ಟ್ರೋಲ್ಸ್ ಗೆ ಬಗ್ಗುವ ಮಧು ಬಂಗಾರಪ್ಪ ನಾನಲ್ಲ’: ಶಿಕ್ಷಣ ಸಚಿವ ಗರಂ

ನಾನು ಹೇಳಿರೋದು ಪ್ರಿನ್ಸಿಪಾಲ್, ಬಿಇಒ ವಿರುದ್ಧ ಕ್ರಮ ತಗೊಳ್ಳಿ ಅಂತ, ಟ್ರೋಲ್ಸ್ ಗೆ ಬಗ್ಗುವ ಮಧು ಬಂಗಾರಪ್ಪ ನಾನಲ್ಲ’: ಶಿಕ್ಷಣ ಸಚಿವ ಗರಂ

ನೀಟ್ ಕೋಚಿಂಗ್ ತರಬೇತಿ ಉದ್ಘಾಟನೆ ನಂತರ ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ವಿದ್ಯಾಮಂತ್ರಿಗಳಿಗೆ ಕನ್ನಡ ಸರಿಯಾಗಿ ಬರಲ್ಲ ಎಂದು ಹೇಳಿದನು.

Madhu Bangarappa

ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ವಿದ್ಯಾರ್ಥಿಯೊಬ್ಬ ನೇರವಾಗಿ ವಿದ್ಯಾಮಂತ್ರಿಗಳಿಗೆ ಕನ್ನಡ ಭಾಷೆ ಮಾತನಾಡಲು ಬರಲ್ಲ ಎಂದು ಹೇಳಿದ್ದು ಸಾಕಷ್ಟು ಸುದ್ದಿಯಾಯಿತು.

ನೀಟ್ ಕೋಚಿಂಗ್ ತರಬೇತಿ ಉದ್ಘಾಟನೆ ನಂತರ ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ವಿದ್ಯಾಮಂತ್ರಿಗಳಿಗೆ ಕನ್ನಡ ಸರಿಯಾಗಿ ಬರಲ್ಲ ಎಂದು ಹೇಳಿದನು. ಇದನ್ನು ಕೇಳಿಸಿಕೊಂಡ ಸಚಿವ ಮಧು ಬಂಗಾರಪ್ಪ ಗರಂ ಆಗಿ, ಯಾರೋ ಅದು ಹಾಗೆ ಹೇಳಿದ್ದು, ಈ ವಿಷಯಾನ ಗಂಭೀರವಾಗಿ ತಗೊಳ್ಬೇಕು, ಯಾರು ಅಂತ ಫೈಂಡ್ ಔಟ್ ಮಾಡಿ ಕ್ರಮ ತಗೊಳ್ಳಿ ಎಂದು ಪಕ್ಕದಲ್ಲಿ ಕುಳಿತಿದ್ದ ಅಧಿಕಾರಿಗಳಿಗೆ ಹೇಳಿದರು. ಈ ವಿಡಿಯೊ ಸಾಕಷ್ಟು ವೈರಲ್ ಆಗಿ ಶಿಕ್ಷಣ ಸಚಿವರ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

Madhu Bangarappa

ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳು ಸಚಿವರನ್ನು ಪ್ರಶ್ನಿಸಿದಾಗ ಮತ್ತೆ ಗರಂ ಆಗಿಯೇ ಪ್ರತಿಕ್ರಿಯಿಸಿದರು. ನಾನು ಟ್ರೋಲ್ ಗಳನ್ನು ನೋಡಿದೆ, ಟ್ರೋಲ್ ಗಳಿಗೆ ಐ ಡೋಂಟ್ ಕೇರ್, ಟ್ರೋಲ್ ಮಾಡೋರಿಗೆ ಉದ್ಯೋಗ ಇಲ್ಲ, ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳೋ ಮಧು ಬಂಗಾರಪ್ಪ ನಾನಲ್ಲ, ನಾನೊಬ್ಬ ಶಿಕ್ಷಣ ಸಚಿವ, ಅಲ್ಲಿ ವಿದ್ಯಾರ್ಥಿ ತಪ್ಪು ಮಾತನಾಡಲು ಶಾಲೆಯ ಉಪನ್ಯಾಸಕರು, ಪ್ರಾಂಶುಪಾಲರು ಬಿಡಬಾರದಿತ್ತು ಎಂದರು.

ಪ್ರಾಂಶುಪಾಲರು, ಬಿಇಒ ಮೇಲೆ ಕ್ರಮ ಕೈಗೊಳ್ಳಿ ಎಂದಿದ್ದೆ: ನಾನು ವಿದ್ಯಾರ್ಥಿ ಮೇಲೆ ಕ್ರಮ ಕೈಗೊಳ್ಳಿ ಎಂದು ಎಲ್ಲಿ ಹೇಳಿದ್ದೆ, ನಾನು ಹೇಳಿರೋದು ಹೆಡ್ ಮಾಸ್ಟರ್, ಬಿಇಒ ಮೇಲೆ, ಅವರು ಜವಾಬ್ದಾರಿ ತೆಗೆದುಕೊಳ್ಳಬೇಕು, ವಿದ್ಯಾರ್ಥಿ ಮೇಲೆ ಕ್ರಮ ತಗೊಳ್ಳೋಕೆ ನನಗೇನು ಅಧಿಕಾರ ಇದೆ, ಪ್ರಾಂಶುಪಾಲರು, ಉಪನ್ಯಾಸಕರು ಮಕ್ಕಳನ್ನು ಹತೋಟಿಯಲ್ಲಿಡಬೇಕು, ಅಂದು 640 ಶಾಲೆಗಳು ಲೈವ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. 50 ಸಾವಿರ ಮಕ್ಕಳು ಲೈವ್ ಲ್ಲಿ ನೋಡುತ್ತಿದ್ದರು. ಸರ್ಕಾರದಿಂದ ಮಕ್ಕಳ ಭವಿಷ್ಯಕ್ಕೆ ಮಾಡುತ್ತಿರುವ ಒಂದು ದೊಡ್ಡ ಯೋಜನೆಯದು. ಆ ಯೋಜನೆ ಬಗ್ಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡುವ ಬದಲು ಯಾರೋ ಒಬ್ಬ ವಿದ್ಯಾರ್ಥಿ ವಿದ್ಯಾ ಮಂತ್ರಿಗೆ ಕನ್ನಡ ಮಾತನಾಡಲು ಬರೋದಿಲ್ಲ ಎಂದು ಹೇಳಿದ್ದನ್ನೇ ಹೈಲೈಟ್ ಮಾಡ್ತೀರ, ನಿಮ್ಮ ಮಕ್ಕಳು ಈ ರೀತಿ ಮಾಡಿದ್ದರೆ ಮನೆಯಲ್ಲಿ ಬುದ್ದಿ ಹೇಳುತ್ತಿರಲಿಲ್ಲವೇ, ನಾನಾದ್ರೆ ನನ್ನ ಮಗನಿಗೆ ಬುದ್ದಿ ಹೇಳುತ್ತಿದ್ದೆ ಎಂದು ಗರಂ ಆದರು.

video

ಪದೇ ಪದೇ ಈ ರೀತಿ ನನಗೆ ಕನ್ನಡ ಬರೋದಿಲ್ಲ ಎಂದು ಹೇಳೋದನ್ನು ನಿಲ್ಲಿಸಬೇಕು, ನನಗೆ ಸರ್ಕಾರದಲ್ಲಿ ಜವಾಬ್ದಾರಿಯುತ ಶಿಕ್ಷಣ ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ನೀವು ಪುಕ್ಸಟೆ ಟ್ರೋಲ್ ಮಾಡಿದ್ರೆ ನನಗೇನಾಗ್ಬೇಕಾಗಿದೆ, ಮಧು ಬಂಗಾರಪ್ಪ ಮಧು ಬಂಗಾರಪ್ಪನೇ ಆಗಿರ್ತಾನೆ, ವಿಪಕ್ಷದವರು ಯಾರು ಏನೇ ಟೀಕೆ ಮಾಡಿದ್ರೂ ಐ ಡೋಂಟ್ ಕೇರ್, ನಿನ್ನೆ ಬಸವರಾಜ ಹೊರಟ್ಟಿಯವರು ನನಗೆ ಫೋನ್ ಮಾಡಿ ಕರೆಕ್ಟ್ ಮಾಡಿದ್ದೀಯ ಮಧು ಎಂದರು. ನಾನು ನನ್ನ ಅಧಿಕಾರವನ್ನು ಇಲ್ಲಿ ಚಲಾಯಿಸಿದ್ದೇನೆ ಎಂದು ಹೇಳಿದರು.

ನಾನು ನನ್ನ ಮಗನನ್ನು ಎಷ್ಟು ಜವಾಬ್ದಾರಿ, ಪ್ರೀತಿಯಿಂದ ನೋಡಿಕೊಳ್ಳುತ್ತೇನೆಯೋ ಅಷ್ಟೇ ಪ್ರೀತಿ, ಕಾಳಜಿಯನ್ನು ಈ ರಾಜ್ಯದ ಮಕ್ಕಳ ಮೇಲೆ ಸಹ ತೋರಿಸುತ್ತೇನೆ. ಅವರನ್ನು ದೇವರ ಸ್ಥಾನದಲ್ಲಿ ನೋಡುತ್ತೇನೆ, ಟ್ರೋಲ್ ಮಾಡಿ ನನ್ನನ್ನು ಬಗ್ಗಿಸಲು ಯಾರಿಗೂ ಸಾಧ್ಯವಿಲ್ಲ ಎಂದರು. (kp.c)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *