ಮತ್ತೆ ಬೆಳಕಿಗೆ ಬಂದ ನಿತ್ಯಾನಂದ ಗೌಡ

ಸಿದ್ಧಾಪುರದಲ್ಲಿ ಹೆಸರುಮಾಡಿ, ಆರೋಪ,ಆಪಾದನೆಗಳಿಗೆ ಗುರಿಯಾಗಿ ವರ್ಗಾವಣೆಯಾಗಿದ್ದ ಪಿ.ಎಸ್.ಐ. ನಿತ್ಯಾನಂದ ಗೌಡ ಮತ್ತೆ ಸುದ್ದಿಯಾಗಿದ್ದಾರೆ.
ಕಳೆದ ವಾರ ಕೋಟ ಪೊಲೀಸ್ ಠಾಣೆಯಿಂದ ಅಕ್ರಮ ಜಾನುವಾರು ಸಾಗಾಣಿಕೆ ಪ್ರಕರಣ ಭೇದಿಸಿ, ಇಲಾಖೆಯ ಅಧೀನ ಸಿಬ್ಬಂದಿಗಳ ಅಮಾನತ್ತಿಗೆ ಕಾರಣವಾದವರು ಬೇರೆ ಯಾರೂ ಅಲ್ಲ. ಅದೇ ಸಿದ್ಧಾಪುರದ ಹಳೆ ಪಿ.ಎಸ್.ಐ. ನಿತ್ಯಾನಂದ ಗೌಡ.
ನಿತ್ಯಾನಂದ ಗೌಡ ಜನರು, ಜನಪ್ರತಿನಿಧಿಗಳೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಾರೆ ಎನ್ನುವ ಗುರುತರವಾದ ಆಪಾದನೆ ಮೇಲೆ ಇಲ್ಲಿಂದ ವರ್ಗಾವಣೆಯಾದವರು.
ಮರಳಿ ದಕ್ಷಿಣ ಕನ್ನಡಕ್ಕೆ ಅಕಾಲದಲ್ಲಿ ತೆರಳಿದ್ದ ನಿತ್ಯಾನಂದ ಗೌಡ ನಿಜಕ್ಕೂ ಇಲ್ಲಿಯ ಆರೋಪಕ್ಕೆ ಗುರಿಯಾದಂತೆ ಅಪ್ರಾಮಾಣಿಕರೋ, ಗರ್ವಿಯೋ ಬೇರೆ ವಿಚಾರ. ಆದರೆ ಈಗಿನ ಜಾನುವಾರು ಸಾಗಾಟ ಪ್ರಕರಣದಲ್ಲಿ ಪೊಲೀಸರ ಶಾಮೀಲಾತಿ ಭೇದಿಸಿರುವ ಪ್ರಕರಣದಲ್ಲಿ ನಾಲ್ಕೈದು ಪೇದೆಗಳು ಅಮಾನತ್ತಾಗುವಲ್ಲಿ ಶ್ರಮಿಸಿದವರು ನಿತ್ಯಾನಂದ ಗೌಡ.
ನಿತ್ಯಾನಂದ ಗೌಡರ ತನಿಖೆಯಿಂದ ಮಲೆನಾಡು,ಕರಾವಳಿಯಲ್ಲಿ ಸಾಗಿಸಲಾಗುತಿದ್ದ ಜಾನುವಾರು ಅಕ್ರಮ ದಂಧೆಗೆ ಪೊಲೀಸರೇ ನೆರವಾಗಿರುವುದನ್ನು ಭೇದಿಸಿದ ಪಿ.ಎಸ್.ಐ. ನಿತ್ಯಾನಂದ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಪ್ರಶಂಸೆ ಕೇಳಿ ಬಂದಿದೆ. ಇದೇ ವೇಳೆ ಪೊಲೀಸರು ಜಾನುವಾರು ಸಾಗಾಟ, ಕೋಮುಗಲಭೆಗಳಿಗೆ ಪರೋಕ್ಷವಾಗಿ ಬೆಂಬಲಿಸುವ ಸತ್ಯ ಹೊರಹಾಕಿರುವ ಬಗ್ಗೆ ಅವರಿಗೆ ಶ್ಲಾಘನೆ ದೊರೆತಿದೆ.
ನಿತ್ಯಾನಂದ ಗೌಡ ಕೋಮುವಾದಿಯೋ? ಬ್ರಷ್ಟರೋ ಸತ್ಯ ಯಾರಿಗೂ ಸ್ಫಷ್ಟವಿಲ್ಲ. ಆದರೆ ಅವರ ದಕ್ಷತೆಗೆ ಮಾತ್ರ ಆಗಾಗ ಪ್ರಶಂಸೆ ವ್ಯಕ್ತವಾಗುತ್ತಿರುವುದು ವಾಸ್ತವ. ಸಿದ್ಧಾಪುರದಲ್ಲಿ ಹೆಸರು ಮಾಡಿದ್ದ ನಿತ್ಯಾನಂದ ಗೌಡ ಮತ್ತು ಸಿ.ಪಿ.ಐ. ಜೊಯ್ ಅಂಥೋನಿ ಇಲ್ಲಿಂದ ಆಪಾದನೆ ಹೊತ್ತು ವರ್ಗಾವಣೆಯಾಗಿರುವುದು ಮಾತ್ರ ಮರೆಯದ ದುರಂತ.
ಜಿಲ್ಲಾಧಿಕಾರಿಗಳಿಂದ ಪ್ರಗತಿ ಪರಿಶೀಲನೆ
ನೀರಿಂಗಿಸುವ ಸ್ಥಳೀಯ ಜ್ಞಾನಕ್ಕೆ ಆದ್ಯತೆಗೆ ಸಲಹೆ

ಕೇವಲ ಕೆರೆಗಳ ಅಭಿವೃದ್ಧಿ ಮಾಡುವುದು ಮಾತ್ರವಲ್ಲ. ನೀರಿನ ಮೂಲದ ಸಂರಕ್ಷಣೆ, ಪುನರುಜ್ಜೀವನ, ಜಲ ರಕ್ಷಣೆ ಜನಜಾಗೃತಿ, ಹಸಿರೀಕರಣ ಮುಂತಾದವು ಇದರ ಹಿಂದಿನ ಉದ್ದೇಶ. ಇದರ ಜೊತೆಗೆ ನದಿಮೂಲದ ಸಂರಕ್ಷಣೆಗೂ ಗಮನ ನೀಡಬೇಕಿದೆ ಎಂದು ಜಿಲ್ಲಾಧಿಕಾರಿ ಡಾ|ಹರೀಶಕುಮಾರ ಹೇಳಿದರು.
ಅವರು ಸೋಮವಾರ ಸಂಜೆ ತಾಪಂ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ತಾಪಂ ಕಾರ್ಯನಿರ್ವಹಣಾಧಿಕಾರಿ ಬಳಿ ಕೆರೆಗಳ ಅಭಿವೃದ್ಧಿ ಕುರಿತಂತೆ ಪ್ರಶ್ನಿಸಿದಾಗ ಅವರ ಉತ್ತರಕ್ಕೆ ಪ್ರತಿಕ್ರಿಯಿಸಿ ಈಗಾಗಲೇ ರೇಲ್ವೆ, ವಿದ್ಯುತ್ ತಂತಿ ಮಾರ್ಗ, ರಸ್ತೆ ಮುಂತಾಗಿ ಹಲವು ಕಾರಣಗಳಿಂದ ಅರಣ್ಯ ಕಡಿಮೆಯಾಗುತ್ತಿದೆ. ಮರಗಿಡಗಳನ್ನು ಹೆಚ್ಚಿಸುವ ಕೆಲಸವಾಗಬೇಕು. ರೆವಿನ್ಯೂ ಜಾಗಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕಿದೆ. ಪದೇ ಪದೇ ಬೋರ್‍ವೆಲ್ ತೆಗೆಸುವ ಬದಲು ಇರುವ ಬೋರ್ ಗಳಿಗೆ ನೀರಿಂಗಿಸುವಂತಾಗಬೇಕು. ಸ್ಥಳೀಯವಾಗಿ ವಯಸ್ಸಾದವರಿಂದ ಅವರ ತಿಳುವಳಿಕೆ ಬಳಸಿಕೊಂಡು ಜಲಮೂಲ ಉಳಿಸುವ ಕೆಲಸಮಾಡಿ. ಬೆಂಗಳೂರಿನಲ್ಲಿ ಕೂತವರು ಇವನ್ನ ರೂಪಿಸಬೇಕೆಂದಿಲ್ಲ. ಯಾವುದು ಇಲ್ಲಿ ಉಪಯೋಗವಾಗುತ್ತದೋ ಅದನ್ನು ಮಾಡಿ. ಸರಕಾರಿ ಕಚೇರಿಗಳ ಬಾವಿಗಳಲ್ಲೂ ನೀರಿಂಗಿಸುವ ವ್ಯವಸ್ಥೆ ಮಾಡಿ ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *