ಸಹಿಷ್ಣುತೆ, ಸಮಾನತೆ, ಸೌಹಾರ್ದತೆಯೇ ಮಾಚಿದೇವರ ಮೌಲ್ಯಗಳು

ಸಮಾನತೆ, ಸಹಿಷ್ಣುತೆ,ಸೌಹಾರ್ದತೆಯಿಂದ ಎಲ್ಲರೊಳಗೊಂದಾಗಿ ಬಾಳುವ ಜಾತ್ಯಾತೀತತೆ ಅಳವಡಿಸಿಕೊಂಡರೆ ನಾವು ಮಡಿವಾಳ ಮಾಚಿದೇವರನ್ನು ಗೌರವಿಸಿದಂತೆ ಎಂದು ಕೋಲಶಿರ್ಸಿ ಪ.ಪೂ. ಕಾಲೇಜಿನ ಉಪನ್ಯಾಸಕ ಮಂಜಪ್ಪ ಎಂ.ಜಿ. ಹೇಳಿದರು. ಅವರು ಸಿದ್ಧಾಪುರ ತಹಸಿಲ್ಧಾರರ ಕಛೇರಿ ಸಭಾಂಗಣದಲ್ಲಿ ತಾಲೂಕಾ ಆಡಳಿತ ಮತ್ತು ತಾಲೂಕಾ ಮಡಿವಾಳ ಸಮಾಜದ ಸಂಘ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಿಶೇಶ ಉಪನ್ಯಾಸ ನೀಡಿದರು. ಈ ಜಯಂತಿ ಅಂಗವಾಗಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತಾ.ಪಂ. ಕಾ.ನಿ.ಅ. ದೇವರಾಜ್‌ ಹಿತ್ತಲಕೊಪ್ಪ ಮಾತನಾಡಿ ಎಲ್ಲಾ ಸಮಾಜದವರನ್ನೂ ಒಗ್ಗೂಡಿಸಿ ಮಾಡುವ ಇಂಥ ಕಾರ್ಯಕ್ರಮಗಳಿಂದ ಪರಸ್ಪರರು ಸಮಾಜದ ಗುರುಗಳ ಬಗ್ಗೆ ಅರಿಯಲು ಸಾಧ್ಯ ಇದರಿಂದ ಸೌಹಾರ್ದತೆ ಹೆಚ್ಚುತ್ತದೆ ಎಂದು ಪ್ರತಿಪಾದಿಸಿದರು.

ನಾಮಧಾರಿ ಸಮಾಜದ ಪರವಾಗಿ ಸನ್ಮಾನ ಸ್ವೀಕರಿಸಿದ ತಾಲೂಕಾ ಗ್ಯಾರಂಟಿ ಅನುಷ್ಠಾನ ಸಮೀತಿ ಅಧ್ಯಕ್ಷ ನಾಗರಾಜ್‌ ಕೆ.ಜಿ. ಮಾತನಾಡಿ ವಚನಗಳ ಸಂರಕ್ಷಣೆ ಮೂಲಕ ಬಸವಣ್ಣನ ಜ್ಞಾನಭಂಡಾರ ಉಳಿಸಿ ಕೊಟ್ಟ ಮಡಿವಾಳ ಮಾಚಿದೇವ ಇತರ ಸಮಾಜಕ್ಕೂ ಮಾದರಿ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ತಹಸಿಲ್ಧಾರ ಎಂ.ಆರ್.‌ ಕುಲಕರ್ಣಿ ಸಮಾನತೆ, ಮೌಢ್ಯ ವಿರೋಧಕ್ಕಾಗಿ ಬದುಕನ್ನೇ ಪಣಕ್ಕಿಟ್ಟ ಮಡಿವಾಳ ಮಾಚಿದೇವ ಪವಾಡಪುರುಷ ಎಂದರು.

ತಾಲೂಕಾ ಮಡಿವಾಳ ಸಮಾಜದ ಅಧ್ಯಕ್ಷ ಪಿ.ಬಿ.ಹೊಸೂರು ಅಧ್ಯಕ್ಷತೆ ವಹಿಸಿದ್ದರು. ಸಂಗೀತಾ ಭಟ್ಟ ಸ್ವಾಗತಿಸಿದರು. ಗ್ರೇಡ್‌ ೨ ತಹಸಿಲ್ಧಾರ ಶ್ಯಾಮಸುಂದರ್‌ ಜಿ.ಎಲ್.‌ ನಿರೂಪಿಸಿದರು. ಕೃಷ್ಣಮೂರ್ತಿ ಕಡಕೇರಿ, ವಿಶ್ವಗೌಡ ಇಟಗಿ, ಕೆ.ಟಿ. ಹೊನ್ನೆಗುಂಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *