ಕೈಗಾರಿಕಾ ಪ್ರದೇಶ ವಿರೋಧಿಸುವ ಕಾಣದ ಕೈಗಳಿಂದ ತಾಲೂಕಿಗೆ ಅನ್ಯಾಯ

ಎಷ್ಟೋ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತಾಲೂಕಾ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಶಾಸಕ ಭೀಮಣ್ಣ ಆಸಕ್ತಿ ವಹಿಸಿ, ಅನುದಾನ ತಂದಿದ್ದು ತಾಲೂಕಿನ ಅಭಿವೃದ್ಧಿಗೆ ಅಡ್ಡಗಾಲು ಹಾಕುವ ಯಾವ ಪುಡಿ ನಾಯಕರಿಗೂ ನಾವು ಬಗ್ಗುವುದಿಲ್ಲ, ತಾಲೂಕಿನ ಅಭಿವೃದ್ಧಿಗೆ ಬದ್ಧರಾಗಿರುವ ಭೀಮಣ್ಣ ಮತ್ತು ಅಭಿವೃದ್ಧಿಗೆ ಸಹಕರಿಸುವ ಯಾರಿಗೂ ನಮ್ಮ ಬೆಂಬಲವಿದೆ. -ತಿಮ್ಮಣ್ಣ ನಾಯ್ಕ ಕಡಕೇರಿ, ಹಿರಿಯ ಸಾಮಾಜಿಕ ಕಾರ್ಯಕರ್ತ

ಮಳಲವಳ್ಳಿಯಲ್ಲಿ ಪ್ರಾರಂಭವಾಗಲಿರುವ ಸಿದ್ಧಾಪುರ ತಾಲೂಕಾ ಕೈಗಾರಿಕಾ ಕೇಂದ್ರ ಸ್ಥಾಪನೆ ವಿರೋಧದ ಹಿಂದೆ ಕಾಣದ ಕೈಗಳು ಕೆಲಸಮಾಡುತಿದ್ದು ಈ ಸ್ಥಾಪಿತ ಹಿತಾಸಕ್ತಿಗಳ ಕೈ ಮೇಲಾದರೆ ತಾಲೂಕಿಗೆ ಅನ್ಯಾಯವಾಗಲಿದೆ ಎಂದು ರೈತಮುಖಂಡ ವೀರಭದ್ರನಾಯ್ಕ ಆತಂಕ ವ್ಯಕ್ತಪಡಿಸಿದ್ದಾರೆ.

ಮನಮನೆ ಗ್ರಾಮ ಪಂಚಾಯತ್‌ ನ ಮಳಲವಳ್ಳಿಯಲ್ಲಿ ಕೈಗಾರಿಕಾ ಕೇಂದ್ರ ಸ್ಥಾಪನೆ ಯೋಜನೆ ಹತ್ತು ವರ್ಷಕ್ಕಿಂತ ಹಳೆಯದು ಹಲವು ವರ್ಷಗಳ ಬೇಡಿಕೆ ಮನಗಂಡ ಅಂದಿನ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಾಥಮಿಕ ಪ್ರಕ್ರಿಯೆ ಪ್ರಾರಂಭಿಸಿದ್ದರು. ಈ ಉದ್ದೇಶಿತ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಸಣ್ಣ ಕೈಗಾರಿಕೆಗಳ ಚಟುವಟಿಕೆಗೆ ಜಾಗ ಕೇಳಿ ೩೦೦ ಕ್ಕೂ ಹೆಚ್ಚು ಜನ ಅರ್ಜಿ ಹಾಕಿದ್ದಾರೆ.

ಆಗ ಬೆಂಬಲಿಸಿದ್ದ ಸ್ಥಳೀಯರು ತಾವು ಕೈಗಾರಿಕ ಕೇಂದ್ರದ ಪ್ಲಾಟುಗಳಿಗೆ ಅರ್ಜಿ ಹಾಕಿದ್ದಾರೆ. ಬಹುತೇಕ ಪ್ರಾಥಮಿಕ ಚಟುವಟಿಕೆಗಳು ಮುಗಿದ ನಂತರ ಮುಗ್ಧ ಗ್ರಾಮಸ್ಥರನ್ನು ದಿಕ್ಕು ತಪ್ಪಿಸುತ್ತಿರುವ ಕೆಲವು ಕಾಣದ ಕೈಗಳು ತಾಲೂಕಿಗೆ, ತಾಲೂಕಿನ ಜನರಿಗೆ ಅನುಕೂಲವಾಗುವ ಅವಕಾಶ ತಪ್ಪಿಸುವ ಹಿಂದೆ ಯಾರ, ಯಾವ ಉದ್ದೇಶವಿದೆ ಎಂದು ಸ್ಪಷ್ಟವಾಗುವುದಿಲ್ಲ ಎಂದು ನಾಯ್ಕ ಬೇಸರ ವ್ಯಕ್ತಪಡಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಹಿತೇಂದ್ರ ನಾಯ್ಕ ಜನಪರ ಶಾಸಕರು, ರೈತ ಮುಖಂಡರ ತೇಜೋವಧೆ ಮಾಡುತಿದ್ದಾರೆ. ಯಾರದೋ ಕೈಗೊಂಬೆಯಾಗಿ ತಾಲೂಕಿನ ಅಭಿವೃದ್ಧಿಗೆ ಪೂರಕವಾದ ತಾಲೂಕಾ ಕೈಗಾರಿಕಾ ಪ್ರದೇಶ ಸ್ಥಾಪನೆ ವಿರೋಧಿಸುವ ಹಿತೇಂದ್ರ ನಾಯ್ಕರ ಶಿಕ್ಷಣ, ನೈತಿಕತೆ ಯಾವ ಮಟ್ಟದ್ದು ಎಂದು ಜನತೆ ಅರಿತು ಅವರನ್ನು ಸಮಾಜ ದೂರವಿಡದಿದ್ದರೆ ಮುಂದೆ ತಾಲೂಕು ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *