ಯಾವುದೇ ಮೀನುಗಾರನ ಮೇಲೆ ಹಲ್ಲೆ ನಡೆದಿಲ್ಲ: ಭಾರತೀಯ ನೌಕಾಪಡೆ… karwar incident

ಕಾರಿನಲ್ಲಿ ಒಬ್ಬ ನಾವಿಕನನ್ನು ಅಪಹರಿಸಿಲಾಗಿತ್ತು. ಆದರೆ ಬೆನ್ನಟ್ಟಿದ ಅವರ ಸಹೋದ್ಯೋಗಿಗಳು ರಕ್ಷಿಸಿದ್ದಾರೆ ಎಂದು ನೌಕಾಪಡೆ ಆರೋಪಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಕಾರವಾರ: ಇಬ್ಬರು ನೌಕಾಪಡೆ ಸಿಬ್ಬಂದಿಯ ವಾಹನ ಮೀನುಗಾರರ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಮೀನುಗಾರರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಭಾರತೀಯ ನೌಕಾಪಡೆ ಸ್ಪಷ್ಟವಾಗಿ ತಳ್ಳಿಹಾಕಿದೆ.

ಕಾರಿನಲ್ಲಿ ಒಬ್ಬ ನಾವಿಕನನ್ನು ಅಪಹರಿಸಿಲಾಗಿತ್ತು. ಆದರೆ ಬೆನ್ನಟ್ಟಿದ ಅವರ ಸಹೋದ್ಯೋಗಿಗಳು ರಕ್ಷಿಸಿದ್ದಾರೆ ಎಂದು ನೌಕಾಪಡೆ ಆರೋಪಿಸಿದೆ. ಈಗ, ಉತ್ತರ ಕನ್ನಡ ಜಿಲ್ಲಾ ಪೊಲೀಸರು ಘಟನೆಯ ಬಗ್ಗೆ ನೌಕಾಪಡೆಯ ಉನ್ನತ ಅಧಿಕಾರಿಗಳಿಗೆ ಪತ್ರ ಬರೆಯಲು ಯೋಜಿಸಿದ್ದು, ಘಟನೆಯಲ್ಲಿ ಮೀನುಗಾರರು ಮತ್ತು ಐಎನ್ಎಸ್ ಕದಂಬ ಸಿಬ್ಬಂದಿ ಭಾಗಿಯಾಗಿದ್ದಾರೆ.

ಕಾರವಾರ ಬಳಿಯ ಮುದ್ಗಾದಲ್ಲಿ ಭಾನುವಾರ ನಡೆದ ಅಪಘಾತದಲ್ಲಿ ಇಬ್ಬರು ನೌಕಾಪಡೆ ಸಿಬ್ಬಂದಿ ತೆರಳುತ್ತಿದ್ದ ಬೈಕ್‌, ಶ್ರೀನಿವಾಸ್(50) ಎಂಬ ಮೀನುಗಾರನ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ಎರಡೂ ಕಡೆಯವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಾವಿಕರು ಗಾಯಗೊಂಡ ಮೀನುಗಾರನಿಗೆ ಸಹಾಯ ಮಾಡಿದರು. ಆದರೆ ನಂತರ ಘಟನೆ ಗಂಭೀರ ಸ್ವರೂಪ ಪಡೆದಿದ್ದು, ಕಾರವಾರ ಗ್ರಾಮೀಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

“ನಾವಿಕರು, ಗಾಯಗೊಂಡ ಮೀನುಗಾರನನ್ನು ಪಿಕಳೆ ನರ್ಸಿಂಗ್ ಹೋಂಗೆ ಕರೆದೊಯ್ದ, ಸಕಾಲಿಕ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ…. ಆದರೆ ಅಪಘಾತದ ಸ್ವಲ್ಪ ಸಮಯದ ನಂತರ, 4-5 ನಾಗರಿಕರು ಒಟ್ಟುಗೂಡಿದರು ಮತ್ತು ಪರಿಸ್ಥಿತಿಯನ್ನು ಶಾಂತಗೊಳಿಸಲು ನಾವಿಕರು ಮಾಡಿದ ಪ್ರಯತ್ನಗಳ ಹೊರತಾಗಿಯೂ, ಒಂದು ಸಣ್ಣ ಜಗಳ ನಡೆಯಿತು” ಎಂದು ನಾವಿಕರು ದೂರು ದಾಖಲಿಸಿದ್ದಾರೆ.

“ನಾವು ಸ್ಥಳದಿಂದ ಹೊರಟೆವು, ಆದರೆ ನಾಗರಿಕರು ನಮ್ಮನ್ನು ಹಿಂಬಾಲಿಸಿದರು ಮತ್ತು ಹೆಚ್ಚುವರಿ 50,000 ರೂ. ಪರಿಹಾರ ಕೇಳಿದರು. ನಂತರ ನನ್ನ ಸ್ನೇಹಿತನನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿ ಅಮದಳ್ಳಿ ಕಡೆಗೆ ಕರೆದೊಯ್ಯಲಾಯಿತು. ನಾವು ಅವರ ವಾಹನವನ್ನು ತಡೆದು ಸಹೋದ್ಯೋಗಿಯನ್ನು ರಕ್ಷಿಸಿದೆವು” ಎಂದು ದೂರುದಾರ ಯೋಗೇಶ್ ಕುಮಾರ್ ಹೇಳಿದ್ದಾರೆ.

ನೌಕಾಪಡೆ, ಮೀನುಗಾರರ ನಡುವೆ ಸಮನ್ವಯ ಸಭೆ?

“ನಾಗರಿಕರು ವಾಹನವನ್ನು ಬಿಟ್ಟು ಓಡಿಹೋದರು. ಘಟನೆಯನ್ನು ನೌಕಾ ಪೊಲೀಸರ ಮೂಲಕ ಸ್ಥಳೀಯ ಪೊಲೀಸರಿಗೆ ತಕ್ಷಣ ವರದಿ ಮಾಡಲಾಯಿತು ಮತ್ತು ವಾಹನದ ಕೀಯನ್ನು ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು” ಎಂದು ದೂರುದಾರರು ತಿಳಿಸಿದ್ದಾರೆ.

ವಿಷಯ ಇಲ್ಲಿಗೆ ಮುಗಿಯಲಿಲ್ಲ. ಸೋಮವಾರ ಬೆಳಗ್ಗೆ, ಅಮದಳ್ಳಿಯ ಗ್ರಾಮಸ್ಥರ ಗುಂಪೊಂದು ಪ್ರತಿಭಟನೆ ನಡೆಸಿ NCHC ಅಮದಳ್ಳಿಯ ಗೇಟ್ ಅನ್ನು ಬಂದ್ ಮಾಡಿದರು.

“ಪ್ರತಿಭಟನಾಕಾರರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸ್ಥಳೀಯ ಆಡಳಿತ ಮತ್ತು ಪೊಲೀಸರು ಪರಿಸ್ಥಿತಿಯನ್ನು ಸರಿಪಡಿಸಿದರು. ನೌಕಾ ನೆಲೆ ಕಾರವಾರದ ಹಿರಿಯ ನೌಕಾ ಸಿಬ್ಬಂದಿ, ಸ್ಥಳೀಯ ತಹಶೀಲ್ದಾರ್ ಮತ್ತು ಉಪ ಎಸ್ಪಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಮಧ್ಯಾಹ್ನ 12.45 ರ ಹೊತ್ತಿಗೆ ಪರಿಸ್ಥಿತಿಯನ್ನು ಶಾಂತಗೊಳಿಸಿದರು” ಎಂದು ನೌಕಾಪಡೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ನೌಕಾಪಡೆಯ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನೌಕಾಪಡೆಯ ಉನ್ನತ ಅಧಿಕಾರಿಗಳಿಗೆ ಪತ್ರ ಬರೆಯುವ ಬಗ್ಗೆ ಯೋಚಿಸುತ್ತಿದ್ದಾರೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎಸ್‌ಪಿ ನಾರಾಯಣ್ ಅವರು ಮೀನುಗಾರರು ಮತ್ತು ನೌಕಾಪಡೆ ಅಧಿಕಾರಿಗಳ ನಡುವೆ ಸಮನ್ವಯ ಸಭೆ ನಡೆಸುವ ಸಾಧ್ಯತೆ ಇದೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *