ಅ.೨೬ ನಾಡಿನೆಲ್ಲೆಡೆ ಬಂಗಾರಪ್ಪ ಹುಟ್ಟುಹಬ್ಬ ಆಚರಣೆ

ಹಿಂದುಳಿದ ವರ್ಗಗಳ ಚಾಂಪಿಯನ್‌ ಮಾಜಿ ಮುಖ್ಯಮಂತ್ರಿ ಎಸ್.‌ ಬಂಗಾರಪ್ಪನವರ ಹುಟ್ಟುಹಬ್ಬವನ್ನು ನಾಡಿನೆಲ್ಲೆ ಡೆ ಅಕ್ಟೋಬರ್‌ ೨೬ ರಂದು ಆಚರಿಸಲಾಗುತ್ತಿದೆ. ಎಸ್.‌ ಬಂಗಾರಪ್ಪ ಒಂಟಿಸಲಗ, ಛಲದಂಕಮಲ್ಲ ಎಂದು ಹೆಸರಾಗಿದ್ದವರು. ಕಾಗೋಡು ಹೋರಾಟದ ಜೀವಂತಿಕೆ, ಭೂಸುಧಾರಣೆ ಕಾನೂನು ಜಾರಿ, ಬಡವರ ಪರ ಧ್ವನಿ, ವಿಶೇಶ ಯೋಜನೆ, ಕಾಳಜಿಗಳಿಂದ ವಿರೋಧಿಗಳ ಮೆಚ್ಚುಗೆಯನ್ನೂ ಗಳಿಸಿದ್ದ ಬಂಗಾರಪ್ಪ ರಾಜ್ಯದ ಜನಮಾನಸದಲ್ಲಿ ನೆಲೆ ನಿಂತ ನಾಯಕರಾಗಿದ್ದರು. ಅವರ ಸ್ಮರಣೆ ಹಿನ್ನೆಲೆಯಲ್ಲಿ ಬೆಂಗಳೂರು, ಸೊರಬಾ, ಸಿದ್ದಾಪುರ ಸೇರಿದಂತೆ ರಾಜ್ಯದ ಅನೇಕ ಪ್ರದೇಶಗಳಲ್ಲಿ ಅಕ್ಟೋಬರ್‌ ೨೬ ರಂದು ಬಂಗಾರಪ್ಪ ಜನ್ಮ ದಿನ ಆಚರಣೆ ನಡೆಯುತ್ತಿದೆ.

ಸೊರಬಾದ ಬಂಗಾರಧಾಮದಲ್ಲಿ ಅಕ್ಟೋಬರ್ ೨೬ ರ ಶನಿವಾರ ಇಡೀ ದಿನ ವಿಶೇಶ ಕಾರ್ಯಕ್ರಮ ನಡೆಯುತಿದ್ದು ಗೃಹ ಸಚಿವ ಜಿ.ಪರಮೇಶ್ವರ‌, ಮುಕುಂದರಾಜ್‌ ಸೇರಿದಂತೆ ನಾಡಿನ ಅನೇಕ ಗಣ್ಯರು ಬಂಗಾರಪ್ಪ ಸ್ಮರಣೆಗೆ ಸಾಕ್ಷಿಯಾಗಲಿದ್ದಾರೆ.

ಸಿದ್ಧಾಪುರ ಕಾರ್ಯಕ್ರಮ-

ಬಂಗಾರಪ್ಪ ಕಾರ್ಯಕ್ಷೇತ್ರಗಳಲ್ಲಿ ಸಿದ್ಧಾಪುರಕ್ಕೆ ಅಗ್ರಸ್ಥಾನ ಮೇಲ್ವರ್ಗದ ಯಜಮಾನಿಕೆಯಿಂದ ನರಳಿದ ಹಿಂದುಳಿದ ವರ್ಗಗಳಿಗೆ ಧ್ವನಿ ಕೊಟ್ಟವರು ಬಂಗಾರಪ್ಪ. ಸೊರಬಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿ ಪ್ರಚಾರಕ್ಕೆ ಹೊರಡುತಿದ್ದ ಬಂಗಾರಪ್ಪ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಸೇರಿದ ರಾಜ್ಯದ ಬಹುಭಾಗ ಸುತ್ತಿ ಮರಳುವಾಗ ದಂಡಯಾತ್ರೆ ಮಾಡಿ ವಿಜಯಕ್ಕೆ ಕಾದವರಿಗೆ ಸೋಲಾದದ್ದೇ ಇಲ್ಲ. ಸೋಲಿಲ್ಲದ ಸರದಾರ ಖ್ಯಾತಿಗೆ ಪಾತ್ರರಾಗಿದ್ದ ಬಂಗಾರಪ್ಪ ಸಿದ್ಧಾಪುರದ ಮೂಲಕ ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವಿಜಯಯಾತ್ರೆ ಪ್ರಾರಂಭಿಸುತಿದ್ದುದರಿಂದ ಬಂಗಾರಪ್ಪನವರಿಗೆ ಸಿದ್ದಾಪುರ ಪ್ರೀತಿಯ ಊರು. ಸಿದ್ಧಾಪುರದಲ್ಲಿ ಕೂಡಾ ಬಂಗಾರಪ್ಪ ವಿಚಾರ ವೇದಿಕೆಯಿಂದ ಅ.೨೬ ರಂದು ಬಂಗಾರಪ್ಪ ಹುಟ್ಟುಹಬ್ಬದ ಪ್ರಯುಕ್ತ ಅಸಹಾಯಕರಿಗೆ ನೆರವು, ಬಂಗಾರಪ್ಪ ಒಡನಾಡಿಗಳು ಅವರ ಕುಟುಂಬಸ್ಥರಿಗೆ ಸನ್ಮಾನ, ಹಾಗೂ ನುಡಿನಮನ ನಡೆಯಲಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *