣೆಯಲ್ಲಿ ಸುನೀತಾ ಚೌಹಾಣ್ ಅವರ ಪತಿ ದೇವಾನಂದ ಪುಲ್ ಸಿಂಗ್ ಚೌಹಾಣ್ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ ಆರೋಪದ ಮೇಲೆ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಮತ್ತು ಸಹೋದರಿ ವಿಜಯ ಲಕ್ಷ್ಮಿ ಜೋಶಿ ಮತ್ತು ಗೋಪಾಲ್ ಜೋಶಿ ಅವರ ಪುತ್ರ ಅಜಯ್ ಜೋಶಿ ವಿರುದ್ಧ ಪ್ರಕರಣ ದಾಖಲು

Congress Member Protest

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂಬಂಧಿಕರ ವಿರುದ್ಧ ಎಫ್ ಐಆರ್ ದಾಖಲಾದ ನಂತರ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದ ಗಾಂಧಿ ಭವನದ ಬಳಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸಚಿವ ಸ್ಥಾನದಿಂದ ಜೋಶಿ ಅವರನ್ನು ವಜಾಗೊಳಿಸಬೇಕು ಹಾಗೂ ಪ್ರಕರಣ ದಾಖಲಾಗಿರುವ ಅವರ ಕುಟುಂಬ ಸದಸ್ಯರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರಲ್ಹಾದ್ ಜೋಶಿ ಸಂಬಂಧಿಕರು ಟಿಕೆಟ್ ಗಾಗಿ 2 ಕೋಟಿ ಕೇಳಿದ್ದಾರೆ ಎಂದು ಎಫ್‌ಐಆರ್ ದಾಖಲಿಸಲಾಗಿದೆ. ಬಿಜೆಪಿ ಯಾವಾಗಲೂ ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುತ್ತದೆ. ಎಫ್‌ಐಆರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಅವರು ದೇಶಕ್ಕೆ ನೀಡುತ್ತಿರುವ ಸಂದೇಶವೇನು?ಯಾವಾಗಲೂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಬಗ್ಗೆ ಮಾತನಾಡುವಅವರು ಈಗ ಯಾಕೆ ಬಾಕಿ ಮುಚ್ಚಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಕೆಲ ಆರೋಪಿಗಳನ್ನು ಬಂಧಿಸಲಾಗಿದ್ದು, ಗೋಪಾಲ್ ಜೋಶಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆತನನ್ನು ಬಂಧಿಸಿದರೆ ಆತನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲಿದೆ.ಸದ್ಯ ಗೋಪಾಲ್ ಜೋಶಿ ತಲೆಮರೆಸಿಕೊಂಡಿದ್ದಾನೆ.ತನಿಖೆ ಪೂರ್ಣಗೊಂಡ ನಂತರ, ಯಾರು ಭಾಗಿಯಾಗಿದ್ದಾರೆಂದು ನಮಗೆ ತಿಳಿಯುತ್ತದೆ ಎಂದರು.

Congress Member Protest

ಲೋಕಸಭಾ ಚುನಾವಣೆಯಲ್ಲಿ ಸುನೀತಾ ಚೌಹಾಣ್ ಅವರ ಪತಿ ದೇವಾನಂದ ಪುಲ್ ಸಿಂಗ್ ಚೌಹಾಣ್ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ ಆರೋಪದ ಮೇಲೆ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಮತ್ತು ಸಹೋದರಿ ವಿಜಯ ಲಕ್ಷ್ಮಿ ಜೋಶಿ ಮತ್ತು ಗೋಪಾಲ್ ಜೋಶಿ ಅವರ ಪುತ್ರ ಅಜಯ್ ಜೋಶಿ ವಿರುದ್ಧ ಪ್ರಕರಣ ದಾಖಲಾಗಿದೆ. ಸುನೀತಾ ಚೌಹಾಣ್ ಅವರು ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಮತ್ತು ಗೋಪಾಲ್ ಜೋಶಿ ಅವರ ಪುತ್ರ ಅಜಯ್ ಜೋಶಿ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುರುವಾರ ಸಂಜೆ ಐದು ಗಂಟೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *