ಕೇಂದ್ರ ಸಚಿವ ಸ್ಥಾನದಿಂದ ಪ್ರಲ್ಹಾದ್ ಜೋಶಿ ವಜಾಕ್ಕೆ ಒತ್ತಾಯ: ಕಾಂಗ್ರೆಸ್ ಪ್ರತಿಭಟನೆ

ಲೋಕಸಭಾ ಚುನಾವಣೆಯಲ್ಲಿ ಸುನೀತಾ ಚೌಹಾಣ್ ಅವರ ಪತಿ ದೇವಾನಂದ ಪುಲ್ ಸಿಂಗ್ ಚೌಹಾಣ್ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ ಆರೋಪದ ಮೇಲೆ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಮತ್ತು ಸಹೋದರಿ ವಿಜಯ ಲಕ್ಷ್ಮಿ ಜೋಶಿ ಮತ್ತು ಗೋಪಾಲ್ ಜೋಶಿ ಅವರ ಪುತ್ರ ಅಜಯ್ ಜೋಶಿ ವಿರುದ್ಧ ಪ್ರಕರಣ ದಾಖಲು

Congress Member Protest

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂಬಂಧಿಕರ ವಿರುದ್ಧ ಎಫ್ ಐಆರ್ ದಾಖಲಾದ ನಂತರ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದ ಗಾಂಧಿ ಭವನದ ಬಳಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸಚಿವ ಸ್ಥಾನದಿಂದ ಜೋಶಿ ಅವರನ್ನು ವಜಾಗೊಳಿಸಬೇಕು ಹಾಗೂ ಪ್ರಕರಣ ದಾಖಲಾಗಿರುವ ಅವರ ಕುಟುಂಬ ಸದಸ್ಯರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರಲ್ಹಾದ್ ಜೋಶಿ ಸಂಬಂಧಿಕರು ಟಿಕೆಟ್ ಗಾಗಿ 2 ಕೋಟಿ ಕೇಳಿದ್ದಾರೆ ಎಂದು ಎಫ್‌ಐಆರ್ ದಾಖಲಿಸಲಾಗಿದೆ. ಬಿಜೆಪಿ ಯಾವಾಗಲೂ ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುತ್ತದೆ. ಎಫ್‌ಐಆರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಅವರು ದೇಶಕ್ಕೆ ನೀಡುತ್ತಿರುವ ಸಂದೇಶವೇನು?ಯಾವಾಗಲೂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಬಗ್ಗೆ ಮಾತನಾಡುವಅವರು ಈಗ ಯಾಕೆ ಬಾಕಿ ಮುಚ್ಚಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಕೆಲ ಆರೋಪಿಗಳನ್ನು ಬಂಧಿಸಲಾಗಿದ್ದು, ಗೋಪಾಲ್ ಜೋಶಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆತನನ್ನು ಬಂಧಿಸಿದರೆ ಆತನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲಿದೆ.ಸದ್ಯ ಗೋಪಾಲ್ ಜೋಶಿ ತಲೆಮರೆಸಿಕೊಂಡಿದ್ದಾನೆ.ತನಿಖೆ ಪೂರ್ಣಗೊಂಡ ನಂತರ, ಯಾರು ಭಾಗಿಯಾಗಿದ್ದಾರೆಂದು ನಮಗೆ ತಿಳಿಯುತ್ತದೆ ಎಂದರು.

Congress Member Protest

ಲೋಕಸಭಾ ಚುನಾವಣೆಯಲ್ಲಿ ಸುನೀತಾ ಚೌಹಾಣ್ ಅವರ ಪತಿ ದೇವಾನಂದ ಪುಲ್ ಸಿಂಗ್ ಚೌಹಾಣ್ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ ಆರೋಪದ ಮೇಲೆ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಮತ್ತು ಸಹೋದರಿ ವಿಜಯ ಲಕ್ಷ್ಮಿ ಜೋಶಿ ಮತ್ತು ಗೋಪಾಲ್ ಜೋಶಿ ಅವರ ಪುತ್ರ ಅಜಯ್ ಜೋಶಿ ವಿರುದ್ಧ ಪ್ರಕರಣ ದಾಖಲಾಗಿದೆ. ಸುನೀತಾ ಚೌಹಾಣ್ ಅವರು ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಮತ್ತು ಗೋಪಾಲ್ ಜೋಶಿ ಅವರ ಪುತ್ರ ಅಜಯ್ ಜೋಶಿ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುರುವಾರ ಸಂಜೆ ಐದು ಗಂಟೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. (kp.c)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *