


ಕೇರಳದ ರಾಜರಾಗಿದ್ದ ನಂಬೂದರಿ ಬ್ರಾಹ್ಮಣರು, ಕೆಳ ವರ್ಗಗಳ ಮಹಿಳೆಯರು ತಮ್ಮ ಮೈ ಮುಚ್ಚಿಕೊಳ್ಳಲು ತೆರಿಗೆಯನ್ನು ಕಟ್ಟಬೇಕೆಂದು ಅತಿಕ್ರೂರವಾದ ಅಮಾನವೀಯ ಕಾನೂನನ್ನು 17, 18,19 ನೇ ಶತಮಾನಗಳಲ್ಲಿ ಜಾರಿಗೊಳಿಸಿದ್ದರು.
ಇದು ಸ್ತನ ತೆರಿಗೆ ಎಂದು ಇತಿಹಾಸದಲ್ಲಿ ಪ್ರಸಿದ್ಧಿಯನ್ನು ಪಡೆದಿತ್ತು.

ಮೈಸೂರುಹುಲಿ ಟಿಪ್ಪುಸುಲ್ತಾನ್ ನು ಕೇರಳದ ಮಲಬಾರ್ ಪ್ರಾಂತ್ಯದ ಮೇಲೆ ಅನೇಕ ಬಾರಿ ದಾಳಿ ಮಾಡಿ, ಈ ನಂಬೂದರಿ ಬ್ರಾಹ್ಮಣರನ್ನು ಬಗ್ಗುಬಡಿದು, ಈ ಅಮಾನವೀಯ ಪದ್ಧತಿಯನ್ನು ತನ್ನ ಕಾಲದಲ್ಲಿ ನಿಷೇಧಿಸಿದನು.
ಟಿಪ್ಪುಸುಲ್ತಾನನ ಮರಣದ ನಂತರ ಮತ್ತೇ ಸ್ತನತೆರಿಗೆ ಪದ್ಧತಿಯು ಜಾರಿಗೆ ಬಂದಿತು.
ಕೆಳವರ್ಗದ ಈಳವ(ಈಡಿಗ) ಜಾತಿಗೆ ಸೇರಿದ್ದ ನಂಗೇಲಿ ಎಂಬ ಮಹಿಳೆಯು ತನ್ನ ದೇಹವನ್ನು ಪೂರ್ತಿ ಮುಚ್ಚಿಕೊಂಡಿರುತ್ತಾಳೆ. ಇದಕ್ಕಾಗಿ , ನಂಬೂದರಿ ರಾಜರುಗಳು ತೆರಿಗೆಯನ್ನು ವಸೂಲಿ ಮಾಡಲು ತಮ್ಮ ಸೈನಿಕರನ್ನು ಅವಳ ಮನೆಯ ಬಳಿ ಕಳುಹಿಸಿದಾಗ; ಆ ಮಹಾತಾಯಿ ತನ್ನ ಸ್ತನವನ್ನೇ ಕುಯ್ದು ಒಂದು ಬಾಳೆ ಎಲೆಯಲ್ಲಿಟ್ಟು ತೋರಿಸುತ್ತಾಳೆ. ಆದರೆ ಆಕೆ ಮಾತ್ರ ಅತಿಯಾದ ರಕ್ತಸ್ರಾವದಿಂದ ಪ್ರಾಣವನ್ನು ಕಳೆದುಕೊಳ್ಳುತ್ತಾಳೆ.


ನಂಗೇಲಿ ಯ ಈಳವ ಸಮಾಜದಿಂದ ಬಂದಂತಹ ನಾರಾಯಣ ಗುರುಗಳು ಈ ಅಮಾನುಷ ಪದ್ಧತಿಯ ವಿರುದ್ಧ ಹೋರಾಡುತ್ತಾರೆ. ಇವರ ಹೋರಾಟವನ್ನು ಪರಿಗಣಿಸಿ ಅಂದಿನ ಬ್ರಿಟಿಷ್ ಸರ್ಕಾರವು ಈ ಸ್ತನತೆರಿಗೆ ಪದ್ಧತಿಯನ್ನು 19 ನೇ ಶತಮಾನದ ಅಂತ್ಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುತ್ತಾರೆ.
ಆ ಮಹಾತಾಯಿ ನಂಗೇಲಿಯು ಪ್ರಾಣ ಬಿಟ್ಟ ಸ್ಥಳದಲ್ಲಿ , ಅವಳ ವಿಗ್ರಹವನ್ನು ನಿಲ್ಲಿಸಿ, ಆರಾಧಿಸುತ್ತಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






