ನೀರಿಂಗಿಸುವ ಸ್ಥಳೀಯ ಜ್ಞಾನಕ್ಕೆ ಆದ್ಯತೆಗೆ ಸಲಹೆ

ಜಿಲ್ಲಾಧಿಕಾರಿಗಳಿಂದ ಪ್ರಗತಿ ಪರಿಶೀಲನೆ

ಕೇವಲ ಕೆರೆಗಳ ಅಭಿವೃದ್ಧಿ ಮಾಡುವುದು ಮಾತ್ರವಲ್ಲ. ನೀರಿನ ಮೂಲದ ಸಂರಕ್ಷಣೆ, ಪುನರುಜ್ಜೀವನ, ಜಲ ರಕ್ಷಣೆ ಜನಜಾಗೃತಿ, ಹಸಿರೀಕರಣ ಮುಂತಾದವು ಇದರ ಹಿಂದಿನ ಉದ್ದೇಶ. ಇದರ ಜೊತೆಗೆ ನದಿಮೂಲದ ಸಂರಕ್ಷಣೆಗೂ ಗಮನ ನೀಡಬೇಕಿದೆ ಎಂದು ಜಿಲ್ಲಾಧಿಕಾರಿ ಡಾ|ಹರೀಶಕುಮಾರ ಹೇಳಿದರು.
ಅವರು ಸೋಮವಾರ ಸಂಜೆ ತಾಪಂ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.


ತಾಪಂ ಕಾರ್ಯನಿರ್ವಹಣಾಧಿಕಾರಿ ಬಳಿ ಕೆರೆಗಳ ಅಭಿವೃದ್ಧಿ ಕುರಿತಂತೆ ಪ್ರಶ್ನಿಸಿದಾಗ ಅವರ ಉತ್ತರಕ್ಕೆ ಪ್ರತಿಕ್ರಿಯಿಸಿ ಈಗಾಗಲೇ ರೇಲ್ವೆ, ವಿದ್ಯುತ್ ತಂತಿ ಮಾರ್ಗ, ರಸ್ತೆ ಮುಂತಾಗಿ ಹಲವು ಕಾರಣಗಳಿಂದ ಅರಣ್ಯ ಕಡಿಮೆಯಾಗುತ್ತಿದೆ. ಮರಗಿಡಗಳನ್ನು ಹೆಚ್ಚಿಸುವ ಕೆಲಸವಾಗಬೇಕು. ರೆವಿನ್ಯೂ ಜಾಗಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕಿದೆ. ಪದೇ ಪದೇ ಬೋರ್‍ವೆಲ್ ತೆಗೆಸುವ ಬದಲು ಇರುವ ಬೋರ್ ಗಳಿಗೆ ನೀರಿಂಗಿಸುವಂತಾಗಬೇಕು. ಸ್ಥಳೀಯವಾಗಿ ವಯಸ್ಸಾದವರಿಂದ ಅವರ ತಿಳುವಳಿಕೆ ಬಳಸಿಕೊಂಡು ಜಲಮೂಲ ಉಳಿಸುವ ಕೆಲಸಮಾಡಿ. ಬೆಂಗಳೂರಿನಲ್ಲಿ ಕೂತವರು ಇವನ್ನ ರೂಪಿಸಬೇಕೆಂದಿಲ್ಲ. ಯಾವುದು ಇಲ್ಲಿ ಉಪಯೋಗವಾಗುತ್ತದೋ ಅದನ್ನು ಮಾಡಿ. ಸರಕಾರಿ ಕಚೇರಿಗಳ ಬಾವಿಗಳಲ್ಲೂ ನೀರಿಂಗಿಸುವ ವ್ಯವಸ್ಥೆ ಮಾಡಿ ಎಂದರು.


ತಾಲೂಕಿನಲ್ಲಿ ಮಂಗನ ಕಾಯಿಲೆ ಸಂಪೂರ್ಣವಾಗಿ ಕಡಿಮೆಯಾಗಿದೆ ಎಂದು ತಾಲೂಕ ಆರೋಗ್ಯಾಧಿಕಾರಿಯಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಮಂಗನ ಕಾಯಿಲೆಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವದು ಅಗತ್ಯ. ರೋಗ ಬಂದನಂತರದ ಕ್ರಮಕ್ಕಿಂತ ಮುಂಚಿತವಾಗಿ ಅದನ್ನು ನಿಯಂತ್ರಿಸಲು ಮುಂದಾಗಬೇಕು. ಸಪ್ಟೆಂಬರ ತಿಂಗಳಿಂದ ಸಮರೋಪಾದಿಯಲ್ಲಿ ರೋಗ ತಡೆಗಟ್ಟುವ ಚುಚ್ಚುಮದ್ದು ನೀಡಲು ಸಿದ್ಧತೆ ಮಾಡಿ. ಅದಕ್ಕೆ ಅಗತ್ಯವಾದ ಔಷಧಗಳ ಬಗ್ಗೆ ಮಾಹಿತಿ ನೀಡಿದರೆ ಪೂರೈಕೆ ವ್ಯವಸ್ಥೆಗೆ ಅನುಕೂಲವಾಗುತ್ತದೆ ಎಂದರು.

ಅಡಕೆ, ಭತ್ತ ಇನ್ನಿತರ ಬೆಳೆಗಳ ಹಾನಿ ಬಗ್ಗೆ ಸಮೀಕ್ಷೆ ಮಾಡಿ. ಅಡಕೆ ಕೊಳೆ ರೋಗದ ಬಗ್ಗೆ ಅದು ಕಂಡುಬಂದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಿದ್ಧಪಡಿಸಿಟ್ಟುಕೊಳ್ಳಿ ಎಂದು ಕೃಷಿ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಲೋಕೋಪಯೋಗಿ, ಅರಣ್ಯ,ಪಟ್ಟಣ ಪಂಚಾಯತ ಮುಂತಾಗಿ ಹಲವು ಇಲಾಖೆಗಳ ಪ್ರಗತಿಯ ವಿವರ ಪಡೆದರು.
ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ, ತಹಸೀಲದಾರ ಗೀತಾ ಸಿ.ಜಿ.ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *